Homeಕರೋನಾ ತಲ್ಲಣತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

- Advertisement -
- Advertisement -

ಉತ್ತರಪ್ರದೇಶ ರಾಜ್ಯವು ಏಪ್ರಿಲ್ ಅಂತ್ಯದ ವೇಳೆಗೆ ಕೆಟ್ಟ ಹಿಟ್ ಸ್ಟೇಟ್ (ತೀವ್ರ ಕೋವಿಡ್ ಬಾಧಿತ) ಆಗಬಹುದು ಎಂದು ನೀತಿ ಆಯೋಗ ಪ್ರಧಾನಿಯವರಿಗೆ ಹೇಳುತ್ತಿದ್ದರೆ, ಇತ್ತ ಯುಪಿ ಸರ್ಕಾರ ನಮ್ಮಲ್ಲಿ ಆಮ್ಲಜನಕ ಕೊರತೆಯೇ ಇಲ್ಲ, ಇಲ್ಲಿ ಕೋವಿಡ್ ಸಂಖೆಗಳು ಕಡಿಮೆ ಎಂದು ಸಮರ್ಥಿಸಿಕೊಳ್ಳುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ನೀತಿ ಆಯೋಗದ ಅಂದಾಜಿನ ಪ್ರಕಾರ, ಏಪ್ರಿಲ್ ಅಂತ್ಯದ ವೇಳೆಗೆ ಉತ್ತರಪ್ರದೇಶದಲ್ಲಿ ದೈನಿಕ 1 ಲಕ್ಷ 20 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಆದರೆ ಸನ್ನಿಹಿತವಾಗುತ್ತಿರುವ ಅನಾಹುತವನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ವಿಧಾನ ಮತ್ತು ವರ್ತನೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಎಕನಾಮಿಕ್ ಟೈಮ್ಸ್ ವರದಿ ಮಾಡಿದಂತೆ ನೀತಿ ಆಯೋಗದ ಸದಸ್ಯ ವಿನೋದ್ ಕೆ. ಪೌಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ವರದಿಯ ಪ್ರಕಾರ, ಉತ್ತರಪ್ರದೇಶವು ಏಪ್ರಿಲ್ ಅಂತ್ಯದ ವೇಳೆಗೆ ಕೋವಿಡ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾಗಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 30 ರಂದು ಉತ್ತರಪ್ರದೇಶವು 1.20 ಲಕ್ಷದ ಸಮೀಪ ಪಾಸಿಟಿವ್ ಪ್ರಕರಣಗಳನ್ನು ವರದಿ ಮಾಡಬಹುದೆಂದು ಪೌಲ್ ಅವರ ಪ್ರಕ್ಷೇಪಗಳು ಸೂಚಿಸಿವೆ. ನಂತರ ಮಹಾರಾಷ್ಟ್ರ (99,665), ದೆಹಲಿ (67,134) ಮತ್ತು ಛತ್ತೀಸಘಡ್ (61,474) ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಬಹುದು.

ದೇಶದ ಇತರೆಡೆಗಳಂತೆ, ಯುಪಿ ರಾಜಧಾನಿ ಲಕ್ನೋ ಸೇರಿದಂತೆ ಯುಪಿಯ ಪ್ರಮುಖ ನಗರಗಳಲ್ಲಿ ಆಮ್ಲಜನಕದ ತೀವ್ರ ಕೊರತೆಯು ಅನೇಕರ ಜೀವವನ್ನು ತೆಗೆದುಕೊಳ್ಳುತ್ತಿದೆ. ಇಲ್ಲಿ, ಮೃತ ದೇಹಗಳ ಸಾಮೂಹಿಕ ಶವಸಂಸ್ಕಾರದ ‘ಕೆಟ್ಟ’ ದೃಶ್ಯಗಳು ಭಯಾನಕವಾಗಿದ್ದು, ಕಠೋರ ವಾಸ್ತವತೆಗೆ ಸಾಕ್ಷಿಯಾಗಿವೆ. ಯುಪಿ ಸರ್ಕಾರ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತ ಜನರನ್ನು ದಾರಿ ತಪ್ಪಿಸುವ ಮೂಲಕ ಎರಡನೇ ಅಲೆ ತೀವ್ರಗೊಳ್ಳಲು ಕಾರಣವಾಗುತ್ತಿದೆ ಎಂದು ವೈರ್ ಆರೋಪಿಸಿದೆ.

ಆದರೂ ಈ ವಾರ, ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್ ಖನ್ನಾ ಅವರು ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಲ್ಲ ಎಂದು ಈ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಮ್ಲಜನಕದ ಕೊರತೆಯಿಂದ ಲಕ್ನೋದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಸ್ಥಳೀಯ ಮಾಧ್ಯಮ ವರದಿಗಳು ಬೇರೆ ದುರಂತ ಕತೆಗಳನ್ನು ಹೇಳುತ್ತಿವೆ. ಕಳೆದ ಹಲವಾರು ದಿನಗಳಿಂದ ಲಕ್ನೋ ಸೇರಿದಂತೆ ಹಲವು ನಗರಗಳು ಆಮ್ಲಜನಕ ಕೊರತೆಯನ್ನು ಎದುರಿಸುತ್ತಿವೆ ಎಂದು ನಿತ್ಯವೂ ಅವು ವರದಿ ಮಾಡುತ್ತಿವೆ.
ಆಮ್ಲಜನಕ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಯಿಂದ ಹೊರಹಾಕಲಾಗಿದೆ. ಲಕ್ನೋ, ಕಾನ್ಪುರ್, ಆಗ್ರಾ ಮತ್ತು ಸುಲ್ತಾನಪುರದ ಹಲವಾರು ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ತಮ್ಮ ಮೊದಲ ವರ್ಷದ ಅವಧಿಯಲ್ಲಿ ಮಾಡಿದ ಅದೇ ನಿರಾಕರಣೆ ಕ್ರಮಕ್ಕೆ ಸಚಿವ ಖನ್ನಾ ಹೋಗಿದ್ದಾರೆಂದು ತೋರುತ್ತದೆ. ಆಮ್ಲಜನಕದ ಅಲಭ್ಯತೆಯಲ್ಲಿ 160ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದರು. ನಂತರದಲ್ಲಿ ಸಿಎಂ ಕ್ಷೇತ್ರ, ಹುಟ್ಟೂರು ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲೂ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿದವು.

ಕೋವಿಡ್ ನಿಗ್ರಹಕ್ಕೆ ಹಲವಾರು ಬಿಜೆಪಿ ನಾಯಕರು ಮೂರ್ಖ ಮತ್ತು ಅವೈಜ್ಞಾನಿಕ ಸಲಹೆಗಳನ್ನು ನೀಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ, ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರು ಕೋವಿಡ್ ಪ್ರಕರಣಗಳು ನಿಯಂತ್ರಣದಿಂದ ಹೊರಬರಲು ಪ್ರಾರಂಭಿಸಿದಾಗಲೂ ಕುಂಭಮೇಳವನ್ನು ನಡೆಸುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿ ಟೀಕೆಗೆ ಗುರಿಯಾದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಅವರು, “ಮುಖ್ಯವಾಗಿ, ಕುಂಭ ಗಂಗಾ ನದಿಯ ದಡದಲ್ಲಿ ನಡೆದಿದೆ. ಮಾ ಗಂಗಾ ಆಶೀರ್ವಾದವು ನೀರಿನ ಹರಿವಿನಲ್ಲಿದೆ. ಆದ್ದರಿಂದ, ಯಾವುದೇ ಕೊರೋನಾ ಉಳಿಯುವುದಿಲ್ಲ’ ಎನ್ನುವ ಮೂಲಕ ಅವರು ತೀವ್ರ ನಿರ್ಲಕ್ಷ್ಯದ  ವ್ಯಕ್ತಿ ಎಂಬುದನ್ನು ಸಾಬೀತು ಮಾಡಿದ್ದರು.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...