Homeಮುಖಪುಟಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ

ಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ

- Advertisement -
- Advertisement -

ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿ, ಮೂತ್ರ ಕುಡಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಚಪ್ಪಲಿಯಿಂದ ಹೊಡೆದಿದೆ. ಆ ವ್ಯಕ್ತಿ ಮತ್ತು ಅವನ ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪವನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಬಲಿಪಶುವಿನ ತಂದೆ ಮಹೇಶ್ ಸವಿತಾ ಅವರ ಪ್ರಕಾರ, ಅವರ ಮಗ ವಿಪಿನ್ ಮಾರುಕಟ್ಟೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಿಪಿನ್ ಅವರನ್ನು ಆರೋಪಿಯ ಮನೆಯ ಬಳಿ ತಡೆದು ನಿರ್ದಿಷ್ಟ ಮಾರ್ಗವನ್ನು ಬಳಸಬಾರದು ಎಂಬ ಗುಂಪಿನ ನಿರ್ದೇಶನವನ್ನು ವಿರೋಧಿಸಿದ ನಂತರ ಹಲ್ಲೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಸವಿತಾ ಅವರು ಕಿರುಕುಳ ಆರೋಪವನ್ನು ಹಲ್ಲೆಯನ್ನು ಸಮರ್ಥಿಸಲು ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಬಲಿಪಶುವಿನ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅರ್ಧ ಡಜನ್‌ಗೂ ಹೆಚ್ಚು ಗ್ರಾಮಸ್ಥರು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವುದು ವೀಡಿಯೊದಲ್ಲಿ ರೆಕಾರ್ಡ್ ಆಗಿದೆ. ಮಧ್ಯವಯಸ್ಕನೊಬ್ಬ ಬಂದು ಯುವಕನನ್ನು ಹೊಡೆಯುತ್ತಿರುವುದು ಕಂಡುಬರುತ್ತದೆ. ನಂತರ ಒಬ್ಬ ಮಹಿಳೆಯನ್ನು ಮುಂದೆ ತಂದು ವಿಪಿನ್ ಮುಖಕ್ಕೆ ಮಸಿ ಬಳಿಯಲು ಕರೆತರಲಾಗಿದ್ದು, ಅವರ ಮಾತಿನ ಚಕಮಕಿಯ ನಡುವೆಯೂ ಯುವಕನ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಮಹೇಶ್ ಸವಿತಾ ತನ್ನನ್ನು ಬಿಡುವಂತೆ ಬೇಡಿಕೊಳ್ಳುತ್ತಿರುವುದನ್ನು, ಜನರ ಪಾದಗಳನ್ನು ಮುಟ್ಟುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಆದರೆ ಆತನ ಮನವಿಗಳನ್ನು ಗುಂಪು ನಿರ್ಲಕ್ಷಿಸಿದೆ.

ಈರ್ವ ಮಹಿಳೆ ವಿಪಿನ್ ಮೇಲೆ ಚಪ್ಪಲಿಯಿಂದ ಹೊಡೆಯಲು ಪ್ರಾರಂಭಿಸಿದಾಗ ನಿಂದನೆ ಹೆಚ್ಚಾಯಿತು. ನಂತರ ಹೊಡೆಯುವುದು ಮುಂದುವರೆದಾಗ ಅವನನ್ನು ಹಳ್ಳಿಯಲ್ಲಿ ಮೆರವಣಿಗೆ ಮಾಡಲಾಯಿತು.

ದಾಳಿಕೋರರನ್ನು, ಪ್ರಭುದಯಾಳ್ ಸೋನಿ, ರವೀಂದ್ರ ಸೋನಿ, ಸಂತೋಷ್ ಸೋನಿ ಅಲಿಯಾಸ್ ಪಪ್ಪು, ಪ್ರಿನ್ಸಿ ಸೋನಿ (ರವೀಂದ್ರ ಅವರ ಪತ್ನಿ), ಹರ್ಷಿತಾ (ಧರ್ಮೇಂದ್ರ ಸೋನಿಯ ಪತ್ನಿ) ಮತ್ತು ಇತರರು ಸೇರಿದ್ದಾರೆ. ಹಲ್ಲೆ ನಡೆಸುವುದಕ್ಕೆ ಮೊದಲೇ ಯೋಜಿಸಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ. “ಅವರು ಈಗಾಗಲೇ ಅವನಿಗಾಗಿ ಕಾಯುತ್ತಿದ್ದರು. ಸುಮಾರು ಏಳು ಜನರು ಅವನನ್ನು ಥಳಿಸಿ ಸುಮಾರು ಎರಡು ಗಂಟೆಗಳ ಕಾಲ ಮೆರವಣಿಗೆ ಮಾಡಿದರು. ಅವರು ಇದನ್ನು ಏಕೆ ಮಾಡಿದರು ಎಂದು ನಮಗೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದರು.

ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...