Homeಚಳವಳಿಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

ಉತ್ತರ ಪ್ರದೇಶ: ಯೋಗಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಜಾಫರ್‌ನಗರದಲ್ಲಿ ರೈತರ ಮಹಾಪಂಚಾಯತ್‌

- Advertisement -
- Advertisement -

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕಿಸಾನ್ ಮಹಾಪಂಚಾಯತ್ ಆಯೋಜಿಸಿದೆ. ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ.

ಬಿಗಿ ಭದ್ರತೆ ನಡುವೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗೆ ಉತ್ತರ ಪ್ರದೇಶದ ಪೊಲೀಸರು ಮುಜಾಫರ್‌ನಗರದಲ್ಲಿ ಭಾರಿ ಭದ್ರತೆ ಹೆಚ್ಚಿಸಿದ್ದಾರೆ.

“ಮುಜಾಫರ್‌ನಗರದಲ್ಲಿ 8,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡು ರಾಪಿಡ್ ಆಕ್ಷನ್ ಫೋರ್ಸ್ ಮತ್ತು 1,200 ಪೊಲೀಸರು ಸೇರಿದ್ದಾರೆ. ಡ್ರೋನ್ ಕ್ಯಾಮೆರಾಗಳನ್ನು ವೈಮಾನಿಕ ಕಣ್ಗಾವಲುಗಾಗಿ ಬಳಸಲಾಗುತ್ತಿದ್ದು, 200 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ” ಎಂದು ಮುಜಾಫರ್ ನಗರ ಎಸ್‌ಎಸ್‌ಪಿ ಅಭಿಷೇಕ್ ಯಾದವ್ ತಿಳಿಸಿದ್ದಾರೆ.

ಮಹಾಪಂಚಾಯತ್‌ಗೆ ಭಾರಿ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿದ್ದು, ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಿದೆ. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: ತಾಳ್ಮೆ, ಬದ್ಧತೆ, ಶಿಸ್ತಿನ ಐತಿಹಾಸಿಕ ಹೋರಾಟಕ್ಕೆ 9 ತಿಂಗಳು

ಮುಜಾಫರ್‌ನಗರದ ಸರ್ಕಾರಿ ಇಂಟರ್ ಕಾಲೇಜು ಮೈದಾನದಿಂದ 4 ಕಿಲೋಮೀಟರ್ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಎಲ್ಇಡಿ ಪರದೆಗಳು ಮತ್ತು ಮೈಕ್ರೊಫೋನ್ಗಳನ್ನು ಅಳವಡಿಸಲಾಗಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಸಾನ್ ಮಹಾಪಂಚಾಯತ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳವು ಕಿಸಾನ್ ಮಹಾಪಂಚಾಯತ್‌ಗೆ ಬೆಂಬಲ ಘೋಷಿಸಿದೆ.

ಹರಿಯಾಣದ ರೈತರೊಬ್ಬರು, “ನಮ್ಮ ಪ್ರಧಾನಿಗೆ ರೈತರ ಬಗ್ಗೆ ಗೌರವವಿಲ್ಲ. ಚಳಿಗಾಲದಲ್ಲಿ ರೈತರನ್ನು ರಸ್ತೆಯಲ್ಲಿ ಕೂರುವಂತೆ ಮಾಡಿದ ಮೋದಿ ಜೀ ಯಾವ ರೀತಿಯ ರಾಜ..?” ಎಂದು ಪ್ರಶ್ನಿಸಿದ್ದಾರೆ.

“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಮಹಾಪಂಚಾಯತ್‌ನಲ್ಲಿ ಜಮಾಯಿಸಿದ್ದೇವೆ. ಈ ಮೂರು ಕರಾಳ ಕಾನೂನುಗಳನ್ನು ಹಿಂಪಡೆಯುವಂತೆ   ಪ್ರಧಾನ ಮಂತ್ರಿಗೆ ವಿನಂತಿಸುತ್ತೇವೆ” ಎಂದು ರೈತ ಮಹಿಳೆಯೊಬ್ಬರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಉತ್ತರಪ್ರದೇಶಕ್ಕೆ ಈ ಕಿಸಾನ್ ಮಹಾಪಂಚಾಯತ್‌  ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಈ ಹಿಂದೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿ ಖಂಡನೆಗೆ ಒಳಗಾಗಿತ್ತು.


ಇದನ್ನೂ ಓದಿ: ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...