Homeಮುಖಪುಟಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

’ನನಗೆ ಹಿಂದೂ ಮಹಿಳೆಯೊಂದಿಗೆ ಯಾವುದೇ ಸಂಬಂಧವಿಲ್ಲ, ಆಕೆ ಒಂದು ವರ್ಷದ ಹಿಂದೆಯೇ ಮದುವೆಯಾಗಿದ್ದಾರೆ. ನಾನು ನಿರಪರಾಧಿ’ ಎಂದು ಬಂಧಿತ ತಿಳಿಸಿದ್ದಾನೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಹಲವು ವಿರೋಧಗಳ ನಡುವೆಯೇ ಜಾರಿಗೆ ತರಲಾದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯಡಿ ಹಿಂದೂ ಮಹಿಳೆಯನ್ನು ಇಸ್ಲಾಂಗೆ ಪರಿವರ್ತಿಸಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮುಸ್ಲಿಂ ವ್ಯಕ್ತಿಯನ್ನು ಬಂಧಿಸಿದ್ದಾರೆ.

“ಲವ್ ಜಿಹಾದ್” ಅನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಇದು ಮೊದಲನೆ ಪ್ರಕರಣವಾಗಿದೆ.

“ಮತಾಂತರಗೊಳ್ಳಲು ಒತ್ತಡ ಹೇರಿದ ಆರೋಪ ಹಿನ್ನಲೆ ಒವೈಸ್‌ ಅಹ್ಮದ್ ಎಂಬ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಬರೇಲಿ ಜಿಲ್ಲಾ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ದೃಢಪಡಿಸಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

21 ವರ್ಷದ ಮುಸ್ಲಿಂ ಯುವಕ ನನ್ನ ಮಗಳನ್ನು ಮತಾಂತರಗೊಳ್ಳುವಂತೆ ಒತ್ತಡ ಹೇರಿದ್ದಾರೆ ಎಂದು ಶರೀಫ್‌ನಗರ ಗ್ರಾಮದ ಟೀಕಾರಾಮ್‌ ಎಂಬುವವರು ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಒವೈಸ್‌ ಅಹ್ಮದ್‌ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಡಿಐಜಿ ರಾಜೇಶ್‌ ಕುಮಾರ್‌ ಪಾಂಡೆ ಗುರುವಾರ ತಿಳಿಸಿದ್ದಾರೆ.

’ಬಂಧಿತ  ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನನಗೆ ಹಿಂದೂ ಮಹಿಳೆಯೊಂದಿಗೆ ಯಾವುದೇ ಸಂಬಂಧವಿಲ್ಲ, ಆಕೆ ಒಂದು ವರ್ಷದ ಹಿಂದೆಯೇ ಮದುವೆಯಾಗಿದ್ದಾರೆ. ನಾನು ನಿರಪರಾಧಿ” ಎಂದು ಆರೋಪಿ ತಿಳಿಸಿದ್ದಾರೆ ಎಂದು ದಿ ಪ್ರಿಂಟ್ ಉಲ್ಲೇಖಿಸಿದೆ.

ಬಂಧಿತ ವ್ಯಕ್ತಿ ಮತ್ತು ತನ್ನ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದಾಗಿನಿಂದ ಪರಿಚಿತರು. ಆಕೆಗೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದರು ಎಂದು ಯುವತಿಯ ತಂದೆ ಆರೋಪಿಸಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಬ್ಬರೂ ಓಡಿಹೋಗಿ ಮದುವೆಯಾಗಲು ಯೋಚಿಸಿದ್ದರು. ಆದರೆ, ಸಾಧ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...