Homeದಲಿತ್ ಫೈಲ್ಸ್ಉತ್ತರ ಪ್ರದೇಶ | ರಾಮ್‌ಲೀಲಾ ಕಾರ್ಯಕ್ರಮದಲ್ಲಿ ಕುರ್ಚಿಯಲ್ಲಿ ಕೂತಿದ್ದಕ್ಕೆ ಪೊಲೀಸರಿಂದ ಥಳಿತ; ಜೀವ ಕಳೆದುಕೊಂಡ ದಲಿತ

ಉತ್ತರ ಪ್ರದೇಶ | ರಾಮ್‌ಲೀಲಾ ಕಾರ್ಯಕ್ರಮದಲ್ಲಿ ಕುರ್ಚಿಯಲ್ಲಿ ಕೂತಿದ್ದಕ್ಕೆ ಪೊಲೀಸರಿಂದ ಥಳಿತ; ಜೀವ ಕಳೆದುಕೊಂಡ ದಲಿತ

- Advertisement -
- Advertisement -

ಸ್ಥಳೀಯವಾಗಿ ನಡೆದ ರಾಮ್‌ಲೀಲಾ ಕಾರ್ಯಕ್ರಮದ ವೇಳೆ ಕುರ್ಚಿಯ ಮೇಲೆ ಕುಳಿತಿದ್ದಕ್ಕಾಗಿ ಕೆಲವು ಪೊಲೀಸರು 48 ವರ್ಷದ ದಲಿತ ವ್ಯಕ್ತಿಗೆ ಥಳಿಸಿ ಅವಮಾನಿಸಿದ್ದು, ಇದರಿಂದ ಆಘಾತಕ್ಕೊಳಗಾದ ವ್ಯಕ್ತಿ ಮನೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ ಜಿಲ್ಲೆಯ ಸೊರೊನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ವ್ಯಕ್ತಿಯನ್ನು ಜಿಲ್ಲೆಯ ಸಲೀಂಪುರದ ನಿವಾಸಿ ರಮೇಶ್ ಚಂದ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೃತರ ಕುಟುಂಬಸ್ಥರು ಹಾಗೂ ದಲಿತ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ಭಾನುವಾರ ರಾತ್ರಿ 9 ಗಂಟೆಗೆ ನೆರೆಯ ರಾಮಲೀಲಾ ಕಾರ್ಯಕ್ರಮಕ್ಕೆ ತೆರಳಿದ್ದ ತಮ್ಮ ಪತಿ ಅಲ್ಲಿನ ಖಾಲಿ ಕುರ್ಚಿಯ ಮೇಲೆ ಕುಳಿತಿದ್ದರು ಎಂದು ಮೃತರ ಪತ್ನಿ ರಾಮ್ ರಾತಿ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ

ಇದನ್ನೂಓದಿ: ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

“ಒಬ್ಬ ದಲಿತನು ಕುರ್ಚಿಯ ಮೇಲೆ ಕುಳಿತಿರುವುದನ್ನು ನೋಡಿ ಸಹಿಸದ ಸಂಘಟಕರು ಅವರನ್ನು ಹೊರಗೆ ಹೋಗುವಂತೆ ಹೇಳಿದ್ದು, ಕಾನ್‌ಸ್ಟೆಬಲ್‌ಗಳಾದ ಬಹದ್ದೂರ್ ಮತ್ತು ವಿಕ್ರಮ್ ಚೌಧರಿ ಅವರನ್ನು ಕುರ್ಚಿಯಿಂದ ನೂಕಿದ್ದಾರೆ” ಎಂದು ಹೇಳಿದ್ದಾರೆ

ಸಂಘಟಕರ ಸೂಚನೆಯ ಮೇರೆಗೆ ಪೊಲೀಸರು ರಮೇಶ್ ಚಂದ್ ಅವರನ್ನು ಕ್ರೂರವಾಗಿ ಥಳಿಸಿದ್ದು, ಅವರ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ಮೃತರ ಪತ್ನಿ ರಾಮ್ ರಾತಿ ದೂರಿನಲ್ಲಿ ತಿಳಿಸಿದ್ದಾರೆ. “ಅವರು ನಂತರ ಅವನ ಕುತ್ತಿಗೆಗೆ ಸುತ್ತಿದ್ದ ಶಾಲನ್ನು ಎಳೆದು, ಅವನನ್ನು ನೆಲದ ಮೇಲೆ ಕೊಡವಿದ್ದಾರೆ. ಅಲ್ಲದೆ ಅವರಿಗೆ ಥಳಿಸಿದ್ದಾರೆ” ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರತಿಭಟನೆ ಹಿನ್ನಲೆ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತ ರಮೇಶ್ ಚಂದ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...