Homeಮುಖಪುಟಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

- Advertisement -
- Advertisement -

ತನ್ನ ಕರಡು ಜನಸಂಖ್ಯಾ ನಿಯಂತ್ರಣ ಮಸೂದೆಯಿಂದ ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದುಹಾಕುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಸೂಚಿಸಿದೆ. ಇದು ವಿವಿಧ ಸಮುದಾಯಗಳ ನಡುವಿನ ಜನಸಂಖ್ಯೆಯ ಅಸಮತೋಲನ ಮತ್ತು ಕುಗ್ಗುವಿಕೆಯ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ .

ಉತ್ತರ ಪ್ರದೇಶದ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ಯಲ್ಲಿನ ಪೋಷಕರ ಬದಲು ಮಗುವಿಗೆ ನೀಡಲಾಗುವ ಬಹುಮಾನ ಅಥವಾ ಶಿಕ್ಷೆಯ ಅಸಂಗತತೆಯನ್ನು ತೆಗೆದುಹಾಕುವಂತೆ ವಿಹೆಚ್‌ಪಿ ಆದಿತ್ಯನಾಥ್ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

“ಮಸೂದೆಯ ಮುನ್ನುಡಿಯಲ್ಲಿ ಇದು ಜನಸಂಖ್ಯೆಯನ್ನು ಸ್ಥಿರಗೊಳಿಸಲು ಮತ್ತು ಎರಡು ಮಕ್ಕಳ ನೀತಿಯನ್ನು ಉತ್ತೇಜಿಸುವ ಮಸೂದೆ ಎಂದು ಹೇಳುತ್ತದೆ. ವಿಶ್ವ ಹಿಂದೂ ಪರಿಷತ್ ಎರಡೂ ವಿಷಯಗಳನ್ನು ಒಪ್ಪುತ್ತದೆ” ಎಂದು ಸಂಘಟನೆಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಸೋಮವಾರ ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗಕ್ಕೆ (ಯುಪಿಎಸ್‌ಸಿಎಲ್) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆದರೂ, ಮಸೂದೆಯ ಸೆಕ್ಷನ್ 5, 6 (2) ಮತ್ತು 7 ರಲ್ಲಿ ಹೇಳುವ, ಸಾರ್ವಜನಿಕ ನೌಕರರು ಮತ್ತು ಇತರರನ್ನು ತಮ್ಮ ಕುಟುಂಬದಲ್ಲಿ ಒಂದೇ ಮಗುವನ್ನು ಹೊಂದಲು ಪ್ರೇರೇಪಿಸುವ ವಿಷಯವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಒಂದು ಮಗುವಿನ ನೀತಿಯ ಅನಪೇಕ್ಷಿತ ಸಾಮಾಜಿಕ, ಆರ್ಥಿಕ ಪರಿಣಾಮಗಳು ಮತ್ತು ಹೆತ್ತವರ ಬದಲು ಮಗುವಿಗೆ ಬಹುಮಾನ ಅಥವಾ ಶಿಕ್ಷೆ ನೀಡುವ ಅಸಂಗತತೆಯನ್ನು ತೆಗೆದುಹಾಕಲು ನಾವು ಸೂಚಿಸುತ್ತೇವೆ ಎಂದು ಕುಮಾರ್ ಹೇಳಿದ್ದಾರೆ. ಆದರೆ ಜನಸಂಖ್ಯೆಯ ಸ್ಥಿರತೆಯನ್ನು ಸಾಧಿಸಲು ಎರಡು ಮಕ್ಕಳ ನೀತಿಯನ್ನು ನಾವು ಒಪ್ಪುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಉತ್ತರ ಪ್ರದೇಶದ ಒಟ್ಟು ಫಲವತ್ತತೆ ದರವನ್ನು (ಟಿಎಫ್‌ಆರ್) ನಿರ್ದಿಷ್ಟ ಸಮಯದೊಳಗೆ 1.7 ಕ್ಕೆ ಇಳಿಸಲು ಪ್ರಯತ್ನಿಸುವ ಮಸೂದೆಯ ಉದ್ದೇಶವನ್ನು ಮರುಪರಿಶೀಲಿಸುವಂತೆ ವಿಹೆಚ್‌‌ಪಿ ಯುಪಿಎಸ್‌ಸಿಎಲ್‌ಗೆ ಸೂಚಿಸಿದೆ.

ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಕರಡನ್ನು ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ನೀಡುವಂತೆ ಆಹ್ವಾನ ನೀಡಿತ್ತು.

ಪ್ರಸ್ತುತ ಒಂದು ಮಗುವಿನ ನೀತಿಯಿಂದ, ದುಡಿಯುವ ವಯಸ್ಸಿನ ಜನಸಂಖ್ಯೆ ಮತ್ತು ಅವಲಂಬಿತ ಜನಸಂಖ್ಯೆಯ ನಡುವೆ ಅನುಪಾತದಲ್ಲಿ ಏರುಪೇರಾಗುತ್ತದೆ. ಇದು ಇಬ್ಬರು ಪೋಷಕರು ಮತ್ತು ನಾಲ್ಕು ಅಜ್ಜ ಅಜ್ಜಿಯರನ್ನು ನೋಡಿಕೊಳ್ಳಲು ಕೇವಲ ಒಬ್ಬ ದುಡಿಯುವ ವ್ಯಕ್ತಿಯಿರುವಂತಹ ಪರಿಸ್ಥಿತಿಗೆ ತಂದೊಡ್ಡುತ್ತದೆ ಎಂದು ವಿಹೆಚ್‌ಪಿ ಹೇಳಿದೆ.

1980 ರಲ್ಲಿ ಒನ್-ಚೈಲ್ಡ್ ನೀತಿಯನ್ನು ಅಳವಡಿಸಿಕೊಂಡಿದ್ದ ಚೀನಾ ಕೂಡಾ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರಿಂದ ಮೂರು ದಶಕಗಳ ನಂತರ ಈ ನೀತಿಯನ್ನು ಹಿಂತೆಗೆದುಕೊಂಡಿತು ವಿಎಚ್‌ಪಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...