Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

- Advertisement -
- Advertisement -

ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ.

ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಯುವತಿ ತಾಯಿ ಮತ್ತು ಯುವಕನು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಸಂಬಂಧಿಸಿದ ಉದ್ಯೋಗಿಗಳು ಎನ್ನಲಾಗಿದೆ.

ಯುವತಿಯ ತಾಯಿಯ ಬದಲು ಯುವತಿಯೇ ಯುವಕನೊಂದಿಗೆ ಹೋಗಿ ಸಾಲದ ಕಂತು ಸಂಗ್ರಹಿಸಿ ಬ್ಯಾಂಕ್‌ಗೆ ಹಿಂತಿರುಗಿಸುತ್ತಿದ್ದಾಗ ಖಲಾಪರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಬ್ಬರು ಸಾಲದ ಸಂಗ್ರಹಿಸಿಕೊಂಡು ಬ್ಯಾಂಕಿನೆಡೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಹಲ್ಲೆಕೋರರು ಅವರನ್ನು ಎದುರುಗೊಂಡು ಯುವತಿಯ ಮುಖದ ಮುಸುಕನ್ನು ತೆಗೆಯುವಂತೆ ಒತ್ತಾಯಿಸಿದರು. ಆಕೆ ನಿರಾಕರಿಸಿದಾಗ ಅವರು ಬಲವಂತವಾಗಿ ಆಕೆಯ ಬುರ್ಖಾವನ್ನು ತೆರೆದು ಘಟನೆಯನ್ನು ತಮ್ಮ ಮೊಬೈಲ್ ಗಳಲ್ಲಿ ರೆಕಾರ್ಡ್ ಮಾಡಿದರು. ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುವತಿ ತನ್ನ ತಾಯಿಯ ಸೂಚನೆಯ ಮೇರೆಗೆ ಯುವಕನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಳು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಪೊಲೀಸ್ ಗಸ್ತು ಪಡೆಯ ಸಿಬ್ಬಂದಿಗೆ ಮಾಹಿತಿ ಬಂದ ತಕ್ಷಣ, ಕೆಲವು ಪೊಲೀಸರು ಸ್ಥಳಕ್ಕೆ ತಲುಪಿ ಇಬ್ಬರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಾರ್ವಜನಿಕ ಕಿರುಕುಳ ಮತ್ತು ವೈಯಕ್ತಿಕ ಘನತೆಯ ಉಲ್ಲಂಘನೆಯ ಈ ಕೃತ್ಯದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಮುಜಫರ್ ನಗರ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಜಾರಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿದೆ. ಸಾರ್ವಜನಿಕ ಕಿರುಕುಳದ ಇಂತಹ ಕೃತ್ಯಗಳನ್ನು ತ್ವರಿತವಾಗಿ ನಿಭಾಯಿಸುವುದನ್ನು ಮತ್ತು ಅಪರಾಧಿಗಳನ್ನು ನ್ಯಾಯಕ್ಕೆ ಒಪ್ಪಿಸುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹಾಗೆಯೇ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಮತ್ತು ಸಾಮಾಜಿಕ ಶಾಂತಿಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ಪೊಲೀಸರು ತುರ್ತುಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತ ಯುವತಿ, ಯುವಕ ಮತ್ತು ಆರೋಪಿಗಳೆಲ್ಲರೂ ಒಂದೇ ಸಮುದಾಯಕ್ಕೆ ಸೇರಿದವರೆಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿವೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿವೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗುತ್ತಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...