Homeಕರೋನಾ ತಲ್ಲಣಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

ಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

- Advertisement -
- Advertisement -

ಗಂಗಾ ನದಿಯುದ್ದಕ್ಕೂ ಕನಿಷ್ಠ ಎರಡು ಘಾಟ್‌ಗಳಲ್ಲಿ ಶಂಕಿತ ಕೊರೊನಾ ಸೋಂಕಿತರ ಸಮಾಧಿ ಸ್ಥಳಗಳೆಂದು  ಗುರುತಿಸಲು ಬಳಸಿದ್ದ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ಉತ್ತರ ಪ್ರದೇಶದ ಜಿಲ್ಲಾಡಳಿತವು ತೆಗೆದುಹಾಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಭಾನುವಾರ ರಾತ್ರಿ ಪ್ರಯಾಗರಾಜ್‌ನ ಶೃಂಗರ್‌ಪುರ ಘಾಟ್‌ನಲ್ಲಿ ಜೆಸಿಬಿ ಯಂತ್ರಗಳು ಮತ್ತು ಕಾರ್ಮಿಕರನ್ನು, ಸುಮಾರು ಒಂದು ಕಿಲೋಮೀಟರ್ ವಿಸ್ತಾರದಲ್ಲಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆಯಲು ಬಳಸಿಕೊಳ್ಳಲಾಗಿದೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದಾರೆ. ಇದೇ ರೀತಿಯ ಘಟನೆಗಳು ಸೋಮವಾರ ಬೆಳಿಗ್ಗೆ ಮತ್ತೊಂದು ಘಾಟ್‌ನಲ್ಲಿ ನಡೆದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರೆಂದು ಶಂಕಿಸಲಾಗಿರುವ ಅನೇಕ ಮೃತದೇಹಗಳನ್ನು ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿ ಸಮಾಧಿ ಮಾಡಲಾಗಿತ್ತು. ಇಲ್ಲಿನ ಮೃತದೇಹಗಳು ನದಿಯಲ್ಲಿ ತೇಲಿ ಬಿಹಾರದ ಹಳ್ಳಿಗಳಕಡೆಗೂ ಬಮದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.

ಮಳೆಯಿಂದಾಗಿ ಹಲವಾರು ಶವಗಳು ಹೊರಬಂದ ನಂತರ ಶವಗಳನ್ನು ಮುಚ್ಚಲು ತಂಡವನ್ನು ನಿಯೋಜಿಸಿದೆ ಎಂದು ಜಿಲ್ಲಾಡಳಿತ ಹೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನದಿ ತಟಗಳ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾವಾಗಲು ಶುರುವಾದ ಬಳಿಕ ಜಿಲ್ಲಾ ಪ್ರಾಧಿಕಾರ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ತೆಗೆಯಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ಎರಡು ಜೆಸಿಬಿ ಯಂತ್ರಗಳು ಮತ್ತು ಸುಮಾರು ಎರಡು ಡಜನ್ ಕಾರ್ಮಿಕರು ಭಾನುವಾರ ರಾತ್ರಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆದಿದ್ದಾರೆ ಎಂದು ಶ್ರೀಂಗ್‌ವೀರ್‌ಪುರ ಘಾಟ್‌ನ ಅರ್ಚಕರೊಬ್ಬರು ದೈನಿಕ್ ಭಾಸ್ಕರ್‌ಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಟ್ರಾಲಿಯಲ್ಲಿ ತೆಗೆದುಕೊಂಡು ಹೋಗಿ ನಂತರ ಸುಟ್ಟುಹಾಕಲಾಯಿತು ಎಂದು ಅರ್ಚಕರು ತಿಳಿಸಿದ್ದಾರೆ.

ಪ್ರಯಾಗರಾಜ್‌ನ ಫಾಫಾಮೌ ಘಾಟ್‌ನಲ್ಲಿ ಸೋಮವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಸಮಾಧಿ ಮೇಲಿನ ಹೊದಿಕೆಗಳನ್ನು ತೆಗೆದುಹಾಕಲು ನೇಮಿಸಲಾಗಿತ್ತು ಎಂದು ಹಿಂದೂಸ್ತಾನ್ ವರದಿ ಮಾಡಿದೆ. ಗುರುತುಗಳನ್ನು ತೆಗೆದುಹಾಕುವಾಗ ಸ್ಥಳೀಯ ನಾಗರಿಕ ಸಂಸ್ಥೆಯ ವಲಯ ಅಧಿಕಾರಿ ನೀರಜ್ ಸಿಂಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ. ನದಿ ಪಾತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು. ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ಕೋಲುಗಳನ್ನು ತೆಗೆಯಲಾಗಿಲ್ಲ ಎಂದು ಅಧಿಕಾರಿಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...