Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...