Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...