Homeಮುಖಪುಟಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

- Advertisement -
- Advertisement -

ದೇಶದಲ್ಲೆ ಅತೀ ಹಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಪ್ರಕಟಿಸಿದೆ. ‘‘ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ- 2021” ಕರಡಿನ ಪ್ರಕಾರ, ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದನ್ನು ನಿರ್ಬಂಧಿಸಲಾಗುತ್ತದೆ.

ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ (ಯುಪಿಎಸ್ಎಲ್‌ಸಿ)ದ ವೆಬ್‌ಸೈಟ್‌‌, “ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗ ಜನಸಂಖ್ಯೆಯ ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಕರಡು ಮಸೂದೆಯನ್ನು ಸಿದ್ಧಪಡಿಸಿದೆ” ಎಂದು ಹೇಳಿದೆ.

ಇದನ್ನೂ ಓದಿ: ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

ಎರಡು ಮಕ್ಕಳ ನೀತಿಯನ್ನು ಅಳವಡಿಸಿಕೊಳ್ಳುವವರಿಗೆ ಸರ್ಕಾರವು ಹಲವು ಪ್ರೋತ್ಸಾಹಕಗಳನ್ನೂ ಘೋಷಿಸಿದೆ. ನೀತಿಯನ್ನು ಅನುಸರಿಸುವ ಸರ್ಕಾರಿ ನೌಕರರು ಸಂಪೂರ್ಣ ಸೇವೆಯ ಸಮಯದಲ್ಲಿ ಎರಡು ಹೆಚ್ಚುವರಿ ಇಂಕ್ರಿಮೆಂಟ್‌ಗಳನ್ನು ಪಡೆಯಬಹುದಾಗಿದೆ. ಜಮೀನು ಅಥವಾ ಮನೆಯನ್ನು ಖರೀದಿಸಲು ಸಬ್ಸಿಡಿ ಪಡೆಯಬಹುದಾಗಿದೆ. ಶುಲ್ಕಗಳ ಮೇಲೆ ರಿಯಾಯಿತಿ ಪಡೆಯಬಹುದಾಗಿದೆ.

ಭತ್ಯೆ, ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ನೌಕರರ ಭವಿಷ್ಯ ನಿಧಿಯಲ್ಲಿ (ಇಪಿಎಫ್) ಮೂರು ಶೇಕಡ ಹೆಚ್ಚಳದೊಂದಿಗೆ ಮಾತೃತ್ವ ಅಥವಾ ಪಿತೃತ್ವದ ರಜೆಯನ್ನು 12 ತಿಂಗಳು ಪಡೆಯಬಹುದಾಗಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ಸರ್ಕಾರಿ ಸೇವೆಯಲ್ಲಿಲ್ಲದ ಆದರೆ ಎರಡು ಮಕ್ಕಳ ನೀತಿಯನ್ನು ಅನುಸರಿಸುವವರಿಗೆ ನೀರು ಮತ್ತು ವಿದ್ಯುತ್ ಬಿಲ್‌ಗಳು, ಮನೆ ತೆರಿಗೆ, ಗೃಹ ಸಾಲಗಳ ಮೇಲೆ ರಿಯಾಯಿತಿ ನೀಡಲು ಮಸೂದೆಯು ಪ್ರಸ್ತಾಪಿಸಿದೆ. ಮಹಿಳೆ ಹಾಗೂ ಪುರುಷರಿಬ್ಬರಿಗೂ ಸಂತಾನಹರಣ ಚಿಕಿತ್ಸೆಗೆ ಒಳಗಾಗಲು ಈ ಮಸೂದೆ ಉತ್ತೇಜಿಸುತ್ತದೆ.

ಕಾಯಿದೆಯ ಅನುಷ್ಠಾನದ ಉದ್ದೇಶಕ್ಕಾಗಿ ರಾಜ್ಯ ಜನಸಂಖ್ಯಾ ನಿಧಿಯನ್ನು ರಚಿಸಲಾಗುವುದು ಎಂದು ಸರ್ಕಾರ ಹೇಳಿದೆ. ಸರ್ಕಾರದ ಕರ್ತವ್ಯಗಳನ್ನು ಪಟ್ಟಿ ಮಾಡಿ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತೃತ್ವ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕರಡು ಮಸೂದೆಯಲ್ಲಿ ಹೇಳಲಾಗಿದೆ.

ಕರಡು ಮಸೂದೆಗೆ ಸಾರ್ವಜನಿಕರ ಸಲಹೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆಗಳನ್ನು ನೀಡಲು ಜುಲೈ 19 ಕೊನೆಯ ದಿನವಾಗಿದೆ.

ಇದನ್ನೂ ಓದಿ: ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...