Homeಮುಖಪುಟಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

ಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅದ್ಭುತ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿದ ನಡುವೆ, ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದವರ ಪೈಕಿ 11 ಮಂದಿ ಸೋಲು ಕಂಡಿದ್ದಾರೆ.

ಹಿಂದಿನ ಸರ್ಕಾರದ ಒಟ್ಟು 47 ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಸೋಲು ದೊಡ್ಡ ಆಘಾತ ನೀಡಿದರೆ, ಶಿಕ್ಷಣ, ಕಬ್ಬು ಮತ್ತು ಗ್ರಾಮೀಣಾಭಿವೃದ್ಧಿಯ ಉಸ್ತುವಾರಿ ಸಚಿವರು ಅನೇಕ ಪ್ರಮುಖ ನಾಯಕರು ಸೋಲಿನ ಕಹಿ ಅನುಭವಿಸಿದ್ದಾರೆ. ಸತೀಶ್ ಚಂದ್ರ ದ್ವಿವೇದಿ, ಸಂಗೀತಾ ಬಲ್ವಂತ್ ಬಿಂದ್, ಛತ್ರಪಾಲ್ ಗಂಗ್ವಾರ್, ಸುರೇಶ್ ರಾಣಾ ಮತ್ತು ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರೂ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಸೋತ ಬಹುತೇಕ ಬಿಜೆಪಿ ಸಚಿವರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳಿಂದ ಪರಾಭವಗೊಂಡಿದ್ದಾರೆ. ಮೌರ್ಯ ಅವರ ಸೋಲು ಬಿಜೆಪಿಯೊಳಗೆ ಚರ್ಚೆಗೆ ಗ್ರಾಸವಾಗಿದೆ. ಆದಿತ್ಯನಾಥ್ ಸರ್ಕಾರದಲ್ಲಿದ್ದ ಹಿಂದುಳಿದ ವರ್ಗಗಳ ಸಮುದಾಯದ ಬಹುದೊಡ್ಡ ನಾಯಕರಾದ ಕೇಶವ್ ಪ್ರಸಾದ್ ಮೌರ್ಯ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ  ಹೌದು.

ಕೇಶವ್ ಪ್ರಸಾದ್ ಮೌರ್ಯ

ಕೌಶಂಬಿ ಜಿಲ್ಲೆಯ ಸಿರತು ಕ್ಷೇತ್ರದಲ್ಲಿ ಅಪ್ನಾ ದಳ (ಕಾಮರ್‌ವಾಡಿ) ನಾಯಕಿ ಡಾ. ಪಲ್ಲವಿ ಪಟೇಲ್‌ರಿಂದ ಮೌರ್ಯ ಸೋಲು ಕಂಡಿದ್ದಾರೆ. ಪಲ್ಲವಿ ಪಟೇಲ್ 7,337 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಪ್ನಾ ದಳವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಕಬ್ಬು ಅಭಿವೃದ್ಧಿ ಮತ್ತು ಕಬ್ಬಿನ ಗಿರಣಿಗಳ ಕೈಗಾರಿಕಾ ಅಭಿವೃದ್ಧಿಯ ಕ್ಯಾಬಿನೆಟ್ ಸಚಿವ ಸುರೇಶ್ ಕುಮಾರ್ ರಾಣಾ ಅವರು ಠಾಣಾ ಭವನ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಅಶ್ರಫ್ ಅಲಿ ಖಾನ್ ವಿರುದ್ಧ 10,806 ಮತಗಳ ಅಂತರದಿಂದ ಸುರೇಶ್‌ಕುಮಾರ್ ಸೋಲು ಕಂಡಿದ್ದಾರೆ. ಆರ್‌ಎಲ್‌ಡಿ ಪಕ್ಷವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಗ್ರಾಮೀಣಾಭಿವೃದ್ಧಿ ಸಚಿವ ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರು ಪ್ರತಾಪ್‌ಗಢದ ಪಟ್ಟಿ ಕ್ಷೇತ್ರದಲ್ಲಿ ಎಸ್‌ಪಿಯ ರಾಮ್ ಸಿಂಗ್ ವಿರುದ್ಧ 22,051 ಮತಗಳ ಅಂತರದಲ್ಲಿ ಸೋತಿದ್ದಾರೆ.

ಎಸ್‌ಪಿಯ ಹಿರಿಯ ನಾಯಕ, ಉತ್ತರ ಪ್ರದೇಶ ವಿಧಾನಸಭೆಯ ಮಾಜಿ ಸ್ಪೀಕರ್ ಮಾತಾ ಪ್ರಸಾದ್ ಪಾಂಡೆ ಅವರು ಬಿಜೆಪಿ ಸಚಿವ ಸತೀಶ್ ಚಂದ್ರ ದ್ವಿವೇದಿ ಅವರನ್ನು ಸಿದ್ಧಾರ್ಥನಗರ ವ್ಯಾಪ್ತಿಯಲ್ಲಿ ಬರುವ ಇಟ್ವಾ ಕ್ಷೇತ್ರದಲ್ಲಿ 1,662 ಮತಗಳ ಅಂತರದಿಂದ ಸೋಲಿಸಿದ್ದಾರೆ. ದ್ವಿವೇದಿ ಅವರು ಆದಿತ್ಯನಾಥ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣದ ರಾಜ್ಯ ಸಚಿವರಾಗಿದ್ದರು.

ಸಂಸದೀಯ ವ್ಯವಹಾರಗಳು, ಗ್ರಾಮೀಣಾಭಿವೃದ್ಧಿ ಮತ್ತು ಸಮಗ್ರ ಗ್ರಾಮಾಭಿವೃದ್ಧಿಯ ಕಿರಿಯ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು ಬಲ್ಲಿಯಾ ಜಿಲ್ಲೆಯ ಬೈರಿಯಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್‌ಪಿ ಅಭ್ಯರ್ಥಿ ಜೈಪ್ರಕಾಶ್ ಅಂಚಲ್ ವಿರುದ್ಧ ಶುಕ್ಲಾ ಅವರು 12,951 ಮತಗಳಿಂದ ಸೋತಿದ್ದಾರೆ.

ಲೋಕೋಪಯೋಗಿ ಖಾತೆ ರಾಜ್ಯ ಸಚಿವರಾದ ಚಂದ್ರಿಕಾ ಪ್ರಸಾದ್ ಉಪಾಧ್ಯಾಯ ಅವರು ಚಿತ್ರಕೂಟ ಕ್ಷೇತ್ರದಲ್ಲಿ ಎಸ್‌ಪಿಯ ಅನಿಲ್ ಕುಮಾರ್ ವಿರುದ್ಧ 20,876 ಮತಗಳ ಅಂತರದಿಂದ ಸೋತಿದ್ದಾರೆ.

ಕಂದಾಯ ಖಾತೆಯ ರಾಜ್ಯ ಸಚಿವ ಛತ್ರಪಾಲ್ ಸಿಂಗ್ ಅವರು ಬರೇಲಿಯ ಬಹೇರಿ ಸ್ಥಾನವನ್ನು ಎಸ್‌ಪಿಯ ಅತೌರ್ ರೆಹಮಾನ್ ವಿರುದ್ಧ ಸೋಲು ಕಂಡಿದ್ದಾರೆ. ಸಿಂಗ್ ಅವರನ್ನು ರೆಹಮಾನ್ 3,355 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಿರಿಯ ಸಚಿವ ರಣವೇಂದ್ರ ಸಿಂಗ್ ಅವರು ಫತೇಪುರ್ ಜಿಲ್ಲೆಯ ಹುಸೈಂಗಂಜ್ ಕ್ಷೇತ್ರವನ್ನು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಎಸ್‌ಪಿಯ ಉಷಾ ಮೌರ್ಯ ಅವರು 25,181 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮತ್ತೊಬ್ಬ ಕಿರಿಯ ಸಚಿವರಾದ ಡಾ. ಸಂಗೀತಾ ಬಲವಂತ್ ಅವರು ಗಾಜಿಪುರ ಕ್ಷೇತ್ರದಿಂದ 1,692 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಸಂಗೀತಾ ಅವರು ಸಹಕಾರಿ ಖಾತೆಯ ರಾಜ್ಯ ಸಚಿವರಾಗಿದ್ದರು. ಎಸ್‌ಪಿಯ ಜೈ ಕಿಶನ್ ಸಾಹು ಅವರು ಗೆಲುವು ಸಾಧಿಸಿದ್ದಾರೆ.

ಕಿರಿಯ ಕೃಷಿ ಸಚಿವರಾದ ಲಖನ್ ಸಿಂಗ್ ರಜಪೂತ್ ಅವರು ದಿಬಿಯಾಪುರದಲ್ಲಿ ಎಸ್ಪಿಯ ಅಭ್ಯರ್ಥಿ ಪ್ರದೀಪ್ ಕುಮಾರ್ ಯಾದವ್ ವಿರುದ್ಧ ಸೋಲು ಕಂಡಿದ್ದಾರೆ. ರಜಪೂತ್ ಅವರು ಕೇವಲ 473 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ. ಕ್ರೀಡೆ, ಯುವಜನ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಉಪೇಂದ್ರ ತಿವಾರಿ ಅವರು ಫೆಫ್ನಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್ಪಿಯ ಸಂಗ್ರಾಮ್ ಸಿಂಗ್ ಅವರು 19,354 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಚುನಾವಣೆ ಒಂದು ತಿಂಗಳು ಬಾಕಿ ಇರುವಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್‌ಪಿಗೆ ಸೇರ್ಪಡೆಯಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಮೌರ್ಯ ಮತ್ತು ಸೈನಿ ಅವರು ಕ್ರಮವಾಗಿ ಕುಶಿನಗರದ ಫಾಜಿಲ್‌ನಗರ, ಸಹರಾನ್‌ಪುರ ಜಿಲ್ಲೆಯ ನಾಕುರ್‌ನಿಂದ ಸ್ಪರ್ಧಿಸಿ ಸೋತಿದ್ದಾರೆ. ಒಬಿಸಿ ಸಮುದಾಯದ ನಾಯಕರಾಗಿರುವ ಮೌರ್ಯ ಅವರನ್ನು ಬಿಜೆಪಿ ಅಭ್ಯರ್ಥಿ ಸುರೇಂದ್ರ ಕುಮಾರ್ ಕುಶ್ವಾಹ ಅವರು ಫಾಜಿಲ್‌ನಗರದಲ್ಲಿ 45,580 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು. ಆದಿತ್ಯನಾಥ್ ಅವರ ಸಂಪುಟದಲ್ಲಿ ಮೌರ್ಯ ಕಾರ್ಮಿಕ ಸಚಿವರಾಗಿದ್ದರು.

ಸೈನಿ ಕೂಡ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಮುಖೇಶ್ ಚೌಧರಿ ವಿರುದ್ಧ 315 ಮತಗಳ ಅಂತರದಿಂದ ಪರಾಭವಗೊಂಡರು. ಸೈನಿ ಅವರು ಆಹಾರ ಭದ್ರತೆ ಮತ್ತು ಔಷಧ ನಿರ್ವಹಣೆಯ ಸಚಿವರಾಗಿದ್ದರು.


ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...