Homeಮುಖಪುಟಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಗುಂಪೊಂದು ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗಿಕೊಂಡು ಆತನನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಸ್ಥಳೀಯರು ಚಿತ್ರಿಸಿರುವ ವಿಡಿಯೊದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪುಟ್ಟ ಮಗು ದಾಳಿಕೋರರ ಬಳಿ ತಂದೆಯನ್ನು ಬಿಟ್ಟು ಬಿಡುವಂತೆ ಕೇಳಿಕೊಳ್ಳುತ್ತಿರುವ ಮನ ಮಿಡಿಯುವ ದೃಶ್ಯಗಳಿವೆ. ಜೊತೆಗೆ ಪೊಲೀಸರ ವಶದಲ್ಲಿದ್ದಾಗಲೂ ಆ ವ್ಯಕ್ತಿಗೆ ಹೊಡೆದಿರುವ ದೃಶ್ಯಗಳು ಕಾಣಸಿಗುತ್ತವೆ.

ಬಲಪಂಥೀಯ ಗುಂಪು ಬಜರಂಗದಳವು ಸಭೆ ನಡೆಸಿದ ಸ್ಥಳದಿಂದ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಮುಸ್ಲಿಮರು ತಮ್ಮ ಪ್ರದೇಶದಲ್ಲಿನ ಹಿಂದೂ ಯುವತಿಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಜರಂಗದಳದ ಸಭೆಯ ನಂತರ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಕಾನ್ಪುರ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯ ದೂರಿನ ಆಧಾರದ ಮೇಲೆ ಸ್ಥಳೀಯವಾಗಿ ಮದುವೆ ಬ್ಯಾಂಡ್ ನಡೆಸುತ್ತಿರುವ ಸ್ಥಳೀಯ, ಆತನ ಮಗ ಮತ್ತು ಸುಮಾರು 10 ಅಪರಿಚಿತ ವ್ಯಕ್ತಿಗಳ ವಿರುದ್ಧ ಗಲಭೆ ಪ್ರಕರಣ ದಾಖಲಿಸಿದ್ದಾರೆ. ಆದರೆ, ಬಜರಂಗದಳದ ವ್ಯಕ್ತಿಗಳು ವಿರುದ್ಧ ಪ್ರಕರಣ ದಾಖಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

“ನಾನು ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಇ-ರಿಕ್ಷಾವನ್ನು ಓಡಿಸುತ್ತಿದ್ದೆ, ಆಗ ಆರೋಪಿಗಳು ನನ್ನ ಮತ್ತು ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಲು ಮತ್ತು ನಿಂದಿಸಲು ಆರಂಭಿಸಿದರು. ಪೋಲಿಸರಿಂದಾಗಿ ನಾನು ರಕ್ಷಿಸಲ್ಪಟ್ಟಿದ್ದೇನೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿ ಮತ್ತು ಆವರ ಹಿಂದೂ ನೆರೆಹೊರೆಯವರೊಂದಿಗೆ ಕಾನೂನು ಸಮಸ್ಯೆಯಿದ್ದು, ಎರಡು ಕುಟುಂಬಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಜುಲೈನಲ್ಲಿ ಪರಸ್ಪರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯ ಮೊದಲು ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಯ ಎಫ್‌ಐಆರ್ ದಾಖಲಿಸಿದ್ದರು. ನಂತರ ಹಿಂದೂ ಸಮುದಾಯದವರು ದೂರು ದಾಖಲಿಸಿದ್ದಾರೆ. ಮೂಲಗಳು ಹೇಳುವಂತೆ ಬಜರಂಗದಳವು ಇತ್ತೀಚೆಗೆ ಈ ವಿವಾದದಲ್ಲಿ ಭಾಗಿಯಾಗಿ, ಮುಸ್ಲಿಂ ಕುಟುಂಬದ ವಿರುದ್ಧ ಬಲವಂತದ ಮತಾಂತರದ ಆರೋಪಗಳನ್ನು ಮಾಡುತ್ತಿದ್ದರು ಎಂದು ತಿಳಿಸಿವೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...