Homeಮುಖಪುಟಉತ್ತರ ಪ್ರದೇಶ: ಗುಂಡಿಕ್ಕಿ ಬಿಜೆಪಿ ಮುಖಂಡನ ಕೊಲೆ - ಮೂವರ ಬಂಧನ

ಉತ್ತರ ಪ್ರದೇಶ: ಗುಂಡಿಕ್ಕಿ ಬಿಜೆಪಿ ಮುಖಂಡನ ಕೊಲೆ – ಮೂವರ ಬಂಧನ

ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

- Advertisement -
- Advertisement -

ಉತ್ತರ ಪ್ರದೇಶದ ಫಿರೋಜಬಾದ್ ಜಿಲ್ಲೆಯಲ್ಲಿ ದಯಾಶಂಕರ್ ಗುಪ್ತ ಎಂಬ ಬಿಜೆಪಿ ಮುಖಂಡನನ್ನು ಬೈಕಿನಲ್ಲಿ ಬಂದ ಮೂರು ಜನರ ಗುಂಪು ನಿನ್ನೆ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಅವರ ಕುಟುಂಬ ಶಂಕಿತರೆಂದು ಆರೋಪಿಸಿದ ನಂತರ ಪಕ್ಷದ ಸಹೋದ್ಯೋಗಿ ವೀರೇಶ್ ತೋಮರ್ ಮತ್ತು ಅವನ ಚಿಕ್ಕಪ್ಪಂದಿರಾದ ನರೇಂದ್ರ ತೋಮರ್ ಮತ್ತು ದೇವೇಂದ್ರ ತೋಮರ್‌ರವರನ್ನು ಪೊಲೀಸರು ಬಂಧಿಸಿದ್ದಾರೆ.

ದಯಾಶಂಕರ್ ಗುಪ್ತ ಮಂಡಲ್‌ನ ಉಪಾಧ್ಯಕ್ಷನಾಗಿದ್ದು, ನಿನ್ನೆ ರಾತ್ರಿ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ತೆರಳುವ ವೇಳೆ ಸ್ಥಳೀಯ ಮಾರುಕಟ್ಟೆಯ ಬಳಿ ಅವರ ಮೇಲೆ ಹಲ್ಲೆ ನಡೆದಿದೆ. ಆ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ.

ಈ ಕೊಲೆಯ ಪ್ರಮುಖ ಆರೋಪಿಯೆಂದು ಶಂಕಿಸಿರುವ ವೀರೇಶ್ ತೋಮರ್ ಇತ್ತೀಚೆಗೆ ತಾನೆ ಬಿಜೆಪಿ ಸೇರಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. “ಆತ ದಯಾಶಂಕರ್ ವಿರುದ್ಧ ಫೇಸ್‌ಬುಕ್‌ನಲ್ಲಿ ಕಿಡಿಕಾರುತ್ತಿದ್ದ. ಆತನ ಚಿಕ್ಕಪ್ಪ ನರೇಂದ್ರ ತೋಮರ್, ಫಿರೋಜಬಾದ್‌ನ ರತ್ನಗಿರಿಯ ಗ್ರಾಮಪ್ರಧಾನ್ ಹುದ್ದೆಗೆ ದಯಾಶಂಕರ್ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದ. ಈ ಕುರಿತು ಅವರಿಬ್ಬರ ನಡುವೆ ಜಗಳವಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!


ನಿನ್ನೆ ರಾತ್ರಿ ಕೊಲೆಯ ವಿಷಯ ತಿಳಿಯುತ್ತಿದ್ದಂತೆ ದಯಾಶಂಕರ್ ಕುಟುಂಬ ಮತ್ತು ಗೆಳೆಯರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಆಗ್ರಾ ರಸ್ತೆ ಬಂದ್ ಮಾಡಲು ಮುಂದಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕೆಲ ಅಪರಿಚಿತ ವ್ಯಕ್ತಿಗಳು ದಯಾಶಂಕರ್ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ನಾವು ತನಿಖೆ ನಡೆಸುತ್ತೇವೆ. 24 ಗಂಟೆಗಳಲ್ಲಿ ಈ ಕುರಿತು ಸ್ಪಷ್ಟ ಮಾಹಿತಿ ದೊರಕಲಿದೆ. ಆತನ ಕುಟುಂಬದವರ ಹೆಸರಿಸಿದ ಶಂಕಿತರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿವೆ. ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.


ಇದನ್ನೂ ಓದಿ; ಉತ್ತರಪ್ರದೇಶ: 16 ವರ್ಷದ ದಲಿತ ಯುವತಿಯ ಮೇಲೆ ಅಪ್ರಾಪ್ತ ಸೇರಿ ಇಬ್ಬರಿಂದ ಅತ್ಯಾಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...