Homeಮುಖಪುಟಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

ಉತ್ತರ ಪ್ರದೇಶ ಚುನಾವಣೆ ವಿಚಾರ: ಅಖಿಲೇಶ್ ಯಾದವ್ ಭೇಟಿಯಾದ ಬಿಎಸ್‌ಪಿ ಶಾಸಕರು

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು  ತಯಾರಿ ನಡೆಸುತ್ತಿವೆ. ಈ ನಡುವೆ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ 9 ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ. ಇದು ಚುನಾವಣ ರಾಜ್ಯದ ರಾಜಕೀಯದಲ್ಲಿ ಸಂಚಲನವನ್ನು ಹುಟ್ಟುಹಾಕಿದೆ.

ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ಈ ಒಂಬತ್ತು ಶಾಸಕರನ್ನು ಪಕ್ಷದಿಂದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಉಚ್ಛಾಟಿಸಿದ್ದರು. ಅಖಿಲೇಶ್‌ ಅವರನ್ನು ಬಿಎಸ್‌ಪಿ ಶಾಸಕರು ಭೇಟಿ ಮಾಡಿರುವುದು ಮುಂದಿನ ಚುನಾವಣೆಯಲ್ಲಿ ರಾಜಕೀಯ ಮತ ಸಮೀಕರಣಕ್ಕೆ ಎಸ್‌ಪಿ ಪಕ್ಷಕ್ಕೆ ಸಹಕಾರಿಯಾಗಬಹುದು ಎಂದು ಹೇಳಲಾಗುತ್ತಿದೆ. ಈ ಒಂಬತ್ತು ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.

ಶಾಸಕರಾದ ಅಸ್ಲಾಂ ರೈನಿ, ಅಸ್ಲಾಂ ಅಲಿ ಚೌಧರಿ, ಮುಜ್ತಾಬಾ ಸಿದ್ದಿಕಿ, ಹಕೀಮ್ ಲಾಲ್ ಬಿಂದ್, ಹರ್‌ಗೋವಿಂದ್ ಭಾರ್ಗವ್, ಸುಷ್ಮಾ ಪಟೇಲ್, ವಂದನಾ ಸಿಂಗ್, ರಾಮ್‌ವೀರ್ ಉಪಾಧ್ಯಾಯ ಮತ್ತು ಅನಿಲ್ ಸಿಂಗ್ ಅವರನ್ನು ಕಳೆದ ನಾಲ್ಕು ವರ್ಷಗಳಲ್ಲಿ ಬಿಎಸ್‌ಪಿಯಿಂದ ಮಾಯಾವತಿ ಉಚ್ಚಾಟಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ 19 ಸ್ಥಾನಗಳನ್ನು ಗೆದ್ದಿತ್ತು. ನಂತರ ನಡೆದ ಉಪಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡಿತು. ಹೀಗಾಗಿ 18 ಶಾಸಕರನ್ನು ಬಿಎಸ್‌ಪಿ ಹೊಂದಿತ್ತು. 2017ರ ಚುನಾವಣೆಯ ನಂತರ ಇದೂವರೆಗೂ 11 ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದೀಗ ಪಕ್ಷದ ಶಾಸಕರಾಗಿ ಕೇವಲ 07 ಮಂದಿ ಮಾತ್ರ ಉಳಿದಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನರು ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗುತ್ತಿದ್ದಾರೆ. ಏಕೆಂದರೆ ಮಾಯಾವತಿ ಮತ್ತು ಬಿಜೆಪಿಯ ದಬ್ಬಾಳಿಕೆಯ ಸ್ವರೂಪಕ್ಕಿಂತ ಸಮಾಜವಾದಿ ಪಕ್ಷವು ಭಿನ್ನವಾಗಿದೆ. ಬಿಎಸ್‌ಪಿ ಮತ್ತು ಬಿಜೆಪಿ ಶಾಸಕರು ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು ಹೆದರುತ್ತಾರೆ, ಅದಕ್ಕಾಗಿಯೇ ಅವರು ಸಮಾಜವಾದಿ ಪಕ್ಷಕ್ಕೆ ಬರುತ್ತಿದ್ದಾರೆ” ಎಂದು ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹೇಳಿದ್ದಾರೆ.

ಬಿಎಸ್‌ಪಿಯ ಶಾಸಕರ ಸೇರ್ಪಡೆಯಿಂದ ಸಮಾಜವಾದಿ ಪಕ್ಷಕ್ಕೆ ಲಾಭವಾಗಿದೆ. ಕಳೆದ ಎರಡು ವರ್ಷಗಳಲ್ಲಿ, ವಿಶೇಷವಾಗಿ 2019 ರಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಶೋಚನೀಯವಾಗಿ ವಿಫಲವಾದ ನಂತರ, ಹಲವಾರು ಬಿಎಸ್‌ಪಿ ನಾಯಕರು ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...