Homeಮುಖಪುಟಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದ.

- Advertisement -
- Advertisement -

ಜಿಲ್ಲೆಯ ದುರ್ಜನ್‌ಪುರ ಗ್ರಾಮದಲ್ಲಿ ಪಡಿತರ ಅಂಗಡಿಯೊಂದನ್ನು ಹಂಚಿಕೆ ಮಾಡುವಾಗ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದ ಆರೋಪದಡಿ ಬಂಧನವಾಗಿದ್ದ ಬಿಜೆಪಿ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್ ಅವರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಲ್ಲಿಯಾ ನ್ಯಾಯಾಲಯವು ಬುಧವಾರ ಬಂಧನವಾಗಿದ್ದ ಬಿಜೆಪಿ ನಾಯಕನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸುವಂತೆ ಆದೇಶಿಸಿದೆ.

ರಿಯೋತಿ ಠಾಣಾಧಿಕಾರಿ ಪ್ರವೀಣ್ ಸಿಂಗ್ ಅವರು ಜಿಲ್ಲಾ ಜೈಲಿನಿಂದ ಧೀರೇಂದ್ರ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಅವರನ್ನು ದುರ್ಜನ್‌ಪುರ ಗ್ರಾಮದಲ್ಲಿರುವ ಅವರ ಮನೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಮುಖ್ಯ ನ್ಯಾಯಾಧೀಶ ರಮೇಶ್ ಕುಶ್ವಾಹ ಅವರು ಬಿಜೆಪಿ ನಾಯಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಆದೇಶಿಸಿ, ಶಸ್ತ್ರಾಸ್ತ್ರ, ದೇಶ ನಿರ್ಮಿತ ಪಿಸ್ತೂಲ್ ಅನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲು ಮತ್ತು ಪ್ರಕರಣದ ವಿಚಾರಣೆ ನಡೆಸಲು ಪೊಲೀಸರಿಗೆ ಅವಕಾಶ ಮಾಡಿಕೊಟ್ಟಿದೆ.

ಏಳು ದಿನಗಳ ಕಸ್ಟಡಿಗಾಗಿ ಸಲ್ಲಿಸಿದ ಪ್ರಾಸಿಕ್ಯೂಷನ್ ಬೇಡಿಕೆಯನ್ನು ತಿರಸ್ಕರಿಸಿದ ನ್ಯಾಯಾಲಯವು ಧೀರೇಂದ್ರ ಸಿಂಗ್ ಅವರನ್ನು ಕೇವಲ ಎರಡು ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಿದೆ.

ಬಿಜೆಪಿ ನಾಯಕನನ್ನು ಲಖನೌದಿಂದ ಭಾನುವಾರ ಬಂಧಿಸಲಾಗಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಗುರುವಾರ ಸ್ಥಳೀಯ ಅಧಿಕಾರಿಗಳ ಎದುರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು ಎಂದು ಪೊಲೀಸರು ಹೇಳಿದ್ದರು.

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದ. ಇದಕ್ಕೆ ಸಂಬಂಧಿಸಿದಂತೆ ಎಎನ್‌ಐ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಬಲ್ಲಿಯಾದಲ್ಲಿ ಸರ್ಕಾರಿ ಕೋಟಾದಡಿಯಲ್ಲಿ ಅಂಗಡಿಗಳನ್ನು ಮಂಜೂರು ಮಾಡಲು ಕರೆದಿದ್ದ ಸಭೆಯಲ್ಲಿ ಗುಂಡು ಹಾರಿಸಿದ್ದರಿಂದ ಒಬ್ಬರು ಮೃತಪಟ್ಟಿದ್ದಾರೆ. ಬಲ್ಲಿಯಾದ ಎಸ್‌ಪಿ ದೇವೇಂದ್ರನಾಥ್ ಪ್ರಕಾರ, ಸಭೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಈ ಘಟನೆ ನಡೆದಿದೆ. ತನಿಖೆ ನಡೆಯುತ್ತಿದೆ ಎಂದಿದ್ದಾರೆ” ಎಂದು ಹೇಳಿತ್ತು.

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, “ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ. ಇಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ನಿರ್ವಹಿಸಲಿದೆ” ಎಂದು ಹೇಳಿದ್ದರು.


ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...