Homeಮುಖಪುಟಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

- Advertisement -
- Advertisement -

ತನ್ನ ಕರಡು ಜನಸಂಖ್ಯಾ ನಿಯಂತ್ರಣ ಮಸೂದೆಯಿಂದ ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದುಹಾಕುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಸೂಚಿಸಿದೆ. ಇದು ವಿವಿಧ ಸಮುದಾಯಗಳ ನಡುವಿನ ಜನಸಂಖ್ಯೆಯ ಅಸಮತೋಲನ ಮತ್ತು ಕುಗ್ಗುವಿಕೆಯ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ .

ಉತ್ತರ ಪ್ರದೇಶದ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ಯಲ್ಲಿನ ಪೋಷಕರ ಬದಲು ಮಗುವಿಗೆ ನೀಡಲಾಗುವ ಬಹುಮಾನ ಅಥವಾ ಶಿಕ್ಷೆಯ ಅಸಂಗತತೆಯನ್ನು ತೆಗೆದುಹಾಕುವಂತೆ ವಿಹೆಚ್‌ಪಿ ಆದಿತ್ಯನಾಥ್ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

“ಮಸೂದೆಯ ಮುನ್ನುಡಿಯಲ್ಲಿ ಇದು ಜನಸಂಖ್ಯೆಯನ್ನು ಸ್ಥಿರಗೊಳಿಸಲು ಮತ್ತು ಎರಡು ಮಕ್ಕಳ ನೀತಿಯನ್ನು ಉತ್ತೇಜಿಸುವ ಮಸೂದೆ ಎಂದು ಹೇಳುತ್ತದೆ. ವಿಶ್ವ ಹಿಂದೂ ಪರಿಷತ್ ಎರಡೂ ವಿಷಯಗಳನ್ನು ಒಪ್ಪುತ್ತದೆ” ಎಂದು ಸಂಘಟನೆಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಸೋಮವಾರ ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗಕ್ಕೆ (ಯುಪಿಎಸ್‌ಸಿಎಲ್) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆದರೂ, ಮಸೂದೆಯ ಸೆಕ್ಷನ್ 5, 6 (2) ಮತ್ತು 7 ರಲ್ಲಿ ಹೇಳುವ, ಸಾರ್ವಜನಿಕ ನೌಕರರು ಮತ್ತು ಇತರರನ್ನು ತಮ್ಮ ಕುಟುಂಬದಲ್ಲಿ ಒಂದೇ ಮಗುವನ್ನು ಹೊಂದಲು ಪ್ರೇರೇಪಿಸುವ ವಿಷಯವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಒಂದು ಮಗುವಿನ ನೀತಿಯ ಅನಪೇಕ್ಷಿತ ಸಾಮಾಜಿಕ, ಆರ್ಥಿಕ ಪರಿಣಾಮಗಳು ಮತ್ತು ಹೆತ್ತವರ ಬದಲು ಮಗುವಿಗೆ ಬಹುಮಾನ ಅಥವಾ ಶಿಕ್ಷೆ ನೀಡುವ ಅಸಂಗತತೆಯನ್ನು ತೆಗೆದುಹಾಕಲು ನಾವು ಸೂಚಿಸುತ್ತೇವೆ ಎಂದು ಕುಮಾರ್ ಹೇಳಿದ್ದಾರೆ. ಆದರೆ ಜನಸಂಖ್ಯೆಯ ಸ್ಥಿರತೆಯನ್ನು ಸಾಧಿಸಲು ಎರಡು ಮಕ್ಕಳ ನೀತಿಯನ್ನು ನಾವು ಒಪ್ಪುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಉತ್ತರ ಪ್ರದೇಶದ ಒಟ್ಟು ಫಲವತ್ತತೆ ದರವನ್ನು (ಟಿಎಫ್‌ಆರ್) ನಿರ್ದಿಷ್ಟ ಸಮಯದೊಳಗೆ 1.7 ಕ್ಕೆ ಇಳಿಸಲು ಪ್ರಯತ್ನಿಸುವ ಮಸೂದೆಯ ಉದ್ದೇಶವನ್ನು ಮರುಪರಿಶೀಲಿಸುವಂತೆ ವಿಹೆಚ್‌‌ಪಿ ಯುಪಿಎಸ್‌ಸಿಎಲ್‌ಗೆ ಸೂಚಿಸಿದೆ.

ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಕರಡನ್ನು ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ನೀಡುವಂತೆ ಆಹ್ವಾನ ನೀಡಿತ್ತು.

ಪ್ರಸ್ತುತ ಒಂದು ಮಗುವಿನ ನೀತಿಯಿಂದ, ದುಡಿಯುವ ವಯಸ್ಸಿನ ಜನಸಂಖ್ಯೆ ಮತ್ತು ಅವಲಂಬಿತ ಜನಸಂಖ್ಯೆಯ ನಡುವೆ ಅನುಪಾತದಲ್ಲಿ ಏರುಪೇರಾಗುತ್ತದೆ. ಇದು ಇಬ್ಬರು ಪೋಷಕರು ಮತ್ತು ನಾಲ್ಕು ಅಜ್ಜ ಅಜ್ಜಿಯರನ್ನು ನೋಡಿಕೊಳ್ಳಲು ಕೇವಲ ಒಬ್ಬ ದುಡಿಯುವ ವ್ಯಕ್ತಿಯಿರುವಂತಹ ಪರಿಸ್ಥಿತಿಗೆ ತಂದೊಡ್ಡುತ್ತದೆ ಎಂದು ವಿಹೆಚ್‌ಪಿ ಹೇಳಿದೆ.

1980 ರಲ್ಲಿ ಒನ್-ಚೈಲ್ಡ್ ನೀತಿಯನ್ನು ಅಳವಡಿಸಿಕೊಂಡಿದ್ದ ಚೀನಾ ಕೂಡಾ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರಿಂದ ಮೂರು ದಶಕಗಳ ನಂತರ ಈ ನೀತಿಯನ್ನು ಹಿಂತೆಗೆದುಕೊಂಡಿತು ವಿಎಚ್‌ಪಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...