Homeಮುಖಪುಟಉತ್ತರ ಪ್ರದೇಶ| ಅವಧಿ ಮುಗಿದ ಗ್ಲೂಕೋಸ್‌ನಿಂದ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳ ಅಮಾನತು

ಉತ್ತರ ಪ್ರದೇಶ| ಅವಧಿ ಮುಗಿದ ಗ್ಲೂಕೋಸ್‌ನಿಂದ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳ ಅಮಾನತು

- Advertisement -
- Advertisement -

ಜಿಲ್ಲಾ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ (ಎಸ್‌ಎನ್‌ಸಿಯು) ಚಿಕಿತ್ಸೆ ಪಡೆಯುತ್ತಿದ್ದಾಗ ಅವಧಿ ಮುಗಿದ ಗ್ಲೂಕೋಸ್ ನೀಡಿದ ನಂತರ ತಮ್ಮ ಎರಡು ದಿನಗಳ ಮಗು ಸಾವನ್ನಪ್ಪಿದೆ ಎಂದು ಉತ್ತರ ಪ್ರದೇಶದ ಪಿಲಿಭಿತ್‌ನ ಕುಟುಂಬವೊಂದು ಆರೋಪಿಸಿದೆ.

ರಾಧಾ ಸಿಂಗ್ ಎಂಬ ಮಹಿಳೆ ಜನವರಿ 27 ರಂದು ಮನೆಯಲ್ಲಿ ಸಾಮಾನ್ಯ ಹೆರಿಗೆಯ ಮಗುವಿಗೆ ಜನ್ಮ ನೀಡಿದರು. ನವಜಾತ ಶಿಶುವಿಗೆ ಹಾಲುಣಿಸುವುದು ಕಷ್ಟವಾದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು.

ವೈದ್ಯರು ಮಗುವನ್ನು ಎಸ್‌ಎನ್‌ಸಿಯು ವಾರ್ಡ್‌ಗೆ ದಾಖಲಿಸಿದರು. ಆದರೆ, ಶೀಘ್ರದಲ್ಲೇ ಅದರ ಸ್ಥಿತಿ ಗಂಭೀರವಾಗಿದೆ ಎಂದು ಘೋಷಿಸಿದರು. ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ, ಮಗುವನ್ನು ಲಕ್ನೋಗೆ ಕಳುಹಿಸಲಾಯಿತು. ಆದರೆ, ಮಾರ್ಗಮಧ್ಯೆ ಶಿಶುವಿನ ಸ್ಥಿತಿ ಹದಗೆಟ್ಟಿ. ಆಂಬ್ಯುಲೆನ್ಸ್‌ನಲ್ಲಿ ನಿಧನವಾಗಿದೆ.

ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ನವಜಾತ ಶಿಶುವಿನ ಸಾವಿಗೆ ಕಾರಣ ಎಂದು ಕುಟುಂಬ ಆರೋಪಿಸಿದೆ. ಎಸ್‌ಎನ್‌ಸಿಯು ವಾರ್ಡ್‌ನಲ್ಲಿ ಅವಧಿ ಮುಗಿದ ಗ್ಲೂಕೋಸ್ ಬಾಟಲಿಯನ್ನು ಬಳಸಲಾಗಿದೆ ಎಂದು ಆರೋಪಿಸಿದ್ದಾರೆ. ನಂತರ, ಪೊಲೀಸ್ ದೂರು ದಾಖಲಿಸಲಾಯಿತು ಮತ್ತು ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿಶುವಿನ ಚಿಕ್ಕಪ್ಪ, “ನವಜಾತ ಶಿಶುವಿಗೆ ನೀಡಲಾದ ಬಾಟಲಿಯ ಅವಧಿ ಮೇ 2024 ರಲ್ಲಿ ಮುಗಿದಿದೆ” ಎಂದು ಆರೋಪಿಸಿದರು.

ಈ ಘಟನೆಯು ಜಿಲ್ಲಾ ಆಸ್ಪತ್ರೆಯ ಹೊರಗೆ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಕುಟುಂಬ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕುಟುಂಬ ಸದಸ್ಯರು ಮಗುವಿನ ಶವವನ್ನು ಕೈಗೆ ಡ್ರಿಪ್ ಮತ್ತು ಅವಧಿ ಮೀರಿದ ಗ್ಲೂಕೋಸ್ ಬಾಟಲಿಯೊಂದಿಗೆ ತಂದು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.

ಹೆಚ್ಚುತ್ತಿರುವ ಕೋಲಾಹಲದ ನಡುವೆ, ಪಿಲಿಭಿಟ್‌ನ ಮುಖ್ಯ ವೈದ್ಯಾಧಿಕಾರಿ ಅಲೋಕ್ ಕುಮಾರ್, ಪ್ರಕರಣದ ತನಿಖೆಗಾಗಿ ಇಬ್ಬರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ದೃಢಪಡಿಸಿದರು. ಪ್ರಾಥಮಿಕ ಸಂಶೋಧನೆಗಳ ಆಧಾರದ ಮೇಲೆ, ಇಬ್ಬರು ಸ್ಟಾಫ್ ನರ್ಸ್‌ಗಳಾದ ಪ್ರೀತಿ ಜೈಸ್ವಾಲ್ ಮತ್ತು ಪುಷ್ಪಾ ಮಿಶ್ರಾ ಅವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ‘ಸಾರ್ವಜನಿಕವಾಗಿ ಯಮುನಾ ನೀರು ಕುಡಿಯಿರಿ..’; ಅಮಿತ್ ಶಾ, ರಾಹುಲ್ ಗಾಂಧಿಗೆ ಕೇಜ್ರಿವಾಲ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...