Homeಮುಖಪುಟಕ್ರಿಮಿನಲ್ ವಿಕಾಸ್ ದುಬೆ ಬಂಧಿಸಲು 25 ತಂಡಗಳನ್ನು ರಚಿಸಿದ ಯುಪಿ ಪೊಲೀಸ್‌

ಕ್ರಿಮಿನಲ್ ವಿಕಾಸ್ ದುಬೆ ಬಂಧಿಸಲು 25 ತಂಡಗಳನ್ನು ರಚಿಸಿದ ಯುಪಿ ಪೊಲೀಸ್‌

ದುಬೆಯನ್ನು ಬಂಧಿಸಲು ಗುರುವಾರ ಮಧ್ಯರಾತ್ರಿ ಬಿಕ್ರು ಗ್ರಾಮಕ್ಕೆ ಪ್ರವೇಶಿಸಿದ ಪೊಲೀಸರ ಮೇಲೆ ಮೇಲ್ಛಾವಣಿಯಿಂದ ಗುಂಡಿನ ಮಳೆಗೆರೆದು ಎಂಟ ಪೊಲೀಸರನ್ನು ಕೊಲ್ಲಲಾಗಿತ್ತು.

- Advertisement -
- Advertisement -

ತನ್ನನ್ನು ಬಂಧಿಸಲು ಬಂದ 8 ಪೊಲೀಸರ ಮೇಲೆ ಗುಂಡು ಹಾರಿಸಿ ಕೊಂದ ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು 25 ಕ್ಕೂ ಹೆಚ್ಚು ಉತ್ತರ ಪ್ರದೇಶ ಪೊಲೀಸರ ತಂಡಗಳನ್ನು ರಚಿಸಲಾಗಿದೆ. ಪೊಲೀಸರನ್ನು ಗುಂಡಿಕ್ಕಿ ಕೊಂದು 36 ಗಂಟೆಗಳಾದರೂ ಇನ್ನೂ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂಬ ಟೀಕೆ ಸಹ ಕೇಳಿಬಂದಿದೆ.

ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಮಾತನಾಡಿ “ವಿಕಾಸ್ ದುಬೆ ಮತ್ತು ಸಹಚರರನ್ನು ಬಂಧಿಸಲು, 25 ತಂಡಗಳನ್ನು ರಚಿಸಲಾಗಿದೆ, ಇಂದು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಲ್ಲಿ ಹುಡುಕುತ್ತಿವೆ” ಎಂದು ಪಿಟಿಐಗೆ ಹೇಳಿದ್ದಾರೆ.

ಕಣ್ಗಾವಲು ತಂಡವು 500 ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಸ್ಕ್ಯಾನ್ ಮಾಡುತ್ತಿದ್ದು, ಸುಮಾರು 60 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ದುಬೆಯ ಮಾಹಿತಿಯನ್ನು ಪಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ ಆರೋಪಿಗಳನ್ನು ಬಂಧಿಸಲು ಉತ್ತರ ಪ್ರದಶ ಪೊಲೀಸರ ವಿಶೇಷ ಕಾರ್ಯಪಡೆಗೂ ಸಹ ಸಜ್ಜಾಗಿದೆ.

ದುಬೆ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ.ಗಳ ನಗದು ಬಹುಮಾನ ಘೋಷಿಸಲಾಗಿದ್ದು, ಮಾಹಿತಿ ಒದಗಿಸುವವರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಅಗರ್‌ವಾಲ್ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಏಳು ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ. ಲಕ್ನೋದ ಕೃಷ್ಣನಗರ ಪ್ರದೇಶದ ದುಬೆ ಅವರ ಮನೆಯ ಮೇಲೆ ಪೊಲೀಸರು ಶುಕ್ರವಾರ ತಡರಾತ್ರಿ ದಾಳಿ ನಡೆಸಿದ್ದರು.

ಹತ್ಯೆಗೀಡಾದ ಪೊಲೀಸರ ಕುಟುಂಬ ಸದಸ್ಯರನ್ನು ಭೇಟಿಯಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಕಾನ್ಪುರದಲ್ಲಿ ದುಃಖಿತ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ಘೋ‍‍‍‍‍ಷಿಸಿದ್ದಾರೆ.

ನಗರದ ಸಮೀಪದ ಹಳ್ಳಿಯೊಂದರಲ್ಲಿ ಡಿಎಸ್‌ಪಿ ಸೇರಿದಂತೆ ಒಟ್ಟು ಎಂಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ದುಬೆಯ ಸಹಚರರರು ಗುಂಡಿಕ್ಕಿ ಕೊಂದಿದ್ದಾರೆ. ದುಬೆಯನ್ನು ಬಂಧಿಸಲು ಗುರುವಾರ ಮಧ್ಯರಾತ್ರಿ ಬಿಕ್ರು ಗ್ರಾಮಕ್ಕೆ ಪ್ರವೇಶಿಸಿದ ಪೊಲೀಸರ ಮೇಲೆ ಮೇಲ್ಛಾವಣಿಯಿಂದ ಗುಂಡಿನ ಮಳೆಗೆರೆಯಲಾಗಿತ್ತು.


ಓದಿ: 8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...