Homeಮುಖಪುಟಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ

ಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ

- Advertisement -
- Advertisement -

ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿ, ಮೂತ್ರ ಕುಡಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಚಪ್ಪಲಿಯಿಂದ ಹೊಡೆದಿದೆ. ಆ ವ್ಯಕ್ತಿ ಮತ್ತು ಅವನ ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪವನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಬಲಿಪಶುವಿನ ತಂದೆ ಮಹೇಶ್ ಸವಿತಾ ಅವರ ಪ್ರಕಾರ, ಅವರ ಮಗ ವಿಪಿನ್ ಮಾರುಕಟ್ಟೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಿಪಿನ್ ಅವರನ್ನು ಆರೋಪಿಯ ಮನೆಯ ಬಳಿ ತಡೆದು ನಿರ್ದಿಷ್ಟ ಮಾರ್ಗವನ್ನು ಬಳಸಬಾರದು ಎಂಬ ಗುಂಪಿನ ನಿರ್ದೇಶನವನ್ನು ವಿರೋಧಿಸಿದ ನಂತರ ಹಲ್ಲೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಸವಿತಾ ಅವರು ಕಿರುಕುಳ ಆರೋಪವನ್ನು ಹಲ್ಲೆಯನ್ನು ಸಮರ್ಥಿಸಲು ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಬಲಿಪಶುವಿನ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅರ್ಧ ಡಜನ್‌ಗೂ ಹೆಚ್ಚು ಗ್ರಾಮಸ್ಥರು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವುದು ವೀಡಿಯೊದಲ್ಲಿ ರೆಕಾರ್ಡ್ ಆಗಿದೆ. ಮಧ್ಯವಯಸ್ಕನೊಬ್ಬ ಬಂದು ಯುವಕನನ್ನು ಹೊಡೆಯುತ್ತಿರುವುದು ಕಂಡುಬರುತ್ತದೆ. ನಂತರ ಒಬ್ಬ ಮಹಿಳೆಯನ್ನು ಮುಂದೆ ತಂದು ವಿಪಿನ್ ಮುಖಕ್ಕೆ ಮಸಿ ಬಳಿಯಲು ಕರೆತರಲಾಗಿದ್ದು, ಅವರ ಮಾತಿನ ಚಕಮಕಿಯ ನಡುವೆಯೂ ಯುವಕನ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಮಹೇಶ್ ಸವಿತಾ ತನ್ನನ್ನು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು, ಜನರ ಪಾದಗಳನ್ನು ಮುಟ್ಟುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಆದರೆ ಆತನ ಮನವಿಗಳನ್ನು ಗುಂಪು ನಿರ್ಲಕ್ಷಿಸಿದೆ.

ಈರ್ವ ಮಹಿಳೆ ವಿಪಿನ್ ಮೇಲೆ ಚಪ್ಪಲಿಯಿಂದ ಹೊಡೆಯಲು ಪ್ರಾರಂಭಿಸಿದಾಗ ನಿಂದನೆ ಹೆಚ್ಚಾಯಿತು. ನಂತರ ಹೊಡೆಯುವುದು ಮುಂದುವರೆದಾಗ ಅವನನ್ನು ಹಳ್ಳಿಯಲ್ಲಿ ಮೆರವಣಿಗೆ ಮಾಡಲಾಯಿತು.

ದಾಳಿಕೋರರನ್ನು, ಪ್ರಭುದಯಾಳ್ ಸೋನಿ, ರವೀಂದ್ರ ಸೋನಿ, ಸಂತೋಷ್ ಸೋನಿ ಅಲಿಯಾಸ್ ಪಪ್ಪು, ಪ್ರಿನ್ಸಿ ಸೋನಿ (ರವೀಂದ್ರ ಅವರ ಪತ್ನಿ), ಹರ್ಷಿತಾ (ಧರ್ಮೇಂದ್ರ ಸೋನಿಯ ಪತ್ನಿ) ಮತ್ತು ಇತರರು ಸೇರಿದ್ದಾರೆ. ಹಲ್ಲೆ ನಡೆಸುವುದಕ್ಕೆ ಮೊದಲೇ ಯೋಜಿಸಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ. “ಅವರು ಈಗಾಗಲೇ ಅವನಿಗಾಗಿ ಕಾಯುತ್ತಿದ್ದರು. ಸುಮಾರು ಏಳು ಜನರು ಅವನನ್ನು ಥಳಿಸಿ ಸುಮಾರು ಎರಡು ಗಂಟೆಗಳ ಕಾಲ ಮೆರವಣಿಗೆ ಮಾಡಿದರು. ಅವರು ಇದನ್ನು ಏಕೆ ಮಾಡಿದರು ಎಂದು ನಮಗೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದರು.

ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...