Homeಮುಖಪುಟಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

ಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅದ್ಭುತ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿದ ನಡುವೆ, ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದವರ ಪೈಕಿ 11 ಮಂದಿ ಸೋಲು ಕಂಡಿದ್ದಾರೆ.

ಹಿಂದಿನ ಸರ್ಕಾರದ ಒಟ್ಟು 47 ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಸೋಲು ದೊಡ್ಡ ಆಘಾತ ನೀಡಿದರೆ, ಶಿಕ್ಷಣ, ಕಬ್ಬು ಮತ್ತು ಗ್ರಾಮೀಣಾಭಿವೃದ್ಧಿಯ ಉಸ್ತುವಾರಿ ಸಚಿವರು ಅನೇಕ ಪ್ರಮುಖ ನಾಯಕರು ಸೋಲಿನ ಕಹಿ ಅನುಭವಿಸಿದ್ದಾರೆ. ಸತೀಶ್ ಚಂದ್ರ ದ್ವಿವೇದಿ, ಸಂಗೀತಾ ಬಲ್ವಂತ್ ಬಿಂದ್, ಛತ್ರಪಾಲ್ ಗಂಗ್ವಾರ್, ಸುರೇಶ್ ರಾಣಾ ಮತ್ತು ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರೂ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಸೋತ ಬಹುತೇಕ ಬಿಜೆಪಿ ಸಚಿವರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳಿಂದ ಪರಾಭವಗೊಂಡಿದ್ದಾರೆ. ಮೌರ್ಯ ಅವರ ಸೋಲು ಬಿಜೆಪಿಯೊಳಗೆ ಚರ್ಚೆಗೆ ಗ್ರಾಸವಾಗಿದೆ. ಆದಿತ್ಯನಾಥ್ ಸರ್ಕಾರದಲ್ಲಿದ್ದ ಹಿಂದುಳಿದ ವರ್ಗಗಳ ಸಮುದಾಯದ ಬಹುದೊಡ್ಡ ನಾಯಕರಾದ ಕೇಶವ್ ಪ್ರಸಾದ್ ಮೌರ್ಯ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ  ಹೌದು.

ಕೇಶವ್ ಪ್ರಸಾದ್ ಮೌರ್ಯ

ಕೌಶಂಬಿ ಜಿಲ್ಲೆಯ ಸಿರತು ಕ್ಷೇತ್ರದಲ್ಲಿ ಅಪ್ನಾ ದಳ (ಕಾಮರ್‌ವಾಡಿ) ನಾಯಕಿ ಡಾ. ಪಲ್ಲವಿ ಪಟೇಲ್‌ರಿಂದ ಮೌರ್ಯ ಸೋಲು ಕಂಡಿದ್ದಾರೆ. ಪಲ್ಲವಿ ಪಟೇಲ್ 7,337 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಪ್ನಾ ದಳವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಕಬ್ಬು ಅಭಿವೃದ್ಧಿ ಮತ್ತು ಕಬ್ಬಿನ ಗಿರಣಿಗಳ ಕೈಗಾರಿಕಾ ಅಭಿವೃದ್ಧಿಯ ಕ್ಯಾಬಿನೆಟ್ ಸಚಿವ ಸುರೇಶ್ ಕುಮಾರ್ ರಾಣಾ ಅವರು ಠಾಣಾ ಭವನ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಅಶ್ರಫ್ ಅಲಿ ಖಾನ್ ವಿರುದ್ಧ 10,806 ಮತಗಳ ಅಂತರದಿಂದ ಸುರೇಶ್‌ಕುಮಾರ್ ಸೋಲು ಕಂಡಿದ್ದಾರೆ. ಆರ್‌ಎಲ್‌ಡಿ ಪಕ್ಷವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಗ್ರಾಮೀಣಾಭಿವೃದ್ಧಿ ಸಚಿವ ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರು ಪ್ರತಾಪ್‌ಗಢದ ಪಟ್ಟಿ ಕ್ಷೇತ್ರದಲ್ಲಿ ಎಸ್‌ಪಿಯ ರಾಮ್ ಸಿಂಗ್ ವಿರುದ್ಧ 22,051 ಮತಗಳ ಅಂತರದಲ್ಲಿ ಸೋತಿದ್ದಾರೆ.

ಎಸ್‌ಪಿಯ ಹಿರಿಯ ನಾಯಕ, ಉತ್ತರ ಪ್ರದೇಶ ವಿಧಾನಸಭೆಯ ಮಾಜಿ ಸ್ಪೀಕರ್ ಮಾತಾ ಪ್ರಸಾದ್ ಪಾಂಡೆ ಅವರು ಬಿಜೆಪಿ ಸಚಿವ ಸತೀಶ್ ಚಂದ್ರ ದ್ವಿವೇದಿ ಅವರನ್ನು ಸಿದ್ಧಾರ್ಥನಗರ ವ್ಯಾಪ್ತಿಯಲ್ಲಿ ಬರುವ ಇಟ್ವಾ ಕ್ಷೇತ್ರದಲ್ಲಿ 1,662 ಮತಗಳ ಅಂತರದಿಂದ ಸೋಲಿಸಿದ್ದಾರೆ. ದ್ವಿವೇದಿ ಅವರು ಆದಿತ್ಯನಾಥ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣದ ರಾಜ್ಯ ಸಚಿವರಾಗಿದ್ದರು.

ಸಂಸದೀಯ ವ್ಯವಹಾರಗಳು, ಗ್ರಾಮೀಣಾಭಿವೃದ್ಧಿ ಮತ್ತು ಸಮಗ್ರ ಗ್ರಾಮಾಭಿವೃದ್ಧಿಯ ಕಿರಿಯ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು ಬಲ್ಲಿಯಾ ಜಿಲ್ಲೆಯ ಬೈರಿಯಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್‌ಪಿ ಅಭ್ಯರ್ಥಿ ಜೈಪ್ರಕಾಶ್ ಅಂಚಲ್ ವಿರುದ್ಧ ಶುಕ್ಲಾ ಅವರು 12,951 ಮತಗಳಿಂದ ಸೋತಿದ್ದಾರೆ.

ಲೋಕೋಪಯೋಗಿ ಖಾತೆ ರಾಜ್ಯ ಸಚಿವರಾದ ಚಂದ್ರಿಕಾ ಪ್ರಸಾದ್ ಉಪಾಧ್ಯಾಯ ಅವರು ಚಿತ್ರಕೂಟ ಕ್ಷೇತ್ರದಲ್ಲಿ ಎಸ್‌ಪಿಯ ಅನಿಲ್ ಕುಮಾರ್ ವಿರುದ್ಧ 20,876 ಮತಗಳ ಅಂತರದಿಂದ ಸೋತಿದ್ದಾರೆ.

ಕಂದಾಯ ಖಾತೆಯ ರಾಜ್ಯ ಸಚಿವ ಛತ್ರಪಾಲ್ ಸಿಂಗ್ ಅವರು ಬರೇಲಿಯ ಬಹೇರಿ ಸ್ಥಾನವನ್ನು ಎಸ್‌ಪಿಯ ಅತೌರ್ ರೆಹಮಾನ್ ವಿರುದ್ಧ ಸೋಲು ಕಂಡಿದ್ದಾರೆ. ಸಿಂಗ್ ಅವರನ್ನು ರೆಹಮಾನ್ 3,355 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಿರಿಯ ಸಚಿವ ರಣವೇಂದ್ರ ಸಿಂಗ್ ಅವರು ಫತೇಪುರ್ ಜಿಲ್ಲೆಯ ಹುಸೈಂಗಂಜ್ ಕ್ಷೇತ್ರವನ್ನು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಎಸ್‌ಪಿಯ ಉಷಾ ಮೌರ್ಯ ಅವರು 25,181 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮತ್ತೊಬ್ಬ ಕಿರಿಯ ಸಚಿವರಾದ ಡಾ. ಸಂಗೀತಾ ಬಲವಂತ್ ಅವರು ಗಾಜಿಪುರ ಕ್ಷೇತ್ರದಿಂದ 1,692 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಸಂಗೀತಾ ಅವರು ಸಹಕಾರಿ ಖಾತೆಯ ರಾಜ್ಯ ಸಚಿವರಾಗಿದ್ದರು. ಎಸ್‌ಪಿಯ ಜೈ ಕಿಶನ್ ಸಾಹು ಅವರು ಗೆಲುವು ಸಾಧಿಸಿದ್ದಾರೆ.

ಕಿರಿಯ ಕೃಷಿ ಸಚಿವರಾದ ಲಖನ್ ಸಿಂಗ್ ರಜಪೂತ್ ಅವರು ದಿಬಿಯಾಪುರದಲ್ಲಿ ಎಸ್ಪಿಯ ಅಭ್ಯರ್ಥಿ ಪ್ರದೀಪ್ ಕುಮಾರ್ ಯಾದವ್ ವಿರುದ್ಧ ಸೋಲು ಕಂಡಿದ್ದಾರೆ. ರಜಪೂತ್ ಅವರು ಕೇವಲ 473 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ. ಕ್ರೀಡೆ, ಯುವಜನ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಉಪೇಂದ್ರ ತಿವಾರಿ ಅವರು ಫೆಫ್ನಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್ಪಿಯ ಸಂಗ್ರಾಮ್ ಸಿಂಗ್ ಅವರು 19,354 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಚುನಾವಣೆ ಒಂದು ತಿಂಗಳು ಬಾಕಿ ಇರುವಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್‌ಪಿಗೆ ಸೇರ್ಪಡೆಯಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಮೌರ್ಯ ಮತ್ತು ಸೈನಿ ಅವರು ಕ್ರಮವಾಗಿ ಕುಶಿನಗರದ ಫಾಜಿಲ್‌ನಗರ, ಸಹರಾನ್‌ಪುರ ಜಿಲ್ಲೆಯ ನಾಕುರ್‌ನಿಂದ ಸ್ಪರ್ಧಿಸಿ ಸೋತಿದ್ದಾರೆ. ಒಬಿಸಿ ಸಮುದಾಯದ ನಾಯಕರಾಗಿರುವ ಮೌರ್ಯ ಅವರನ್ನು ಬಿಜೆಪಿ ಅಭ್ಯರ್ಥಿ ಸುರೇಂದ್ರ ಕುಮಾರ್ ಕುಶ್ವಾಹ ಅವರು ಫಾಜಿಲ್‌ನಗರದಲ್ಲಿ 45,580 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು. ಆದಿತ್ಯನಾಥ್ ಅವರ ಸಂಪುಟದಲ್ಲಿ ಮೌರ್ಯ ಕಾರ್ಮಿಕ ಸಚಿವರಾಗಿದ್ದರು.

ಸೈನಿ ಕೂಡ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಮುಖೇಶ್ ಚೌಧರಿ ವಿರುದ್ಧ 315 ಮತಗಳ ಅಂತರದಿಂದ ಪರಾಭವಗೊಂಡರು. ಸೈನಿ ಅವರು ಆಹಾರ ಭದ್ರತೆ ಮತ್ತು ಔಷಧ ನಿರ್ವಹಣೆಯ ಸಚಿವರಾಗಿದ್ದರು.


ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...