Homeಚಳವಳಿಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

- Advertisement -
- Advertisement -

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕಿಸಾನ್ ಮಹಾಪಂಚಾಯತ್ ಆಯೋಜಿಸಿದೆ. ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ.

ಬಿಗಿ ಭದ್ರತೆ ನಡುವೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗೆ ಉತ್ತರ ಪ್ರದೇಶದ ಪೊಲೀಸರು ಮುಜಾಫರ್‌ನಗರದಲ್ಲಿ ಭಾರಿ ಭದ್ರತೆ ಹೆಚ್ಚಿಸಿದ್ದಾರೆ.

“ಮುಜಾಫರ್‌ನಗರದಲ್ಲಿ 8,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡು ರಾಪಿಡ್ ಆಕ್ಷನ್ ಫೋರ್ಸ್ ಮತ್ತು 1,200 ಪೊಲೀಸರು ಸೇರಿದ್ದಾರೆ. ಡ್ರೋನ್ ಕ್ಯಾಮೆರಾಗಳನ್ನು ವೈಮಾನಿಕ ಕಣ್ಗಾವಲುಗಾಗಿ ಬಳಸಲಾಗುತ್ತಿದ್ದು, 200 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ” ಎಂದು ಮುಜಾಫರ್ ನಗರ ಎಸ್‌ಎಸ್‌ಪಿ ಅಭಿಷೇಕ್ ಯಾದವ್ ತಿಳಿಸಿದ್ದಾರೆ.

ಮಹಾಪಂಚಾಯತ್‌ಗೆ ಭಾರಿ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿದ್ದು, ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಿದೆ. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ಮುಜಾಫರ್‌ನಗರದ ಸರ್ಕಾರಿ ಇಂಟರ್ ಕಾಲೇಜು ಮೈದಾನದಿಂದ 4 ಕಿಲೋಮೀಟರ್ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಎಲ್ಇಡಿ ಪರದೆಗಳು ಮತ್ತು ಮೈಕ್ರೊಫೋನ್ಗಳನ್ನು ಅಳವಡಿಸಲಾಗಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಸಾನ್ ಮಹಾಪಂಚಾಯತ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳವು ಕಿಸಾನ್ ಮಹಾಪಂಚಾಯತ್‌ಗೆ ಬೆಂಬಲ ಘೋಷಿಸಿದೆ.

ಹರಿಯಾಣದ ರೈತರೊಬ್ಬರು, “ನಮ್ಮ ಪ್ರಧಾನಿಗೆ ರೈತರ ಬಗ್ಗೆ ಗೌರವವಿಲ್ಲ. ಚಳಿಗಾಲದಲ್ಲಿ ರೈತರನ್ನು ರಸ್ತೆಯಲ್ಲಿ ಕೂರುವಂತೆ ಮಾಡಿದ ಮೋದಿ ಜೀ ಯಾವ ರೀತಿಯ ರಾಜ..?” ಎಂದು ಪ್ರಶ್ನಿಸಿದ್ದಾರೆ.

“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಮಹಾಪಂಚಾಯತ್‌ನಲ್ಲಿ ಜಮಾಯಿಸಿದ್ದೇವೆ. ಈ ಮೂರು ಕರಾಳ ಕಾನೂನುಗಳನ್ನು ಹಿಂಪಡೆಯುವಂತೆ   ಪ್ರಧಾನ ಮಂತ್ರಿಗೆ ವಿನಂತಿಸುತ್ತೇವೆ” ಎಂದು ರೈತ ಮಹಿಳೆಯೊಬ್ಬರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಉತ್ತರಪ್ರದೇಶಕ್ಕೆ ಈ ಕಿಸಾನ್ ಮಹಾಪಂಚಾಯತ್‌  ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಈ ಹಿಂದೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿ ಖಂಡನೆಗೆ ಒಳಗಾಗಿತ್ತು.


ಇದನ್ನೂ ಓದಿ: ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...