Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...