Homeಮುಖಪುಟ2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

- Advertisement -
- Advertisement -

“ಐಸಿಸ್ ಮಾಡ್ಯೂಲ್” ನೆಪದಲ್ಲಿ ಉತ್ತರಪ್ರದೇಶದ ಪೊಲೀಸರು ಮುಸ್ಲಿಂ ಯುವಕರ ಬಂಧನವನ್ನು ಮುಂದುವರಿಸಿದ್ದು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ಒಳಗೆ ಮತ್ತು ಹೊರಗೆ ಭಯೋತ್ಪಾದನಾ ಆರೋಪದ ಮೇಲೆ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಹಾಲಿ ಮತ್ತು ಮಾಜಿ ಸೇರಿ 9 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

2023ರ ನ.23ರಂದು ಲಕ್ನೋದಲ್ಲಿ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಾಖಲಿಸಿದ ಎಫ್‌ಐಆರ್ ಬಳಿಕ ವಿದ್ಯಾರ್ಥಿಗಳ ಬಂಧನಗಳು ನಡೆದಿವೆ. ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121 ಎ ಮತ್ತು 122 ಜೊತೆಗೆ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ ಯುಎಪಿಎಯ ಸೆಕ್ಷನ್ 13, 18, 18 ಬಿ ಮತ್ತು 38ನ್ನು ವಿಧಿಸಲಾಗಿದೆ.

ರಾಜ್ಯದ ವಿರುದ್ಧದ ಅಪರಾಧಕ್ಕೆ  ಪಿತೂರಿ, ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು, ಭಯೋತ್ಪಾದಕ ಕೃತ್ಯವನ್ನು ಎಸಗಲು ಪ್ರಯತ್ನಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಜನರನ್ನು ನೇಮಿಸಿಕೊಳ್ಳವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರು ಉತ್ತರಪ್ರದೇಶದಲ್ಲಿ ಅಥವಾ ದೇಶದ ಇತರ ಭಾಗಗಳಲ್ಲಿ ದೊಡ್ಡ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಚಿಸಿಸಿದ್ದರು ಎಂದು ಉತ್ತರಪ್ರದೇಶದ ಎಟಿಎಸ್ ಆರೋಪಿಸಿದೆ.

ಅಲಿಘರ್ ಮುಸ್ಲಿಂ ವಿವಿಯ “ಐಸಿಸ್ ಮಾಡ್ಯೂಲ್” ಆರೋಪಿಸಿ ನವೆಂಬರ್ ಮೊದಲ ವಾರದಲ್ಲಿ ಈ ಕುರಿತ ಮೊದಲ ಬಂಧನ ನಡೆದಿದೆ. ಜನವರಿ 8, 2024ರಂದು ಎಟಿಎಸ್ ಅಮಾಸ್ ಅಹ್ಮದ್‌ನನ್ನು ಅಲಿಘರ್‌ನಲ್ಲಿ ಬಂಧಿಸಿತ್ತು. ಸಂಭಾಲ್‌ನ ಅಬ್ದುಲ್ ಸಮದ್ ಮಲಿಕ್ (25) ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಅಹ್ಮದ್ 2022ರಲ್ಲಿ AMUನಿಂದ ಮನೋವಿಜ್ಞಾನದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದರು. ಸಮದ್ ಮಲಿಕ್ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿದ್ದ ಏಳು ಮಂದಿಯೊಂದಿಗೆ ಈ ಇಬ್ಬರು ವ್ಯಕ್ತಿಗಳು ಎಎಂಯುನಲ್ಲಿ ಐಸಿಸ್ ಮಾಡ್ಯೂಲ್‌ನ್ನು ಸಿದ್ಧಪಡಿಸುತ್ತಿದ್ದಾರೆ ಮತ್ತು ಅದಕ್ಕೆ ಇತರರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಯುಪಿ ಎಟಿಎಸ್ ಆರೋಪಿಸಿದೆ. ಬಂಧಿತರೆಲ್ಲರೂ ಐಸಿಸ್‌ಗೆ ನಿಷ್ಠೆಯ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನವೆಂಬರ್ 5 ರಂದು ಇಬ್ಬರು ಮಾಜಿ ಎಎಮ್‌ಯು ವಿದ್ಯಾರ್ಥಿಗಳಾದ ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ್ ಬಿನ್ ತಾರಿಕ್ ಅವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಯುಪಿ ಎಟಿಎಸ್ ಛತ್ತೀಸ್‌ಗಢದ ದುರ್ಗ್‌ನಿಂದ ಎಎಮ್‌ಯುನಿಂದ ಪಿಎಚ್‌ಡಿ ಪೂರ್ಣಗೊಳಿಸಿದ್ದ ವಜಿಹುದ್ದೀನ್ ಎಂಬ ಮೂರನೇ ವ್ಯಕ್ತಿಯನ್ನು ಬಂಧಿಸಿದೆ. ಕಳೆದ ನವೆಂಬರ್ 11ರಂದು ಎಟಿಎಸ್, ರಖೀಬ್ ಇಮಾಮ್,  ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್, ಮೊಹಮ್ಮದ್ ನಜೀಮ್ ಅವರನ್ನು ಬಂಧಿಸಿತ್ತು. ನೋಮನ್, ನಾಜಿಮ್ ಮತ್ತು ಸಿದ್ದಿಕಿ ಅವರನ್ನು ಅವರ ಹುಟ್ಟೂರಾದ ಸಂಭಾಲ್ ಜಿಲ್ಲೆಯಿಂದ ಬಂಧಿಸಲಾಗಿದ್ದು, ಇಮಾಮ್ ಅವರನ್ನು ಅಲಿಘರ್‌ನಲ್ಲಿ  ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳು ಹಿಂಸಾತ್ಮಕ ಜಿಹಾದ್ ಮೂಲಕ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಕಾನೂನನ್ನು ಹೇರಲು ಯೋಜಿಸುತ್ತಿದ್ದರು ಎಂದು ಎಟಿಎಸ್ ಆರೋಪಿಸಿದೆ. ನಾಲ್ವರು ಐಸಿಸ್ ಸಾಹಿತ್ಯವನ್ನು ಸಮಾನ ಮನಸ್ಸಿನ ವ್ಯಕ್ತಿಗಳಿಗೆ ಹಂಚುತ್ತಿದ್ದರು, ರಹಸ್ಯ ಸಭೆಗಳನ್ನು ಸೇರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಯುವಕರೆಲ್ಲರೂ SAMU ಎಂಬ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಂಘಟನೆ ಜೊತೆ ಸಂಬಂಧ ಹೊಂದಿದ್ದರು. ಈ ಸಂಘಟನೆ ಕ್ಯಾಂಪಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದು ವಿದ್ಯಾರ್ಥಿಗಳ ಸಂಘಟನೆಯಾಗಿದೆ. ಅಂತಹ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಆರಂಭಿಕ ಹಂತದಲ್ಲಿ ಸರಿಯಾದ ಪುರಾವೆಗಳಿಲ್ಲದೆ ದೊಡ್ಡ ಆರೋಪ ಹೊರಿಸುತ್ತಿರುವ ತನಿಖೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು  ಮಾತನಾಡುತ್ತಾ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಲಿಗಢ್ ಮುಸ್ಲಿಂ ವಿವಿಯ ಅಧಿಕಾರಿಯೊಬ್ಬರು ಮಾತನಾಡುತ್ತಾ, ಪೊಲೀಸರ ನಿರೂಪಣೆಯು “ಆಧಾರರಹಿತ”, ಎಟಿಎಸ್ ಹೇಳಿರುವ ಆರೋಪಗಳು ಇನ್ನೂ ಸಾಬೀತಾಗಿಲ್ಲ, ಅಂತಹ ನಡವಳಿಕೆ ವಿರುದ್ಧ ವಿಶ್ವವಿದ್ಯಾಲಯವು “ಶೂನ್ಯ ಸಹಿಷ್ಣುತೆ” ನೀತಿಯನ್ನು ಹೊಂದಿದೆ. ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಮತ್ತು ವಿಶ್ವವಿದ್ಯಾನಿಲಯವು ತನಿಖೆಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯದ ಕೆಲವು ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದಿದ್ದರೂ, ಯಾವುದೇ ಸಂಸ್ಥೆಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು AMUನ ವಾಸಿಂ ಅಲಿ ಹೇಳಿದ್ದಾರೆ. ಈ ಆರೋಪಗಳ ಕುರಿತ ಸತ್ಯ ಮತ್ತು ಅವುಗಳನ್ನು ಯಾವ ಆಧಾರದ ಮೇಲೆ ಮಾಡಲಾಗಿದೆ ಎಂದು ತನಿಖೆಯ ಮೂಲಕ ತಿಳಿಯಲಾಗುವುದು ಅಥವಾ ನ್ಯಾಯಾಲಯದಲ್ಲಿ ನಿರ್ಧರಿಸಲಾಗುವುದು ಎಂದು ಅಲಿ ಹೇಳಿದ್ದಾರೆ.

ಈ ಬಂಧನಗಳು ಮತ್ತು ಯುಪಿ ಪೊಲೀಸರು ಆಪಾದಿಸಿದ ಐಸಿಸ್ ಮಾಡ್ಯೂಲ್ ಜೊತೆ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಬಂಧ ಕಲ್ಪಿಸುವುದು ಎಎಂಯು ಮೇಲೆ ಆಳವಾಗಿ ಪರಿಣಾಮ ಬೀರುವುದಿಲ್ಲ ಎಂದು ಅಲಿ ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ 25,000 ವಿದ್ಯಾರ್ಥಿಗಳಿದ್ದಾರೆ. ಪ್ರತಿ ವರ್ಷ ಸಾವಿರಾರು ಮಂದಿ ಬಂದು ಹೋಗುತ್ತಾರೆ. ಈ ಪೈಕಿ 3-4 ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನವರು ಮಾಜಿ ವಿದ್ಯಾರ್ಥಿಗಳು, ಅಂತಹ ಆರೋಪಗಳನ್ನು ಎದುರಿಸಿದರೆ, ಅದು ವಿಶ್ವವಿದ್ಯಾಲಯದ ಇಮೇಜ್ ಮೇಲೆ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಆಲಿಗಢ್ ಮುಸ್ಲಿಂ ವಿವಿಯ ವಾಸಿಂ ಅಲಿ ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...