Homeಮುಖಪುಟಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು...

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ತಮಿಳುನಾಡು ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿರುವ ಐದು ರಾಜ್ಯಗಳಾಗಿವೆ ಎಂದು ಕೇಂದ್ರ ಸರ್ಕರ ಶುಕ್ರವಾರ ತಿಳಿಸಿದೆ.

ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರನ್ನು 100% ತಪಾಸಣೆ ಮಾಡಲು ಫೆಬ್ರವರಿ 20 ರಿಂದ ಮಾರ್ಚ್ 31 ರವರೆಗೆ ಸಚಿವಾಲಯವು ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ

“ಈ ಅಭಿಯಾನವನ್ನು ದೇಶಾದ್ಯಂತ ಆಯುಷ್ಮಾನ್ ಆರೋಗ್ಯ ಮಂದಿರಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ ನಡೆಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)-ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ)ವನ್ನು ಉಲ್ಲೇಖಿಸಿದ ಅವರು, ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಇರುವ ಐದು ರಾಜ್ಯಗಳು ಉತ್ತರ ಪ್ರದೇಶ (2,10,958 ಪ್ರಕರಣಗಳು), ಮಹಾರಾಷ್ಟ್ರ (1,21,717), ಪಶ್ಚಿಮ ಬಂಗಾಳ (1,13,581), ಬಿಹಾರ (1,09,274) ಮತ್ತು ತಮಿಳುನಾಡು (93,536) ಎಂದು ಹೇಳಿದ್ದಾರೆ.

ICMR-NCRP ದತ್ತಾಂಶದ ಪ್ರಕಾರ, 2025 ರಲ್ಲಿ ದೇಶದಲ್ಲಿ ಅಂದಾಜು ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 15,69,793 ಎಂದು ಅವರು ಹೇಳಿದ್ದಾರೆ. ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC)ಯನ್ನು ಉಲ್ಲೇಖಿಸಿದ ಅವರು, 2040 ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು 22,18,694 ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

“ರೋಗ ಪತ್ತೆಗಾಗಿ ಸುಧಾರಿತ ರೋಗನಿರ್ಣಯ ತಂತ್ರಗಳ ಲಭ್ಯತೆ ಮತ್ತು ಅದು ಜನರ ಕೈಗೆಟುಕದಿರುವುದು, ಹೆಚ್ಚಿದ ಜೀವಿತಾವಧಿ, ವೃದ್ಧರ ಜನಸಂಖ್ಯೆಯ ಹೆಚ್ಚುತ್ತಿರುವುದು, ಹೆಚ್ಚಿನ ಆರೋಗ್ಯ ಪ್ರಜ್ಞೆ ಮತ್ತು ಸುಧಾರಿತ ಆರೋಗ್ಯ ಹುಡುಕಾಟ ನಡವಳಿಕೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲು ಕಾರಣ” ಎಂದು ICMR ಅನ್ನು ಉಲ್ಲೇಖಿಸಿ ಸಚಿವರು ಹೇಳಿದ್ದಾರೆ.

ಅಲ್ಲದೆ, ಕ್ಯಾನ್ಸರ್ ಸೇರಿದಂತೆ ಸಾಂಕ್ರಾಮಿಕವಲ್ಲದ ರೋಗಗಳಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಉದಾಹರಣೆಗೆ ತಂಬಾಕು ಮತ್ತು ಮದ್ಯ ಸೇವನೆ, ಸಾಕಷ್ಟು ದೈಹಿಕ ಚಟುವಟಿಕೆಗಳು ಇಲ್ಲದಿರುವುದು, ಅನಾರೋಗ್ಯಕರ ಆಹಾರ ಪದ್ಧತಿ, ಹೆಚ್ಚಿನ ಉಪ್ಪು, ಸಕ್ಕರೆ ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಸೇವನೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಕ್ಯಾನ್ಸರ್ ವೀಕ್ಷಣಾಲಯ, ಅಂತರರಾಷ್ಟ್ರೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (IARC) ಮಾಹಿತಿ ಪ್ರಕಾರ, ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಅಂದಾಜು ಪ್ರಮಾಣ 14,13,316 ಇದ್ದು, ವಿಶ್ವದಲ್ಲೆ ಅತೀ ಹೆಚ್ಚು ಕ್ಯಾನ್ಸರ್‌ ಇರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಭಾರತದ ಪ್ರತಿ 1 ಲಕ್ಷ ಜನರಲ್ಲಿ 98.5 ಜನರಿಗೆ ಕ್ಯಾನ್ಸರ್ ಇವೆ. ಮೊದಲ ಸ್ಥಾನದಲ್ಲಿ ಚೀನಾ ಇದ್ದು, ಇಲ್ಲಿನ 48,24,703 ಜನರಿಗೆ ಕ್ಯಾನ್ಸರ್‌ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 201.6 ಜನರಿಗೆ ಕ್ಯಾನ್ಸರ್ ಇವೆ. ಅಮೇರಿಕಾ 2ನೇ ಸ್ಥಾನದಲ್ಲಿದ್ದು, ಇಲ್ಲಿ 23,80,189 ಜನರಿಗೆ ಕ್ಯಾನ್ಸರ್ ಇದೆ. ಇಲ್ಲಿನ ಪ್ರತಿ 1 ಲಕ್ಷ ಜನರಲ್ಲಿ 367 ಜನರಿಗೆ ಕ್ಯಾನ್ಸರ್ ಇವೆ.

ICMR-NCRP ದತ್ತಾಂಶವನ್ನು ಉಲ್ಲೇಖಿಸಿದ ಸಚಿವರು, ಶ್ವಾಸಕೋಶ ಮತ್ತು ಸ್ತನದ ಕ್ಯಾನ್ಸರ್‌ ದೇಶದ ಪುರುಷರು ಮತ್ತು ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದೆ ಎಂದು ಹೇಳಿದ್ದಾರೆ. 2025-26 ರ ಬಜೆಟ್ ಘೋಷಣೆಯ ಪ್ರಕಾರ, ಭಾರತದಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ 200 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳನ್ನು (DCCCs) ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...