Homeಮುಖಪುಟಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್...

ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಮೀರತ್‌ನ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

- Advertisement -
- Advertisement -

ಒಂದೇ ಒಂದು ಹಳ್ಳಿಯಲ್ಲಿ ಕಳೆದ ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಳ್ಳಿಯ ಯಾರಿಗೂ ಕೊರೊನಾ ಟೆಸ್ಟ್ ಆಗಲಿ, ಹಳ್ಳಿಯನ್ನು ಸ್ಯಾನಿಟೈಜ್ ಮಾಡುವ ಕೆಲಸವಾಗಲಿ ಸರ್ಕಾರದ ಕಡೆಯಿಂದ ನಡೆದಿಲ್ಲ.

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗೋಗಿಲ್ ಗೋತ್ರಾ ಹಳ್ಳಿಯ ಕಥೆಯಿದು. ಗ್ರಾಮದ ನಿವಾಸಿಗಳು ಈ ಸಾವುಗಳಿಂದ ಆತಂಕಕ್ಕೆ ಒಳಗಾಗಿದ್ದರೂ ಯಾವುದೇ ಅಧಿಕಾರಿಗಳು ಅಲ್ಲಿಗೆ ಕಾಲಿಟ್ಟಿಲ್ಲ. ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಜಿಲ್ಲೆಯಾಗಿ ಮೀರತ್ ಗುರುತಿಸಿಕೊಂಡಿದೆ.

“ಕಳೆದ ಒಂದು ತಿಂಗಳಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಕಂಡುಬಂದಿಲ್ಲ. ಯಾವುದೇ ಸಹಾಯ ದೊರೆತಿಲ್ಲ. ನಮ್ಮ ಹಳ್ಳಿಯಲ್ಲಿ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಿ, ವೈದ್ಯಕೀಯ ಸೌಲಭ್ಯ ನೀಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಗಂಗೆಯಲ್ಲಿ ನಿಲ್ಲದ ಮೃತದೇಹಗಳ ಹರಿವು, ಜಲಶಕ್ತಿ ಸಚಿವರಿಂದ ತನಿಖೆಗೆ ಮನವಿ

ಮೀರತ್ ಜಿಲ್ಲೆಯು ಉತ್ತರ ಪ್ರದೇಶದ ಕೊರೊನಾ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 1,368 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಸಂಖ್ಯೆಯನ್ನು 13,941 ಕ್ಕೆ ಏರಿಕೆಯಾಗಿವೆ. ಮೀರತ್‌ನ ಅತಿದೊಡ್ಡ ಸರ್ಕಾರಿ ಕೊರೊನಾ ಆರೈಕೆ ಕೇಂದ್ರವಾದ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜು ಕೂಡ ಮೂಲಸೌಲಭ್ಯಗಳಿಲ್ಲದೆ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಣಗಾಡುತ್ತಿದೆ.

ಇಡೀ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ಸೋರಿಕೆಯಾಗುತ್ತಿರುವ ಮೇಲ್ಛಾಣಿ ಮತ್ತು ಶೌಚಾಲಯದ ದುರ್ವಾಸನೆಯಿಂದ ಕೊರೊನಾ ಸೋಂಕಿತರು ಮತ್ತಷ್ಟು ರೋಗಗಳಿಗೆ ಒಳಗಾಗುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ವಶಿಷ್ಠ ಶರ್ಮಾ, ಮನೆಯಿಂದ ಬೆಡ್‌ ತಂದು ಆಸ್ಪತ್ರೆಯ ತುರ್ತು ವಾರ್ಡ್‌ನ ಎರಡು ಕೋಣೆಗಳ ನಡುವಿನ ಕಾರಿಡಾರ್‌ನಲ್ಲಿ ತನ್ನ ತಂದೆಯನ್ನು ಮಲಗಿಸಿದ್ದಾರೆ. “ನಾವು ಮನೆಯಿಂದ ಸ್ವಂತ ಹಾಸಿಗೆಯನ್ನು ತಂದಿದ್ದೇವೆ. ಇಲ್ಲಿ ಮೂಲಸೌಲಭ್ಯಗಳು ತುಂಬಾ ಕೆಟ್ಟದಾಗಿವೆ, ರೋಗಿಗಳು ಆಸ್ಪತ್ರೆಯ ನೆಲದ ಮೇಲೆ ಬೆಡ್‌ಶೀಟ್‌ಗಳ ಮೇಲೆ ಮಲಗಿದ್ದಾರೆ” ಎಂದಿದ್ದಾರೆ.

ಕಳೆದ ಏಪ್ರಿಲ್ 28 ರಿಂದ ಅವರ ತಂದೆಯನ್ನು ಈ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. “ನನ್ನ ತಂದೆಗೆ ಕೊರೊನಾ ಜೊತೆಗೆ ಎದೆಯ ಸಮಸ್ಯೆಗಳಿವೆ ಎಂದು ತೋರುತ್ತದೆ. ತುಂಬಾ ಜನ ರೋಗಿಗಳು ಇರುವುದರಿಂದ, ವೈದ್ಯರು ಸಾಕಷ್ಟು ಗಮನ ಕೊಡಲು ಸಾಧ್ಯವಾಗುತ್ತಿಲ್ಲ” ಎಂದು ಶರ್ಮಾ ಹೇಳಿದ್ದಾರೆ.

ಮೀರತ್‌ನ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಕೊರೊನಾ ಪ್ರಕರಣಗಳನ್ನು ವೇಗವಾಗಿ ತುಂಬುತ್ತಿವೆ. ಹೆಸರಿಸಲು ಇಷ್ಟಪಡದ ಕೆಎಂಸಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಯೊಬ್ಬರು, “ಈ ಸಮಯದಲ್ಲಿ ರೋಗಿಗಳಿಗೆ ಯಾವುದೇ ಹಾಸಿಗೆಗಳು ಲಭ್ಯವಿಲ್ಲ.  ರೋಗಿಗಳನ್ನು ಬೇರೆಡೆಗೆ ಕಳುಹಿಸಲು ಮನಸ್ಸು ಒಪ್ಪುತ್ತಿಲ್ಲ, ಆದರೆ ನಮಗೆ ಬೇರೆ ಆಯ್ಕೆಗಳಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇಷ್ಟು ಅವ್ಯವಸ್ಥೆಗಳ ನಡುವೆಯೂ, ಪರಿಸ್ಥಿತಿ ಸುಧಾರಿಸುತ್ತಿವೆ ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳುತ್ತಾರೆ.

“ಈ ಸಮಯದಲ್ಲಿ ಪ್ರಕರಣಗಳನ್ನು ನಿರ್ದಿಷ್ಟವಾಗಿ ಸೂಚಿಸುವುದು ಕಷ್ಟ. ಅನೇಕ ಹಳೆಯ ಪ್ರಕರಣಗಳನ್ನು ಅಪ್‌ಲೋಡ್ ಮಾಡಲಾಗಿದೆ. ಇದರಿಂದ ಹೆಚ್ಚಿನ ಪ್ರಕರಣಗಳನ್ನು ತೋರಿಸಲಾಗುತ್ತಿದೆ. ಆದರೆ ಮುಂಬರುವ ವಾರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆಸ್ಪತ್ರೆಯ ಹೊರೆ ಕೂಡ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕ ಹಾಸಿಗೆಗಳ ಲಭ್ಯತೆ ಹೆಚ್ಚುತ್ತಿದೆ” ಎಂದು ಮೀರತ್ ಮುಖ್ಯ ವೈದ್ಯಾಧಿಕಾರಿ ಅಖಿಲೇಶ್ ಮೋಹನ್ ಹೇಳಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...