Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...