Homeಮುಖಪುಟ2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

- Advertisement -
- Advertisement -

“ಐಸಿಸ್ ಮಾಡ್ಯೂಲ್” ನೆಪದಲ್ಲಿ ಉತ್ತರಪ್ರದೇಶದ ಪೊಲೀಸರು ಮುಸ್ಲಿಂ ಯುವಕರ ಬಂಧನವನ್ನು ಮುಂದುವರಿಸಿದ್ದು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ಒಳಗೆ ಮತ್ತು ಹೊರಗೆ ಭಯೋತ್ಪಾದನಾ ಆರೋಪದ ಮೇಲೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಹಾಲಿ ಮತ್ತು ಮಾಜಿ ಸೇರಿ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

2023ರ ನ.23ರಂದು ಲಕ್ನೋದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಾಖಲಿಸಿದ ಎಫ್‌ಐಆರ್ ಬಳಿಕ ವಿದ್ಯಾರ್ಥಿಗಳ ಬಂಧನಗಳು ನಡೆದಿವೆ. ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ಎ ಮತ್ತು 122 ಜೊತೆಗೆ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಯುಎಪಿಎಯ ಸೆಕ್ಷನ್ 13, 18, 18 ಬಿ ಮತ್ತು 38ನ್ನು ವಿಧಿಸಲಾಗಿದೆ.

ರಾಜ್ಯದ ವಿರುದ್ಧದ ಅಪರಾಧಕ್ಕೆ  ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು, ಭಯೋತ್ಪಾದಕ ಕೃತ್ಯವನ್ನು ಎಸಗಲು ಪ್ರಯತ್ನಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಜನರನ್ನು ನೇಮಿಸಿಕೊಳ್ಳವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರು ಉತ್ತರಪ್ರದೇಶದಲ್ಲಿ ಅಥವಾ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಚಿಸಿಸಿದ್ದರು ಎಂದು ಉತ್ತರಪ್ರದೇಶದ ಎಟಿಎಸ್ ಆರೋಪಿಸಿದೆ.

ಅಲಿಘರ್ ಮುಸ್ಲಿಂ ವಿವಿಯ “ಐಸಿಸ್ ಮಾಡ್ಯೂಲ್” ಆರೋಪಿಸಿ ನವೆಂಬರ್ ಮೊದಲ ವಾರದಲ್ಲಿ ಈ ಕುರಿತ ಮೊದಲ ಬಂಧನ ನಡೆದಿದೆ. ಜನವರಿ 8, 2024ರಂದು ಎಟಿಎಸ್ ಅಮಾಸ್ ಅಹ್ಮದ್‌ನನ್ನು ಅಲಿಘರ್‌ನಲ್ಲಿ ಬಂಧಿಸಿತ್ತು. ಸಂಭಾಲ್‌ನ ಅಬ್ದುಲ್ ಸಮದ್ ಮಲಿಕ್ (25) ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಅಹ್ಮದ್ 2022ರಲ್ಲಿ AMUನಿಂದ ಮನೋವಿಜ್ಞಾನದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದರು. ಸಮದ್ ಮಲಿಕ್ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಏಳು ಮಂದಿಯೊಂದಿಗೆ ಈ ಇಬ್ಬರು ವ್ಯಕ್ತಿಗಳು ಎಎಂಯುನಲ್ಲಿ ಐಸಿಸ್ ಮಾಡ್ಯೂಲ್‌ನ್ನು ಸಿದ್ಧಪಡಿಸುತ್ತಿದ್ದಾರೆ ಮತ್ತು ಅದಕ್ಕೆ ಇತರರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಯುಪಿ ಎಟಿಎಸ್ ಆರೋಪಿಸಿದೆ. ಬಂಧಿತರೆಲ್ಲರೂ ಐಸಿಸ್‌ಗೆ ನಿಷ್ಠೆಯ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವೆಂಬರ್ 5 ರಂದು ಇಬ್ಬರು ಮಾಜಿ ಎಎಮ್‌ಯು ವಿದ್ಯಾರ್ಥಿಗಳಾದ ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ್ ಬಿನ್ ತಾರಿಕ್ ಅವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಯುಪಿ ಎಟಿಎಸ್ ಛತ್ತೀಸ್‌ಗಢದ ದುರ್ಗ್‌ನಿಂದ ಎಎಮ್‌ಯುನಿಂದ ಪಿಎಚ್‌ಡಿ ಪೂರ್ಣಗೊಳಿಸಿದ್ದ ವಜಿಹುದ್ದೀನ್ ಎಂಬ ಮೂರನೇ ವ್ಯಕ್ತಿಯನ್ನು ಬಂಧಿಸಿದೆ. ಕಳೆದ ನವೆಂಬರ್ 11ರಂದು ಎಟಿಎಸ್, ರಖೀಬ್ ಇಮಾಮ್,  ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್, ಮೊಹಮ್ಮದ್ ನಜೀಮ್ ಅವರನ್ನು ಬಂಧಿಸಿತ್ತು. ನೋಮನ್, ನಾಜಿಮ್ ಮತ್ತು ಸಿದ್ದಿಕಿ ಅವರನ್ನು ಅವರ ಹುಟ್ಟೂರಾದ ಸಂಭಾಲ್ ಜಿಲ್ಲೆಯಿಂದ ಬಂಧಿಸಲಾಗಿದ್ದು, ಇಮಾಮ್ ಅವರನ್ನು ಅಲಿಘರ್‌ನಲ್ಲಿ  ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ಹಿಂಸಾತ್ಮಕ ಜಿಹಾದ್ ಮೂಲಕ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಕಾನೂನನ್ನು ಹೇರಲು ಯೋಜಿಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ. ನಾಲ್ವರು ಐಸಿಸ್ ಸಾಹಿತ್ಯವನ್ನು ಸಮಾನ ಮನಸ್ಸಿನ ವ್ಯಕ್ತಿಗಳಿಗೆ ಹಂಚುತ್ತಿದ್ದರು, ರಹಸ್ಯ ಸಭೆಗಳನ್ನು ಸೇರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಯುವಕರೆಲ್ಲರೂ SAMU ಎಂಬ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು. ಈ ಸಂಘಟನೆ ಕ್ಯಾಂಪಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದು ವಿದ್ಯಾರ್ಥಿಗಳ ಸಂಘಟನೆಯಾಗಿದೆ. ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಆರಂಭಿಕ ಹಂತದಲ್ಲಿ ಸರಿಯಾದ ಪುರಾವೆಗಳಿಲ್ಲದೆ ದೊಡ್ಡ ಆರೋಪ ಹೊರಿಸುತ್ತಿರುವ ತನಿಖೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು  ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಲಿಗಢ್ ಮುಸ್ಲಿಂ ವಿವಿಯ ಅಧಿಕಾರಿಯೊಬ್ಬರು ಮಾತನಾಡುತ್ತಾ, ಪೊಲೀಸರ ನಿರೂಪಣೆಯು “ಆಧಾರರಹಿತ”, ಎಟಿಎಸ್ ಹೇಳಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ, ಅಂತಹ ನಡವಳಿಕೆ ವಿರುದ್ಧ ವಿಶ್ವವಿದ್ಯಾಲಯವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ. ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ವಿಶ್ವವಿದ್ಯಾನಿಲಯವು ತನಿಖೆಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಕೆಲವು ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದಿದ್ದರೂ, ಯಾವುದೇ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು AMUನ ವಾಸಿಂ ಅಲಿ ಹೇಳಿದ್ದಾರೆ. ಈ ಆರೋಪಗಳ ಕುರಿತ ಸತ್ಯ ಮತ್ತು ಅವುಗಳನ್ನು ಯಾವ ಆಧಾರದ ಮೇಲೆ ಮಾಡಲಾಗಿದೆ ಎಂದು ತನಿಖೆಯ ಮೂಲಕ ತಿಳಿಯಲಾಗುವುದು ಅಥವಾ ನ್ಯಾಯಾಲಯದಲ್ಲಿ ನಿರ್ಧರಿಸಲಾಗುವುದು ಎಂದು ಅಲಿ ಹೇಳಿದ್ದಾರೆ.

ಈ ಬಂಧನಗಳು ಮತ್ತು ಯುಪಿ ಪೊಲೀಸರು ಆಪಾದಿಸಿದ ಐಸಿಸ್ ಮಾಡ್ಯೂಲ್ ಜೊತೆ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧ ಕಲ್ಪಿಸುವುದು ಎಎಂಯು ಮೇಲೆ ಆಳವಾಗಿ ಪರಿಣಾಮ ಬೀರುವುದಿಲ್ಲ ಎಂದು ಅಲಿ ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ 25,000 ವಿದ್ಯಾರ್ಥಿಗಳಿದ್ದಾರೆ. ಪ್ರತಿ ವರ್ಷ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಈ ಪೈಕಿ 3-4 ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನವರು ಮಾಜಿ ವಿದ್ಯಾರ್ಥಿಗಳು, ಅಂತಹ ಆರೋಪಗಳನ್ನು ಎದುರಿಸಿದರೆ, ಅದು ವಿಶ್ವವಿದ್ಯಾಲಯದ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಆಲಿಗಢ್ ಮುಸ್ಲಿಂ ವಿವಿಯ ವಾಸಿಂ ಅಲಿ ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...