Homeಮುಖಪುಟಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ 'ಇರಾನ್‌ಗೆ ಹೋಗಿ' ಎಂದ ಪೊಲೀಸ್‌ ಅಧಿಕಾರಿ :...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಮಾ.13) ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸಂಭಾಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಒ) ಕುಲದೀಪ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಕೆಲವರು ‘ಅತಿಯಾದ ಕಾಳಜಿ’ ಹೊಂದಿರುವಂತೆ ಕಾಣಿಸುತ್ತಿದೆ ಎಂದು ಕುಮಾರ್ ಹೇಳಿದ್ದಾರೆ. ಅಲ್ಲದೆ, ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗುವುದು, ಪ್ರತಿಭಟನೆಗಳನ್ನು ಸಂಘಟಿಸುವುದು ಅಥವಾ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಅಂತಹವರ ವಿರುದ್ಧ ಕಠಿಣ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಮುಂದುವರಿದು, ಅಂತಾರಾಷ್ಟ್ರೀಯ ಸಂಘರ್ಷಗಳು ಸ್ಥಳೀಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರಬಾರದು ಎಂದು ಕುಮಾರ್ ಹೇಳಿದ್ದಾರೆ.

ಇಲ್ಲಿ ಕೆಲವರು ಇರಾನ್-ಇಸ್ರೇಲ್ ಯುದ್ಧದ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಾ, ಅದರ ಬಗ್ಗೆ ಎದೆ ಬಡಿದುಕೊಳ್ಳುತ್ತಿದ್ದಾರೆ, ಅವರು ವಿಮಾನ ಹತ್ತಿ ಇರಾನ್‌ಗೆ ಹೋಗಲಿ. ಅಂತಹ ವಿಷಯಗಳನ್ನು ಸರ್ಕಾರಗಳು ನಿರ್ವಹಿಸಬೇಕೇ ಹೊರತು ಸ್ಥಳೀಯ ನಾಗರಿಕರಲ್ಲ ಎಂದಿದ್ದಾರೆ.

ಯುದ್ಧದ ಯಾವುದೇ ಒಂದು ಪಕ್ಷವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುವುದು, ವಿಷಯಕ್ಕೆ ಸಂಬಂಧಿಸಿದ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಪ್ರದರ್ಶಿಸುವುದು ಮತ್ತು ಈದ್ ಪ್ರಾರ್ಥನೆಯ ಸಮಯದಲ್ಲಿ ಅಡಚಣೆ ಉಂಟುಮಾಡುವುದು ಕಟ್ಟುನಿಟ್ಟಾದ ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ಕುಮಾರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಮತ್ತೊಂದು ವೈರಲ್ ವಿಡಿಯೋ ಪ್ರಕಾರ, ಮಸೀದಿಗಳಲ್ಲಿ ಸ್ಥಳದ ಕೊರತೆಯಿದೆ ಎಂಬ ಕಾರಣಕ್ಕೆ ರಸ್ತೆಗಳ ಮೇಲೆ ನಮಾಝ್ ಮಾಡಿದರೆ, ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುವುದಾಗಿ ಕುಮಾರ್ ಎಚ್ಚರಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮಸೀದಿಯಲ್ಲಿ ಸ್ಥಳವಿಲ್ಲದಿದ್ದಾಗ ಪ್ರಾರ್ಥನೆ ಮಾಡುವವರು ಧಾವಿಸಿ ರಸ್ತೆಯ ಮೇಲೆ ನಮಾಝ್ ಮಾಡಲು ಶುರು ಮಾಡುತ್ತಾರೆ. ಹೀಗಾದರೆ, ನಾವು ಒಂದು ನಿಮಿಷದವರೆಗೆ ಏನನ್ನೂ ಹೇಳುವುದಿಲ್ಲ, ಆನಂತರ ಅವರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತೇವೆ. ಯಾರಾದರೂ ಇರಾನ್-ಇಸ್ರೇಲ್ ಯುದ್ಧಕ್ಕೆ ಬೆಂಬಲ ಸೂಚಿಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ, ಅವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ನಾವು ಹಿಂದುಸ್ತಾನಿಗಳು. ನಾವು ಭಾರತೀಯರು. ಅಂತಾರಾಷ್ಟ್ರೀಯ ವಿಷಯಗಳನ್ನು ಸರ್ಕಾರಗಳು ನಿಭಾಯಿಸಬೇಕು. ಒಂದು ವೇಳೆ ಬೇರೆ ದೇಶದ ವಿವಾದಗಳು ನಮ್ಮ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಪೊಲೀಸರು ಅಂತಹವರಿಗೆ ‘ಅತಿ ಉತ್ತಮ ಚಿಕಿತ್ಸೆ’ (ಕಠಿಣ ಕ್ರಮ) ನೀಡುತ್ತಾರೆ ಎಂದು ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಯುದ್ಧದ ಬಗ್ಗೆ ವೈರಲ್ ರೀಲ್ಸ್‌ಗಳನ್ನು ಮಾಡುವ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೂಡ ಅಧಿಕಾರಿ ಟೀಕಿಸಿದ್ದು, ಆನ್‌ಲೈನ್‌ನಲ್ಲಿ ವದಂತಿಗಳನ್ನು ಅಥವಾ ಪ್ರಚೋದನಕಾರಿ ವಿಷಯಗಳನ್ನು ಹರಡುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ ಓವೈಸಿ

ಸರ್ಕಲ್ ಇನ್‌ಸ್ಪೆಕ್ಟರ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ತಡೆಯಲು ಅಥವಾ ಬೆದರಿಕೆ ಹಾಕಲು ಅಧಿಕಾರಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಈ ದೇಶವು ಇನ್‌ಸ್ಪೆಕ್ಟರ್ ಕುಲದೀಪ್ ಕುಮಾರ್ ಅವರ ತಂದೆಯದ್ದಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಸ್ರೇಲ್ ಪರ ರ್‍ಯಾಲಿಗಳನ್ನು ಬೆಂಬಲಿಸುವ ಮೂಲಕ ಇರಾನ್ ಸಂಘರ್ಷದ ಬಗ್ಗೆ ಪ್ರತಿಭಟಿಸುವ ಮುಸ್ಲಿಮರಿಗೆ ಬೆದರಿಕೆ ಹಾಕುವ ಮೂಲಕ ಅಧಿಕಾರಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು, ಶಾಂತಿ ಕಾಪಾಡುವ ಹೆಸರಿನಲ್ಲಿ ಜನರನ್ನು ಭಯಭೀತಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಮಾತುಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾಷೆಯಂತೆ ಕೇಳಿಸುತ್ತಿವೆ ಎಂದು ಓವೈಸಿ ಟೀಕಿಸಿದ್ದಾರೆ.

ಇಮ್ರಾನ್‌ ಪ್ರತಾಪ್‌ಗಢ ಟೀಕೆ

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಢ ಅವರು ಸಂಭಾಲ್ ಪೊಲೀಸರ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ನಮಾಝ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ ಅಧಿಕಾರಿಯನ್ನು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಭಾಷೆ ‘ಸ್ವೀಕಾರ್ಹವಲ್ಲ’ ಎಂದು ಎಂದಿರುವ ಇಮ್ರಾನ್, ನಾಗರಿಕರ ಹಕ್ಕುಗಳಿಗೆ ಸಂವಿಧಾನವು ನೀಡಿರುವ ರಕ್ಷಣೆಯ ಬಗ್ಗೆ ಅಧಿಕಾರಿಗಳಿಗೆ ನೆನಪಿಸುವಂತೆ ಒತ್ತಾಯಿಸಿದ್ದಾರೆ.

ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವವರು ಎಲ್ಲಿಗೆ ಹೋಗಬೇಕು? ಎಂದು ಇಮ್ರಾನ್ ಪ್ರಶ್ನಿಸಿದ್ದಾರೆ. ಇದು ಜವಾಬ್ದಾರಿಯುತ ಭಾಷೆಯಲ್ಲ. ಶಾಂತಿ ಸಮಿತಿ ಸಭೆಯು ಶಾಂತಿ ಮತ್ತು ಭ್ರಾತೃತ್ವದ ಮೇಲೆ ಗಮನ ಹರಿಸಬೇಕೇ ಹೊರತು, ಬೆದರಿಕೆಗಳ ಮೇಲಲ್ಲ ಎಂದಿದ್ದಾರೆ.

ಇದಾದ ಬೆನ್ನಲ್ಲೇ, ಎಐಎಂಐಎಂ ಉತ್ತರ ಪ್ರದೇಶದ ರಾಜ್ಯಾಧ್ಯಕ್ಷ ಶೌಕತ್ ಅಲಿ ಅವರು ಕೂಡ ಅಧಿಕಾರಿಯ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದ್ದು, ಶಾಂತಿ ಕಾಪಾಡುವ ನೆಪದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೌಕತ್ ಅಲಿ ಅವರು ಸಭೆಯಲ್ಲಿ ಬಳಸಲಾದ ಭಾಷೆಯು ಮುಸ್ಲಿಂ ಸಮುದಾಯವನ್ನು ಬೆದರಿಸುವಂತಿದೆ ಎಂದು ಆರೋಪಿಸಿರುವ ಅವರು, ಅಧಿಕಾರಿಗಳು ಶಾಂತಿ ಕಾಪಾಡುವ ಬದಲು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ನಾವು ಅಸಂವಿಧಾನಿಕವಾಗಿ ಏನಾದರೂ ಮಾಡಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ. ಆದರೆ ನೀವು ಶಾಂತಿ ಸಮಿತಿ ಸಭೆಯಲ್ಲಿ ಕುಳಿತು ಮುಸ್ಲಿಮರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಹೇಳಿದ್ದಾರೆ. ಅಧಿಕಾರಿಯ ಈ ಮಾತುಗಳು ಕಾನೂನು ಜಾರಿ ಅಧಿಕಾರಿಗಳಿಂದ ನಿರೀಕ್ಷಿಸಲಾದ ಸಂವಿಧಾನಬದ್ಧ ಪ್ರಮಾಣ ವಚನವನ್ನು ಪ್ರತಿಬಿಂಬಿಸುವುದಿಲ್ಲ ಎಂದಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...