Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಕುಟುಂಬದ ಮದುವೆ ಮೆರವಣಿಗೆಗೆ ಅಡ್ಡಿಪಡಿಸಿ ಹಲ್ಲೆಗೈದ ಪ್ರಬಲ ಜಾತಿ ವ್ಯಕ್ತಿಗಳು

ಉತ್ತರ ಪ್ರದೇಶ: ದಲಿತ ಕುಟುಂಬದ ಮದುವೆ ಮೆರವಣಿಗೆಗೆ ಅಡ್ಡಿಪಡಿಸಿ ಹಲ್ಲೆಗೈದ ಪ್ರಬಲ ಜಾತಿ ವ್ಯಕ್ತಿಗಳು

- Advertisement -
- Advertisement -

ದಲಿತ ಕುಟುಂಬದ ವಿವಾಹ ಮೆರವಣಿಗೆಗೆ ಕೆಲವು ಪ್ರಬಲ ಜಾತಿಯ ವ್ಯಕ್ತಿಗಳು ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಘಟನೆ ಕಳೆದ ಶನಿವಾರ (ಜೂನ್ 21, 2025) ರಾತ್ರಿ ಸಂಭವಿಸಿದೆ. ಗಲಬೆ ಬಳಿಕ ಇಟಾ ಜಿಲ್ಲೆಯ ಅವಘಡ ಪೊಲೀಸ್ ಠಾಣೆ ವ್ಯಾಪ್ತಿಯ ಧಕ್ಪುರ ಗ್ರಾಮವು ಭಾನುವಾರ (ಜೂನ್ 22, 2025) ಉದ್ವಿಗ್ನವಾಗಿತ್ತು. ಪರಿಸ್ಥಿತಿ ನಿಯಂತ್ರಿಸುವಾಗ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ದಲಿತರಿಗೆ ಪ್ರಬಲ ಜಾತಿಯವರಿಂದ ಬೆದರಿಕೆ ಇದ್ದು, ಈ ವಿಚಾರದಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ವಿಗ್ನತೆಯನ್ನು ಶಮನಗೊಳಿಸಲು ಗ್ರಾಮದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಗ್ರಾಮಕ್ಕೆ ಆಗಮಿಸಿದರು.

“ವರನು ಹತ್ರಾಸ್‌ನಿಂದ ತನ್ನ ಸಂಬಂಧೀಕರೊಡನೆ ಧಕ್ಪುರಕ್ಕೆ ಆಗಮಿಸಿದ್ದ. ವಧು ಅದೇ ಹಳ್ಳಿಯವಳಾಗಿದ್ದರಿಂದ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಕ್ಕೆ ಸೇರಿದವಳಾಗಿದ್ದರಿಂದ, ಮದುವೆಗೆ ಗ್ರಾಮದ ಎಲ್ಲ ಸಮುದಾಯಗಳು ಆರ್ಥಿಕವಾಗಿ ಬೆಂಬಲ ನೀಡಿದ್ದವು. ಮದುವೆ ಮೆರವಣಿಗೆ ವಧುವಿನ ಮನೆ ಕಡೆಗೆ ಸಾಗುತ್ತಿದ್ದಾಗ, ಇಡೀ ಗ್ರಾಮದಲ್ಲಿ ಮೆರವಣಿಗೆ ನಡೆಸುವಂತೆ ಸಲಹೆ ನೀಡಿದ್ದಾರೆ. ಆದರೆ, ರಜಪೂತ ಸಮುದಾಯದ ವಸತಿ ಪ್ರದೇಶ ಮುಂದೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು. ಮಾತಿನ ಚಕಮಕಿ ನಡುವೆ ಕೆಲವರು ಪೊಲೀಸರ ಮೇಲೆ ಕಲ್ಲು ಎಸೆದರು, ಇದರಲ್ಲಿ ಕಾನ್‌ಸ್ಟೆಬಲ್ ಗಾಯಗೊಂಡರು. ನಾವು ಎರಡೂ ಕಡೆಯವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ವೀಡಿಯೊ ದೃಶ್ಯಗಳ ಮೂಲಕ ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಆದರೂ, ಮದುವೆ ಶಾಂತಿಯುತವಾಗಿ ನಡೆಯಿತು” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಜ್ಞಾನೇಂದ್ರ ಪ್ರತಾಪ್ ಸಿಂಗ್ ಅವರ ಹೇಳಿಕೆ ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಪ್ರಬಲ ಜಾತಿಯ ಗುಂಪಿನ ಕೆಲವು ವ್ಯಕ್ತಿಗಳು ಮದುವೆ ಮೆರವಣಿಗೆಗೆ ನಡೆಸದಂತೆ ಬಲವಂತವಾಗಿ ಪ್ರಯತ್ನಿಸಿದ್ದಾರೆ, ಅವರ ಬೀದಿಯಲ್ಲಿ ಮೆರವಣಿಗೆ ಹೋಗದಂತೆ ಬೆದರಿಕೆ ಹಾಕಿದ್ದಾರೆ ಎಂದು ದಲಿತ ಸಮುದಾಯಕ್ಕೆ ಸೇರಿದ ಜನರು ಆರೋಪಿಸಿದ್ದಾರೆ.

ನಮಗೆ ಬೆದರಿಕೆ ಹಾಕುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳಬೇಕು; ಭದ್ರತೆ ಒದಗಿಸಬೇಕೆಂದು ಸ್ಥಳೀಯ ದಲಿತರು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...