Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...