Homeಅಂತರಾಷ್ಟ್ರೀಯಉತ್ತರ ಪ್ರದೇಶ: ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಪಾಕಿಸ್ತಾನದ ಪ್ರಜೆ!- ತನಿಖೆಗೆ ಆದೇಶ

ಉತ್ತರ ಪ್ರದೇಶ: ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಪಾಕಿಸ್ತಾನದ ಪ್ರಜೆ!- ತನಿಖೆಗೆ ಆದೇಶ

ಸುಮಾರು 35-40 ವರ್ಷಗಳ ಹಿಂದೆ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಪಾಕಿಸ್ತಾನದಿಂದ ಬಂದಿದ್ದ ಬಾನೋ ಬೇಗಂ, ನಂತರ ಸ್ಥಳೀಯ ನಿವಾಸಿ ಅಖ್ತರ್ ಅಲಿ ಎಂಬುವವರನ್ನು ವಿವಾಹವಾಗಿ, ಅಂದಿನಿಂದ ದೀರ್ಘವಾದಿ ವೀಸಾದಲ್ಲೇ ವಾಸಿಸುತ್ತಿದ್ದರು.

- Advertisement -
- Advertisement -

ಪಾಕಿಸ್ತಾನದ ಪ್ರಜೆಯಾಗಿರುವ ಮಹಿಳೆಯೊಬ್ಬರು ಉತ್ತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಂಗಾಮಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪಾಕಿಸ್ತಾನದ ಪೌರತ್ವವವನ್ನು ಹೊಂದಿರುವ ಕರಾಚಿಯ ಬಾನೋ ಬೇಗಂ ಇಟಾ ಜಿಲ್ಲೆಯ ಜಲೇಶರ್‌ ಬ್ಲಾಕ್‌ನ ಗ್ರಾಮ ಪಂಚಾಯಿತಿಯ ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಬಾನೋ ಬೇಗಂ, ಜಿಲ್ಲೆಯ ಸ್ಥಳೀಯ ವ್ಯಕ್ತಿಯನ್ನು ಮದುವೆಯಾಗಿದ್ದಾರೆ.

“ಬಾನೋ ಬೇಗಂ ಅವರನ್ನು ಅಧ್ಯಕ್ಷೆ ಸ್ಥಾನದಿಂದ ತೆಗೆದುಹಾಕಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಲಾಗಿದೆ. ಬಾನೋ ಬೇಗಂ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಇಟಾ ಜಿಲ್ಲಾ ಪಂಚಾಯತ್ ರಾಜ್ ಅಧಿಕಾರಿ (DPRO) ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

ಗ್ರಾಮ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾಗಲು, ಪಂಚಾಯಿತಿಯ ಹಂಗಾಮಿ ಅಧ್ಯಕ್ಷರಾಗಲು ಮಹಿಳೆಗೆ ಆಧಾರ್ ಕಾರ್ಡ್ ಮತ್ತು ಇತರ ದಾಖಲೆಗಳು ಹೇಗೆ ದೊರೆತವು ಎಂದು ಕಂಡುಹಿಡಿಯಲು ಇಟಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಖ್ಲಾಲ್ ಭಾರತಿ ತನಿಖೆಗೆ ಆದೇಶಿಸಿದ್ದಾರೆ. ಬಾನೋ ಬೇಗಂಗೆ ಸಹಾಯ ಮಾಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

65 ವರ್ಷದ ಬಾನೋ ಬೇಗಂ ಸುಮಾರು 35-40 ವರ್ಷಗಳ ಹಿಂದೆ ಇಟಾದಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಪಾಕಿಸ್ತಾನದಿಂದ ಬಂದಿದ್ದರು. ನಂತರ ಆಕೆ ಸ್ಥಳೀಯ ನಿವಾಸಿ ಅಖ್ತರ್ ಅಲಿ ಎಂಬುವವರನ್ನು ವಿವಾಹವಾಗಿ, ಅಂದಿನಿಂದ ದೀರ್ಘವಾದಿ ವೀಸಾದಲ್ಲೇ ವಾಸಿಸುತ್ತಿದ್ದರು. ಅಲ್ಲದೇ ಭಾರತದ ಪೌರತ್ವ ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು ಎನ್ನಲಾಗಿದೆ.

ಬಾನೋ ಬೇಗಂ ಪಾಕಿಸ್ತಾನಿ ಪ್ರಜೆ ಎಂದು ಆರೋಪಿಸಿ ಗ್ರಾಮಸ್ಥರೊಬ್ಬರು ಆಕೆಯ ವಿರುದ್ಧ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

’2015 ರ ಸ್ಥಳೀಯ ಸಂಸ್ಥೆಯ ಚುನಾವಣೆಯ ಸಮಯದಲ್ಲಿ, ಬಾನೊ ಬೇಗಂ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶೆಹ್ನಾಜ್ ಬೇಗಂ ಕಳೆದ ಜನವರಿ 9, 2020 ರಂದು ನಿಧನರಾಗಿದ್ದರು. ಶೆಹ್ನಾಜ್ ಅವರ ಮರಣದ ನಂತರ, ಬಾನೋ ಬೇಗಂ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದರು’ ಎಂದು DPRO ಅಲೋಕ್ ಪ್ರಿಯದರ್ಶಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...