Homeಮುಖಪುಟಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ 'ಇರಾನ್‌ಗೆ ಹೋಗಿ' ಎಂದ ಪೊಲೀಸ್‌ ಅಧಿಕಾರಿ :...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಮಾ.13) ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸಂಭಾಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಒ) ಕುಲದೀಪ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಕೆಲವರು ‘ಅತಿಯಾದ ಕಾಳಜಿ’ ಹೊಂದಿರುವಂತೆ ಕಾಣಿಸುತ್ತಿದೆ ಎಂದು ಕುಮಾರ್ ಹೇಳಿದ್ದಾರೆ. ಅಲ್ಲದೆ, ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗುವುದು, ಪ್ರತಿಭಟನೆಗಳನ್ನು ಸಂಘಟಿಸುವುದು ಅಥವಾ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಅಂತಹವರ ವಿರುದ್ಧ ಕಠಿಣ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಮುಂದುವರಿದು, ಅಂತಾರಾಷ್ಟ್ರೀಯ ಸಂಘರ್ಷಗಳು ಸ್ಥಳೀಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರಬಾರದು ಎಂದು ಕುಮಾರ್ ಹೇಳಿದ್ದಾರೆ.

ಇಲ್ಲಿ ಕೆಲವರು ಇರಾನ್-ಇಸ್ರೇಲ್ ಯುದ್ಧದ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಾ, ಅದರ ಬಗ್ಗೆ ಎದೆ ಬಡಿದುಕೊಳ್ಳುತ್ತಿದ್ದಾರೆ, ಅವರು ವಿಮಾನ ಹತ್ತಿ ಇರಾನ್‌ಗೆ ಹೋಗಲಿ. ಅಂತಹ ವಿಷಯಗಳನ್ನು ಸರ್ಕಾರಗಳು ನಿರ್ವಹಿಸಬೇಕೇ ಹೊರತು ಸ್ಥಳೀಯ ನಾಗರಿಕರಲ್ಲ ಎಂದಿದ್ದಾರೆ.

ಯುದ್ಧದ ಯಾವುದೇ ಒಂದು ಪಕ್ಷವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುವುದು, ವಿಷಯಕ್ಕೆ ಸಂಬಂಧಿಸಿದ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಪ್ರದರ್ಶಿಸುವುದು ಮತ್ತು ಈದ್ ಪ್ರಾರ್ಥನೆಯ ಸಮಯದಲ್ಲಿ ಅಡಚಣೆ ಉಂಟುಮಾಡುವುದು ಕಟ್ಟುನಿಟ್ಟಾದ ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ಕುಮಾರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಮತ್ತೊಂದು ವೈರಲ್ ವಿಡಿಯೋ ಪ್ರಕಾರ, ಮಸೀದಿಗಳಲ್ಲಿ ಸ್ಥಳದ ಕೊರತೆಯಿದೆ ಎಂಬ ಕಾರಣಕ್ಕೆ ರಸ್ತೆಗಳ ಮೇಲೆ ನಮಾಝ್ ಮಾಡಿದರೆ, ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುವುದಾಗಿ ಕುಮಾರ್ ಎಚ್ಚರಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮಸೀದಿಯಲ್ಲಿ ಸ್ಥಳವಿಲ್ಲದಿದ್ದಾಗ ಪ್ರಾರ್ಥನೆ ಮಾಡುವವರು ಧಾವಿಸಿ ರಸ್ತೆಯ ಮೇಲೆ ನಮಾಝ್ ಮಾಡಲು ಶುರು ಮಾಡುತ್ತಾರೆ. ಹೀಗಾದರೆ, ನಾವು ಒಂದು ನಿಮಿಷದವರೆಗೆ ಏನನ್ನೂ ಹೇಳುವುದಿಲ್ಲ, ಆನಂತರ ಅವರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತೇವೆ. ಯಾರಾದರೂ ಇರಾನ್-ಇಸ್ರೇಲ್ ಯುದ್ಧಕ್ಕೆ ಬೆಂಬಲ ಸೂಚಿಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ, ಅವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ನಾವು ಹಿಂದುಸ್ತಾನಿಗಳು. ನಾವು ಭಾರತೀಯರು. ಅಂತಾರಾಷ್ಟ್ರೀಯ ವಿಷಯಗಳನ್ನು ಸರ್ಕಾರಗಳು ನಿಭಾಯಿಸಬೇಕು. ಒಂದು ವೇಳೆ ಬೇರೆ ದೇಶದ ವಿವಾದಗಳು ನಮ್ಮ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಪೊಲೀಸರು ಅಂತಹವರಿಗೆ ‘ಅತಿ ಉತ್ತಮ ಚಿಕಿತ್ಸೆ’ (ಕಠಿಣ ಕ್ರಮ) ನೀಡುತ್ತಾರೆ ಎಂದು ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಯುದ್ಧದ ಬಗ್ಗೆ ವೈರಲ್ ರೀಲ್ಸ್‌ಗಳನ್ನು ಮಾಡುವ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೂಡ ಅಧಿಕಾರಿ ಟೀಕಿಸಿದ್ದು, ಆನ್‌ಲೈನ್‌ನಲ್ಲಿ ವದಂತಿಗಳನ್ನು ಅಥವಾ ಪ್ರಚೋದನಕಾರಿ ವಿಷಯಗಳನ್ನು ಹರಡುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ ಓವೈಸಿ

ಸರ್ಕಲ್ ಇನ್‌ಸ್ಪೆಕ್ಟರ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ತಡೆಯಲು ಅಥವಾ ಬೆದರಿಕೆ ಹಾಕಲು ಅಧಿಕಾರಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಈ ದೇಶವು ಇನ್‌ಸ್ಪೆಕ್ಟರ್ ಕುಲದೀಪ್ ಕುಮಾರ್ ಅವರ ತಂದೆಯದ್ದಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಸ್ರೇಲ್ ಪರ ರ್‍ಯಾಲಿಗಳನ್ನು ಬೆಂಬಲಿಸುವ ಮೂಲಕ ಇರಾನ್ ಸಂಘರ್ಷದ ಬಗ್ಗೆ ಪ್ರತಿಭಟಿಸುವ ಮುಸ್ಲಿಮರಿಗೆ ಬೆದರಿಕೆ ಹಾಕುವ ಮೂಲಕ ಅಧಿಕಾರಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು, ಶಾಂತಿ ಕಾಪಾಡುವ ಹೆಸರಿನಲ್ಲಿ ಜನರನ್ನು ಭಯಭೀತಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಮಾತುಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾಷೆಯಂತೆ ಕೇಳಿಸುತ್ತಿವೆ ಎಂದು ಓವೈಸಿ ಟೀಕಿಸಿದ್ದಾರೆ.

ಇಮ್ರಾನ್‌ ಪ್ರತಾಪ್‌ಗಢ ಟೀಕೆ

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಢ ಅವರು ಸಂಭಾಲ್ ಪೊಲೀಸರ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ನಮಾಝ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ ಅಧಿಕಾರಿಯನ್ನು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಭಾಷೆ ‘ಸ್ವೀಕಾರ್ಹವಲ್ಲ’ ಎಂದು ಎಂದಿರುವ ಇಮ್ರಾನ್, ನಾಗರಿಕರ ಹಕ್ಕುಗಳಿಗೆ ಸಂವಿಧಾನವು ನೀಡಿರುವ ರಕ್ಷಣೆಯ ಬಗ್ಗೆ ಅಧಿಕಾರಿಗಳಿಗೆ ನೆನಪಿಸುವಂತೆ ಒತ್ತಾಯಿಸಿದ್ದಾರೆ.

ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವವರು ಎಲ್ಲಿಗೆ ಹೋಗಬೇಕು? ಎಂದು ಇಮ್ರಾನ್ ಪ್ರಶ್ನಿಸಿದ್ದಾರೆ. ಇದು ಜವಾಬ್ದಾರಿಯುತ ಭಾಷೆಯಲ್ಲ. ಶಾಂತಿ ಸಮಿತಿ ಸಭೆಯು ಶಾಂತಿ ಮತ್ತು ಭ್ರಾತೃತ್ವದ ಮೇಲೆ ಗಮನ ಹರಿಸಬೇಕೇ ಹೊರತು, ಬೆದರಿಕೆಗಳ ಮೇಲಲ್ಲ ಎಂದಿದ್ದಾರೆ.

ಇದಾದ ಬೆನ್ನಲ್ಲೇ, ಎಐಎಂಐಎಂ ಉತ್ತರ ಪ್ರದೇಶದ ರಾಜ್ಯಾಧ್ಯಕ್ಷ ಶೌಕತ್ ಅಲಿ ಅವರು ಕೂಡ ಅಧಿಕಾರಿಯ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದ್ದು, ಶಾಂತಿ ಕಾಪಾಡುವ ನೆಪದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೌಕತ್ ಅಲಿ ಅವರು ಸಭೆಯಲ್ಲಿ ಬಳಸಲಾದ ಭಾಷೆಯು ಮುಸ್ಲಿಂ ಸಮುದಾಯವನ್ನು ಬೆದರಿಸುವಂತಿದೆ ಎಂದು ಆರೋಪಿಸಿರುವ ಅವರು, ಅಧಿಕಾರಿಗಳು ಶಾಂತಿ ಕಾಪಾಡುವ ಬದಲು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ನಾವು ಅಸಂವಿಧಾನಿಕವಾಗಿ ಏನಾದರೂ ಮಾಡಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ. ಆದರೆ ನೀವು ಶಾಂತಿ ಸಮಿತಿ ಸಭೆಯಲ್ಲಿ ಕುಳಿತು ಮುಸ್ಲಿಮರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಹೇಳಿದ್ದಾರೆ. ಅಧಿಕಾರಿಯ ಈ ಮಾತುಗಳು ಕಾನೂನು ಜಾರಿ ಅಧಿಕಾರಿಗಳಿಂದ ನಿರೀಕ್ಷಿಸಲಾದ ಸಂವಿಧಾನಬದ್ಧ ಪ್ರಮಾಣ ವಚನವನ್ನು ಪ್ರತಿಬಿಂಬಿಸುವುದಿಲ್ಲ ಎಂದಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...