Homeಮುಖಪುಟಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

ಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು  ತಯಾರಿ ನಡೆಸುತ್ತಿವೆ. ಈ ನಡುವೆ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ 9 ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ. ಇದು ಚುನಾವಣ ರಾಜ್ಯದ ರಾಜಕೀಯದಲ್ಲಿ ಸಂಚಲನವನ್ನು ಹುಟ್ಟುಹಾಕಿದೆ.

ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ಈ ಒಂಬತ್ತು ಶಾಸಕರನ್ನು ಪಕ್ಷದಿಂದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಉಚ್ಛಾಟಿಸಿದ್ದರು. ಅಖಿಲೇಶ್‌ ಅವರನ್ನು ಬಿಎಸ್‌ಪಿ ಶಾಸಕರು ಭೇಟಿ ಮಾಡಿರುವುದು ಮುಂದಿನ ಚುನಾವಣೆಯಲ್ಲಿ ರಾಜಕೀಯ ಮತ ಸಮೀಕರಣಕ್ಕೆ ಎಸ್‌ಪಿ ಪಕ್ಷಕ್ಕೆ ಸಹಕಾರಿಯಾಗಬಹುದು ಎಂದು ಹೇಳಲಾಗುತ್ತಿದೆ. ಈ ಒಂಬತ್ತು ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.

ಶಾಸಕರಾದ ಅಸ್ಲಾಂ ರೈನಿ, ಅಸ್ಲಾಂ ಅಲಿ ಚೌಧರಿ, ಮುಜ್ತಾಬಾ ಸಿದ್ದಿಕಿ, ಹಕೀಮ್ ಲಾಲ್ ಬಿಂದ್, ಹರ್‌ಗೋವಿಂದ್ ಭಾರ್ಗವ್, ಸುಷ್ಮಾ ಪಟೇಲ್, ವಂದನಾ ಸಿಂಗ್, ರಾಮ್‌ವೀರ್ ಉಪಾಧ್ಯಾಯ ಮತ್ತು ಅನಿಲ್ ಸಿಂಗ್ ಅವರನ್ನು ಕಳೆದ ನಾಲ್ಕು ವರ್ಷಗಳಲ್ಲಿ ಬಿಎಸ್‌ಪಿಯಿಂದ ಮಾಯಾವತಿ ಉಚ್ಚಾಟಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನಗಳನ್ನು ಗೆದ್ದಿತ್ತು. ನಂತರ ನಡೆದ ಉಪಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡಿತು. ಹೀಗಾಗಿ 18 ಶಾಸಕರನ್ನು ಬಿಎಸ್‌ಪಿ ಹೊಂದಿತ್ತು. 2017ರ ಚುನಾವಣೆಯ ನಂತರ ಇದೂವರೆಗೂ 11 ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದೀಗ ಪಕ್ಷದ ಶಾಸಕರಾಗಿ ಕೇವಲ 07 ಮಂದಿ ಮಾತ್ರ ಉಳಿದಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನರು ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗುತ್ತಿದ್ದಾರೆ. ಏಕೆಂದರೆ ಮಾಯಾವತಿ ಮತ್ತು ಬಿಜೆಪಿಯ ದಬ್ಬಾಳಿಕೆಯ ಸ್ವರೂಪಕ್ಕಿಂತ ಸಮಾಜವಾದಿ ಪಕ್ಷವು ಭಿನ್ನವಾಗಿದೆ. ಬಿಎಸ್‌ಪಿ ಮತ್ತು ಬಿಜೆಪಿ ಶಾಸಕರು ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು ಹೆದರುತ್ತಾರೆ, ಅದಕ್ಕಾಗಿಯೇ ಅವರು ಸಮಾಜವಾದಿ ಪಕ್ಷಕ್ಕೆ ಬರುತ್ತಿದ್ದಾರೆ” ಎಂದು ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹೇಳಿದ್ದಾರೆ.

ಬಿಎಸ್‌ಪಿಯ ಶಾಸಕರ ಸೇರ್ಪಡೆಯಿಂದ ಸಮಾಜವಾದಿ ಪಕ್ಷಕ್ಕೆ ಲಾಭವಾಗಿದೆ. ಕಳೆದ ಎರಡು ವರ್ಷಗಳಲ್ಲಿ, ವಿಶೇಷವಾಗಿ 2019 ರಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಶೋಚನೀಯವಾಗಿ ವಿಫಲವಾದ ನಂತರ, ಹಲವಾರು ಬಿಎಸ್‌ಪಿ ನಾಯಕರು ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...