Homeಮುಖಪುಟಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

- Advertisement -
- Advertisement -

ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ತೀವ್ರ ವಯಸ್ಸಾಗಿದ್ದ ಮುಸ್ಲಿಂ ವೃದ್ಧನ ಮೇಲೆ ಯವಕರ ಗುಂಪೊಂದು ಜೈಶ್ರೀರಾಮ್, ವಂದೇಮಾತರಂ ಘೋಷಣೆ ಕೂಗುವಂತೆ ಒತ್ತಾಯಿಸಿ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ವರದಿಯಾಗಿದೆ.

ಜೂನ್ 05 ರಂದು ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಪ್ರಾರ್ಥನೆ ಮುಗಿಸಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಯುವಕರು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಬಾರಿಸಿ ಅಮಾನವೀಯತೆ ಮೆರೆದಿದ್ದಾರೆ.

ಹಲ್ಲೆಯ ದೃಶ್ಯಾವಳಿಗಳನ್ನು ಚಿತ್ರೀಕರಿಸಿ ಅಂತರ್ಜಾಲಕ್ಕೆ ಅಪ್‌ಲೋಡ್ ಮಾಡಲಾಗಿದೆ. ವೃದ್ದನು ಪಾಕಿಸ್ತಾನದ ಏಜೆಂಟ್ ಆಗಿದ್ದಾನೆ ಎಂದು ಆರೋಪಿಸಿ ಮನಸೋ ಇಚ್ಛೆ ತಳಿಸಿದ್ದಾರೆ.

ಈ ಕುರಿತು ಸಂತ್ರಸ್ತ ವೃದ್ದ ಹೇಳಿಕೆ ನೀಡಿದ್ದಾರೆ. “ನಾನು ಮನೆಗೆ ವಾಪಸ್ ಬರುತ್ತಿದ್ದಾಗ ಲಿಫ್ಟ್ ಕೊಡುತ್ತೇನೆ ಎಂದು ಆಟೋಗೆ ಹತ್ತಿಸಿಕೊಂಡ. ನಂತರು ಇಬ್ಬರು ಅದೇ ಆಟೋ ಏರಿದರು. ನನ್ನನ್ನು ಬಲವಂತವಾಗಿ ಯಾವುದೋ ಮನೆಗೆ ಕರೆದೊಯ್ದು ರೂಮಿನಲ್ಲಿ ಕಟ್ಟಿಹಾಕಿದರು. ಘೋಷಣೆಗಳನ್ನು ಕೂಗುವಂತೆ ಬಲವಂತ ಮಾಡಿದರು. ನನ್ನ ಮೊಬೈಲ್ ಕಿತ್ತುಕೊಂಡು ಚಾಕುವಿನಿಂದ ಗಡ್ಡ ಕತ್ತರಿಸಿದರು. ನಂತರ ಮನಬಂದಂತೆ ಥಳಿಸಿದರು” ಎಂದು ಅಳುತ್ತಾ ವಿವರಿಸಿದ್ದಾರೆ.

ಅವರು ನನಗೆ ಮೊಬೈಲ್‌ನಲ್ಲಿ ಮತ್ತೊಬ್ಬ ಮುಸ್ಲಿಂನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ತೋರಿಸಿದರು. ಈಗಾಗಲೇ ಹಲವು ಮುಸ್ಲಿಮರನ್ನು ಕೊಂದಿದ್ದೇನೆ ಎಂದು ಯುವಕನೊಬ್ಬ ತಿಳಿಸಿದ ಎಂದು ವೃದ್ದ ಆರೋಪಿಸಿದ್ದಾರೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರವೇಶ್ ಗುಜ್ಜರ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಆತ ಪ್ರಕರಣದ ಮುಖ್ಯ ಆರೋಪಿ ಎನ್ನಲಾಗಿದೆ. ಆತ ಇನ್ನು ತನ್ನ ಹೇಳಿಕೆಯನ್ನು ದಾಖಲಿಸಿಲ್ಲ. ಇತರರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.


ಇದನ್ನೂ ಓದಿ: ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...