Homeಮುಖಪುಟಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

- Advertisement -
- Advertisement -

ತನ್ನ ಕರಡು ಜನಸಂಖ್ಯಾ ನಿಯಂತ್ರಣ ಮಸೂದೆಯಿಂದ ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದುಹಾಕುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಸೂಚಿಸಿದೆ. ಇದು ವಿವಿಧ ಸಮುದಾಯಗಳ ನಡುವಿನ ಜನಸಂಖ್ಯೆಯ ಅಸಮತೋಲನ ಮತ್ತು ಕುಗ್ಗುವಿಕೆಯ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ .

ಉತ್ತರ ಪ್ರದೇಶದ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ಯಲ್ಲಿನ ಪೋಷಕರ ಬದಲು ಮಗುವಿಗೆ ನೀಡಲಾಗುವ ಬಹುಮಾನ ಅಥವಾ ಶಿಕ್ಷೆಯ ಅಸಂಗತತೆಯನ್ನು ತೆಗೆದುಹಾಕುವಂತೆ ವಿಹೆಚ್‌ಪಿ ಆದಿತ್ಯನಾಥ್ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

“ಮಸೂದೆಯ ಮುನ್ನುಡಿಯಲ್ಲಿ ಇದು ಜನಸಂಖ್ಯೆಯನ್ನು ಸ್ಥಿರಗೊಳಿಸಲು ಮತ್ತು ಎರಡು ಮಕ್ಕಳ ನೀತಿಯನ್ನು ಉತ್ತೇಜಿಸುವ ಮಸೂದೆ ಎಂದು ಹೇಳುತ್ತದೆ. ವಿಶ್ವ ಹಿಂದೂ ಪರಿಷತ್ ಎರಡೂ ವಿಷಯಗಳನ್ನು ಒಪ್ಪುತ್ತದೆ” ಎಂದು ಸಂಘಟನೆಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಸೋಮವಾರ ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗಕ್ಕೆ (ಯುಪಿಎಸ್‌ಸಿಎಲ್) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆದರೂ, ಮಸೂದೆಯ ಸೆಕ್ಷನ್ 5, 6 (2) ಮತ್ತು 7 ರಲ್ಲಿ ಹೇಳುವ, ಸಾರ್ವಜನಿಕ ನೌಕರರು ಮತ್ತು ಇತರರನ್ನು ತಮ್ಮ ಕುಟುಂಬದಲ್ಲಿ ಒಂದೇ ಮಗುವನ್ನು ಹೊಂದಲು ಪ್ರೇರೇಪಿಸುವ ವಿಷಯವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಒಂದು ಮಗುವಿನ ನೀತಿಯ ಅನಪೇಕ್ಷಿತ ಸಾಮಾಜಿಕ, ಆರ್ಥಿಕ ಪರಿಣಾಮಗಳು ಮತ್ತು ಹೆತ್ತವರ ಬದಲು ಮಗುವಿಗೆ ಬಹುಮಾನ ಅಥವಾ ಶಿಕ್ಷೆ ನೀಡುವ ಅಸಂಗತತೆಯನ್ನು ತೆಗೆದುಹಾಕಲು ನಾವು ಸೂಚಿಸುತ್ತೇವೆ ಎಂದು ಕುಮಾರ್ ಹೇಳಿದ್ದಾರೆ. ಆದರೆ ಜನಸಂಖ್ಯೆಯ ಸ್ಥಿರತೆಯನ್ನು ಸಾಧಿಸಲು ಎರಡು ಮಕ್ಕಳ ನೀತಿಯನ್ನು ನಾವು ಒಪ್ಪುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಉತ್ತರ ಪ್ರದೇಶದ ಒಟ್ಟು ಫಲವತ್ತತೆ ದರವನ್ನು (ಟಿಎಫ್‌ಆರ್) ನಿರ್ದಿಷ್ಟ ಸಮಯದೊಳಗೆ 1.7 ಕ್ಕೆ ಇಳಿಸಲು ಪ್ರಯತ್ನಿಸುವ ಮಸೂದೆಯ ಉದ್ದೇಶವನ್ನು ಮರುಪರಿಶೀಲಿಸುವಂತೆ ವಿಹೆಚ್‌‌ಪಿ ಯುಪಿಎಸ್‌ಸಿಎಲ್‌ಗೆ ಸೂಚಿಸಿದೆ.

ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಕರಡನ್ನು ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ನೀಡುವಂತೆ ಆಹ್ವಾನ ನೀಡಿತ್ತು.

ಪ್ರಸ್ತುತ ಒಂದು ಮಗುವಿನ ನೀತಿಯಿಂದ, ದುಡಿಯುವ ವಯಸ್ಸಿನ ಜನಸಂಖ್ಯೆ ಮತ್ತು ಅವಲಂಬಿತ ಜನಸಂಖ್ಯೆಯ ನಡುವೆ ಅನುಪಾತದಲ್ಲಿ ಏರುಪೇರಾಗುತ್ತದೆ. ಇದು ಇಬ್ಬರು ಪೋಷಕರು ಮತ್ತು ನಾಲ್ಕು ಅಜ್ಜ ಅಜ್ಜಿಯರನ್ನು ನೋಡಿಕೊಳ್ಳಲು ಕೇವಲ ಒಬ್ಬ ದುಡಿಯುವ ವ್ಯಕ್ತಿಯಿರುವಂತಹ ಪರಿಸ್ಥಿತಿಗೆ ತಂದೊಡ್ಡುತ್ತದೆ ಎಂದು ವಿಹೆಚ್‌ಪಿ ಹೇಳಿದೆ.

1980 ರಲ್ಲಿ ಒನ್-ಚೈಲ್ಡ್ ನೀತಿಯನ್ನು ಅಳವಡಿಸಿಕೊಂಡಿದ್ದ ಚೀನಾ ಕೂಡಾ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರಿಂದ ಮೂರು ದಶಕಗಳ ನಂತರ ಈ ನೀತಿಯನ್ನು ಹಿಂತೆಗೆದುಕೊಂಡಿತು ವಿಎಚ್‌ಪಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...