Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...