Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

- Advertisement -
- Advertisement -

ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ.

ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಯುವತಿ ತಾಯಿ ಮತ್ತು ಯುವಕನು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಂಬಂಧಿಸಿದ ಉದ್ಯೋಗಿಗಳು ಎನ್ನಲಾಗಿದೆ.

ಯುವತಿಯ ತಾಯಿಯ ಬದಲು ಯುವತಿಯೇ ಯುವಕನೊಂದಿಗೆ ಹೋಗಿ ಸಾಲದ ಕಂತು ಸಂಗ್ರಹಿಸಿ ಬ್ಯಾಂಕ್‌ಗೆ ಹಿಂತಿರುಗಿಸುತ್ತಿದ್ದಾಗ ಖಲಾಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಬ್ಬರು ಸಾಲದ ಸಂಗ್ರಹಿಸಿಕೊಂಡು ಬ್ಯಾಂಕಿನೆಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಹಲ್ಲೆಕೋರರು ಅವರನ್ನು ಎದುರುಗೊಂಡು ಯುವತಿಯ ಮುಖದ ಮುಸುಕನ್ನು ತೆಗೆಯುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ಅವರು ಬಲವಂತವಾಗಿ ಆಕೆಯ ಬುರ್ಖಾವನ್ನು ತೆರೆದು ಘಟನೆಯನ್ನು ತಮ್ಮ ಮೊಬೈಲ್ ಗಳಲ್ಲಿ ರೆಕಾರ್ಡ್ ಮಾಡಿದರು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುವತಿ ತನ್ನ ತಾಯಿಯ ಸೂಚನೆಯ ಮೇರೆಗೆ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಳು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪೊಲೀಸ್ ಗಸ್ತು ಪಡೆಯ ಸಿಬ್ಬಂದಿಗೆ ಮಾಹಿತಿ ಬಂದ ತಕ್ಷಣ, ಕೆಲವು ಪೊಲೀಸರು ಸ್ಥಳಕ್ಕೆ ತಲುಪಿ ಇಬ್ಬರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಾರ್ವಜನಿಕ ಕಿರುಕುಳ ಮತ್ತು ವೈಯಕ್ತಿಕ ಘನತೆಯ ಉಲ್ಲಂಘನೆಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಮುಜಫರ್ ನಗರ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದೆ. ಸಾರ್ವಜನಿಕ ಕಿರುಕುಳದ ಇಂತಹ ಕೃತ್ಯಗಳನ್ನು ತ್ವರಿತವಾಗಿ ನಿಭಾಯಿಸುವುದನ್ನು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ಒಪ್ಪಿಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ಪೊಲೀಸರು ತುರ್ತುಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತ ಯುವತಿ, ಯುವಕ ಮತ್ತು ಆರೋಪಿಗಳೆಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರೆಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿವೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿವೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗುತ್ತಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...