Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...