Homeಮುಖಪುಟಉತ್ತರ ಪ್ರದೇಶ: ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ ಪಿಎಸ್‌ಐ

ಉತ್ತರ ಪ್ರದೇಶ: ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಿ, ಬೆದರಿಕೆ ಹಾಕಿದ ಪಿಎಸ್‌ಐ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಒಬ್ಬರು ಮನೆಗೆ ನುಗ್ಗಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ, ಈ ವಿಷಯವನ್ನು ಬಹಿರಂಗಪಡಿಸಿದರೆ ತಂದೆಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ತಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಸಧ್ಯ ಆರೋಪಿ ಇನ್‍ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ.

ಆರೋಪಿ ಪಿಎಸ್‌ಐ ಸಂದೀಪ್ ಕುಮಾರ್ (34) ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ. ಯುವತಿಯ ಆಕ್ರಂದನ ಕೇಳಿ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಒಟ್ಟುಗೂಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದೀಪ್ ಕುಮಾರ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಅಧಿಕಾರಿ ಒಳ ಉಡುಪಿನಲ್ಲಿರುವ ಹಾಗೂ ಹಗ್ಗದಿಂದ ಕಟ್ಟಿ ಆತನನ್ನು ಗ್ರಾಮಸ್ಥರು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಧಿಕಾರಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಎನ್.ಎನ್. ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ವಿಡಿಯೊಗಳನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರೀತೀಂದರ್ ಸಿಂಗ್, ಆರೋಪಿ ಪಿಎಸ್‍ಐಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಸಧ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 452ರ ಅನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಿಎಸ್‍ಐ ಹಾಗೂ ಒಬ್ಬ ಪೊಲೀಸ್ ಯುವತಿಯ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ನಾವು ವಿಚಾರಣೆಗೆ ಬಂದಿದ್ದಾಗಿ ಹೇಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಈ ಹಿಂದೆ ಕಿರುಕುಳ ನೀಡಿದ ನಿದರ್ಶನಗಳ ಆಧಾರದಲ್ಲಿ ಬಾಗಿಲು ತೆರೆಯಲು ಯುವತಿ ನಿರಾಕರಿಸಿದಳು. ಆಗ ಸಂದೀಪ್ ಛಾವಣಿಯ ಮೂಲಕ ಜಿಗಿದು ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಸ್ಥರು ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಿ, ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಪಟ್ಟು ಹಿಡಿದರು.

ಈ ಬಗ್ಗೆ ಮಾತನಾಡಿದ ಡಿಸಿಪಿ ಸೋನಮ್ ಕುಮಾರ್, ”ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ. ಸಂದೀಪ್ ವಿರುದ್ಧ ಇಲಾಖಾ ತನಿಖೆಗೂ ಆದೇಶ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

”ಗಸ್ತು ತಿರುಗುವ ನೆಪದಲ್ಲಿ ಗ್ರಾಮಕ್ಕೆ ಭೇಟಿ ನೀಡುಯತ್ತಿರುವ ಸಂದೀಪ್, ಎರಡು ತಿಂಗಳಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಇದಕ್ಕೆ ಆಕ್ಷೇಪಿಸಿದಾಗ, ಆಕೆಯ ಮಾವನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ನಾವು ಆತನನ್ನು ಹಿಡಿದಾಗ ಆತ ಪಾನಮತ್ತನಾಗಿದ್ದನು” ಎಂದು ಪಕ್ಕದ ಮನೆಯವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ತಂದೆಯ ಹತ್ಯೆ; ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...