Homeಮುಖಪುಟ2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

- Advertisement -
- Advertisement -

“ಐಸಿಸ್ ಮಾಡ್ಯೂಲ್” ನೆಪದಲ್ಲಿ ಉತ್ತರಪ್ರದೇಶದ ಪೊಲೀಸರು ಮುಸ್ಲಿಂ ಯುವಕರ ಬಂಧನವನ್ನು ಮುಂದುವರಿಸಿದ್ದು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ಒಳಗೆ ಮತ್ತು ಹೊರಗೆ ಭಯೋತ್ಪಾದನಾ ಆರೋಪದ ಮೇಲೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಹಾಲಿ ಮತ್ತು ಮಾಜಿ ಸೇರಿ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

2023ರ ನ.23ರಂದು ಲಕ್ನೋದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಾಖಲಿಸಿದ ಎಫ್‌ಐಆರ್ ಬಳಿಕ ವಿದ್ಯಾರ್ಥಿಗಳ ಬಂಧನಗಳು ನಡೆದಿವೆ. ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ಎ ಮತ್ತು 122 ಜೊತೆಗೆ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಯುಎಪಿಎಯ ಸೆಕ್ಷನ್ 13, 18, 18 ಬಿ ಮತ್ತು 38ನ್ನು ವಿಧಿಸಲಾಗಿದೆ.

ರಾಜ್ಯದ ವಿರುದ್ಧದ ಅಪರಾಧಕ್ಕೆ  ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು, ಭಯೋತ್ಪಾದಕ ಕೃತ್ಯವನ್ನು ಎಸಗಲು ಪ್ರಯತ್ನಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಜನರನ್ನು ನೇಮಿಸಿಕೊಳ್ಳವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರು ಉತ್ತರಪ್ರದೇಶದಲ್ಲಿ ಅಥವಾ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಚಿಸಿಸಿದ್ದರು ಎಂದು ಉತ್ತರಪ್ರದೇಶದ ಎಟಿಎಸ್ ಆರೋಪಿಸಿದೆ.

ಅಲಿಘರ್ ಮುಸ್ಲಿಂ ವಿವಿಯ “ಐಸಿಸ್ ಮಾಡ್ಯೂಲ್” ಆರೋಪಿಸಿ ನವೆಂಬರ್ ಮೊದಲ ವಾರದಲ್ಲಿ ಈ ಕುರಿತ ಮೊದಲ ಬಂಧನ ನಡೆದಿದೆ. ಜನವರಿ 8, 2024ರಂದು ಎಟಿಎಸ್ ಅಮಾಸ್ ಅಹ್ಮದ್‌ನನ್ನು ಅಲಿಘರ್‌ನಲ್ಲಿ ಬಂಧಿಸಿತ್ತು. ಸಂಭಾಲ್‌ನ ಅಬ್ದುಲ್ ಸಮದ್ ಮಲಿಕ್ (25) ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಅಹ್ಮದ್ 2022ರಲ್ಲಿ AMUನಿಂದ ಮನೋವಿಜ್ಞಾನದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದರು. ಸಮದ್ ಮಲಿಕ್ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಏಳು ಮಂದಿಯೊಂದಿಗೆ ಈ ಇಬ್ಬರು ವ್ಯಕ್ತಿಗಳು ಎಎಂಯುನಲ್ಲಿ ಐಸಿಸ್ ಮಾಡ್ಯೂಲ್‌ನ್ನು ಸಿದ್ಧಪಡಿಸುತ್ತಿದ್ದಾರೆ ಮತ್ತು ಅದಕ್ಕೆ ಇತರರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಯುಪಿ ಎಟಿಎಸ್ ಆರೋಪಿಸಿದೆ. ಬಂಧಿತರೆಲ್ಲರೂ ಐಸಿಸ್‌ಗೆ ನಿಷ್ಠೆಯ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವೆಂಬರ್ 5 ರಂದು ಇಬ್ಬರು ಮಾಜಿ ಎಎಮ್‌ಯು ವಿದ್ಯಾರ್ಥಿಗಳಾದ ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ್ ಬಿನ್ ತಾರಿಕ್ ಅವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಯುಪಿ ಎಟಿಎಸ್ ಛತ್ತೀಸ್‌ಗಢದ ದುರ್ಗ್‌ನಿಂದ ಎಎಮ್‌ಯುನಿಂದ ಪಿಎಚ್‌ಡಿ ಪೂರ್ಣಗೊಳಿಸಿದ್ದ ವಜಿಹುದ್ದೀನ್ ಎಂಬ ಮೂರನೇ ವ್ಯಕ್ತಿಯನ್ನು ಬಂಧಿಸಿದೆ. ಕಳೆದ ನವೆಂಬರ್ 11ರಂದು ಎಟಿಎಸ್, ರಖೀಬ್ ಇಮಾಮ್,  ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್, ಮೊಹಮ್ಮದ್ ನಜೀಮ್ ಅವರನ್ನು ಬಂಧಿಸಿತ್ತು. ನೋಮನ್, ನಾಜಿಮ್ ಮತ್ತು ಸಿದ್ದಿಕಿ ಅವರನ್ನು ಅವರ ಹುಟ್ಟೂರಾದ ಸಂಭಾಲ್ ಜಿಲ್ಲೆಯಿಂದ ಬಂಧಿಸಲಾಗಿದ್ದು, ಇಮಾಮ್ ಅವರನ್ನು ಅಲಿಘರ್‌ನಲ್ಲಿ  ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ಹಿಂಸಾತ್ಮಕ ಜಿಹಾದ್ ಮೂಲಕ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಕಾನೂನನ್ನು ಹೇರಲು ಯೋಜಿಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ. ನಾಲ್ವರು ಐಸಿಸ್ ಸಾಹಿತ್ಯವನ್ನು ಸಮಾನ ಮನಸ್ಸಿನ ವ್ಯಕ್ತಿಗಳಿಗೆ ಹಂಚುತ್ತಿದ್ದರು, ರಹಸ್ಯ ಸಭೆಗಳನ್ನು ಸೇರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಯುವಕರೆಲ್ಲರೂ SAMU ಎಂಬ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು. ಈ ಸಂಘಟನೆ ಕ್ಯಾಂಪಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದು ವಿದ್ಯಾರ್ಥಿಗಳ ಸಂಘಟನೆಯಾಗಿದೆ. ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಆರಂಭಿಕ ಹಂತದಲ್ಲಿ ಸರಿಯಾದ ಪುರಾವೆಗಳಿಲ್ಲದೆ ದೊಡ್ಡ ಆರೋಪ ಹೊರಿಸುತ್ತಿರುವ ತನಿಖೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು  ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಲಿಗಢ್ ಮುಸ್ಲಿಂ ವಿವಿಯ ಅಧಿಕಾರಿಯೊಬ್ಬರು ಮಾತನಾಡುತ್ತಾ, ಪೊಲೀಸರ ನಿರೂಪಣೆಯು “ಆಧಾರರಹಿತ”, ಎಟಿಎಸ್ ಹೇಳಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ, ಅಂತಹ ನಡವಳಿಕೆ ವಿರುದ್ಧ ವಿಶ್ವವಿದ್ಯಾಲಯವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ. ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ವಿಶ್ವವಿದ್ಯಾನಿಲಯವು ತನಿಖೆಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಕೆಲವು ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದಿದ್ದರೂ, ಯಾವುದೇ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು AMUನ ವಾಸಿಂ ಅಲಿ ಹೇಳಿದ್ದಾರೆ. ಈ ಆರೋಪಗಳ ಕುರಿತ ಸತ್ಯ ಮತ್ತು ಅವುಗಳನ್ನು ಯಾವ ಆಧಾರದ ಮೇಲೆ ಮಾಡಲಾಗಿದೆ ಎಂದು ತನಿಖೆಯ ಮೂಲಕ ತಿಳಿಯಲಾಗುವುದು ಅಥವಾ ನ್ಯಾಯಾಲಯದಲ್ಲಿ ನಿರ್ಧರಿಸಲಾಗುವುದು ಎಂದು ಅಲಿ ಹೇಳಿದ್ದಾರೆ.

ಈ ಬಂಧನಗಳು ಮತ್ತು ಯುಪಿ ಪೊಲೀಸರು ಆಪಾದಿಸಿದ ಐಸಿಸ್ ಮಾಡ್ಯೂಲ್ ಜೊತೆ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧ ಕಲ್ಪಿಸುವುದು ಎಎಂಯು ಮೇಲೆ ಆಳವಾಗಿ ಪರಿಣಾಮ ಬೀರುವುದಿಲ್ಲ ಎಂದು ಅಲಿ ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ 25,000 ವಿದ್ಯಾರ್ಥಿಗಳಿದ್ದಾರೆ. ಪ್ರತಿ ವರ್ಷ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಈ ಪೈಕಿ 3-4 ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನವರು ಮಾಜಿ ವಿದ್ಯಾರ್ಥಿಗಳು, ಅಂತಹ ಆರೋಪಗಳನ್ನು ಎದುರಿಸಿದರೆ, ಅದು ವಿಶ್ವವಿದ್ಯಾಲಯದ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಆಲಿಗಢ್ ಮುಸ್ಲಿಂ ವಿವಿಯ ವಾಸಿಂ ಅಲಿ ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...