Homeಮುಖಪುಟಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ- ಭಾನುವಾರಗಳಂದು ಲಾಕ್‌ಡೌನ್

ಉತ್ತರಪ್ರದೇಶ: 2ನೆ ಬಾರಿ ಮಾಸ್ಕ್ ನಿಯಮ ಉಲ್ಲಂಘಿಸಿದರೆ 10 ಸಾವಿರ ರೂ. ದಂಡ- ಭಾನುವಾರಗಳಂದು ಲಾಕ್‌ಡೌನ್

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೊನಾ ವಿರುದ್ಧ ಹೋರಾಡಲು ಹೊಸ ಕಠಿಣ ನಿಯಮಗಳ ಭಾಗವಾಗಿ ಮಾಸ್ಕ್ ಇಲ್ಲದೇ ಮೊದಲ ಸಲ ಸಿಕ್ಕಿಬಿದ್ದ ಜನರಿಗೆ ಒಂದು ಸಾವಿರ ರೂ ಮತ್ತು ಎರಡನೇ ಸಲವೂ ಆ ತಪ್ಪು ಮಾಡಿದರೆ 10 ಸಾವಿರ ರೂ ದಂಡ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶದಲ್ಲಿ ವಾರಕ್ಕೊಮ್ಮೆ (ಭಾನುವಾರ) ಲಾಕ್ ಡೌನ್ ಮಾಡಲು ಆದೇಶಿಸಿರುವ ಅವರು, ಅಗತ್ಯ ಸೇವೆಗಳು ಮತ್ತು ಚಟುವಟಿಕೆಗಳಿಗೆ ಮಾತ್ರ ಅಂದು ವಿನಾಯಿತಿ ನೀಡಿದ್ದಾರೆ. ಇದು ಸಾಪ್ತಾಹಿಕ ವೈಶಿಷ್ಟ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ರಾಜ್ಯ ಸರ್ಕಾರವು ಮೇ 15 ರವರೆಗೆ ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿತು. ರಾಜ್ಯದಲ್ಲಿ ಏಕದಿನದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾದ ಪರಿಣಾಮ ರಾಜ್ಯ ಪರೀಕ್ಷಾ ಮಂಡಳಿಯ ಪರೀಕ್ಷೆಗಳನ್ನು ಮುಂದೂಡಿದೆ.

ಉತ್ತರಪ್ರದೇಶದಲ್ಲಿ ಗುರುವಾರ 104 ಸಾವುಗಳು ಮತ್ತು 22,439 ಹೊಸ ಪ್ರಕರಣಗಳು ವರದಿಯಾಗಿವೆ. ಬುಧವಾರ 20,510 ಪ್ರಕರಣಗಳ ನಂತರ ಸತತ ಎರಡನೇ ದಿನವೂ ದಾಖಲೆಯ ಹೆಚ್ಚಳವಾಗಿದೆ.

10 ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಬೆಳಗಿನ 7ರವರೆಗೆ ರಾತ್ರಿಯ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಲಖನೌ, ಪ್ರಯಾಗರಾಜ್, ವಾರಣಾಸಿ, ಕಾನ್ಪುರ ನಗರ, ಗೌತಮ್ ಬುದ್ಧ ನಗರ, ಘಾಜಿಯಾಬಾದ್, ಮೀರತ್, ಗೋರಖ್‌ಪುರ ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಎಲ್ಲಾ 10 ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ಕೊರೊನಾ ಕರ್ಫ್ಯೂ ಜಾರಿಯಾಗಲಿದೆ ಎಂದು ಯೋಗಿ ಆದಿತ್ಯನಾಥ್ ಗುರುವಾರ ಟ್ವೀಟ್ ಮಾಡಿದ್ದಾರೆ.

ಲಕ್ನೋ, ವಾರಣಾಸಿ ಮತ್ತು ಪ್ರಯಾಗರಾಜ್ ಮುಂತಾದ ನಗರಗಳು ರಾಜ್ಯದಲ್ಲಿ ಹೆಚ್ಚು ಪ್ರಕರಣಗಳನ್ನು ಕಾಣುತ್ತಿವೆ.

ವಾರಣಾಸಿ ಆಡಳಿತವು ನಗರಕ್ಕೆ ಯೋಜಿಸಿರುವ ಪ್ರವಾಸವನ್ನು ಮುಂದೂಡಬೇಕೆಂದು ಸಂದರ್ಶಕರಿಗೆ ಮನವಿ ಮಾಡಿತು ಮತ್ತು ಅದರ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡುವವರು ಮೂರು ದಿನಗಳಿಗಿಂತ ಹಳೆಯದಾದ ಋಣಾತ್ಮಕ (ನೆಗೆಟಿವ್) ಆರ್‌ಟಿಪಿಸಿಆರ್ ಪರೀಕ್ಷಾ ವರದಿಯನ್ನು ಪಡೆಯುವುದು ಅತ್ಯಗತ್ಯವಾಗಿದೆ ಎಂದು ಗುರುವಾರ ತಿಳಿಸಿದೆ.

ಸೀಮಿತ ಆಸ್ಪತ್ರೆ ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆ ಪ್ರಮಾಣಗಳೊಂದಿಗೆ ಹೋರಾಡುತ್ತಿರುವ ವಿವಿಧ ರಾಜ್ಯಗಳು, ಎರಡನೇ ಅಲೆಯ ಕೊರೊನಾ ಹರಡುವುದನ್ನು ನಿಧಾನಗೊಳಿಸಲು ಕಟ್ಟುನಿಟ್ಟಿನ ನಿರ್ಬಂಧಗಳನ್ನು ತರುತ್ತಿವೆ.


ಇದನ್ನೂ ಓದಿ: ರಾತ್ರಿ ಕರ್ಫ್ಯೂ ಮುಂದುವರಿಕೆ, ಏ.20ರಂದು ಮುಂದಿನ ಸಭೆ: ಬಿ.ಎಸ್ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...