Homeಕರೋನಾ ತಲ್ಲಣಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

ಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

- Advertisement -
- Advertisement -

ಗಂಗಾ ನದಿಯುದ್ದಕ್ಕೂ ಕನಿಷ್ಠ ಎರಡು ಘಾಟ್‌ಗಳಲ್ಲಿ ಶಂಕಿತ ಕೊರೊನಾ ಸೋಂಕಿತರ ಸಮಾಧಿ ಸ್ಥಳಗಳೆಂದು  ಗುರುತಿಸಲು ಬಳಸಿದ್ದ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ಉತ್ತರ ಪ್ರದೇಶದ ಜಿಲ್ಲಾಡಳಿತವು ತೆಗೆದುಹಾಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಭಾನುವಾರ ರಾತ್ರಿ ಪ್ರಯಾಗರಾಜ್‌ನ ಶೃಂಗರ್‌ಪುರ ಘಾಟ್‌ನಲ್ಲಿ ಜೆಸಿಬಿ ಯಂತ್ರಗಳು ಮತ್ತು ಕಾರ್ಮಿಕರನ್ನು, ಸುಮಾರು ಒಂದು ಕಿಲೋಮೀಟರ್ ವಿಸ್ತಾರದಲ್ಲಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆಯಲು ಬಳಸಿಕೊಳ್ಳಲಾಗಿದೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದಾರೆ. ಇದೇ ರೀತಿಯ ಘಟನೆಗಳು ಸೋಮವಾರ ಬೆಳಿಗ್ಗೆ ಮತ್ತೊಂದು ಘಾಟ್‌ನಲ್ಲಿ ನಡೆದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರೆಂದು ಶಂಕಿಸಲಾಗಿರುವ ಅನೇಕ ಮೃತದೇಹಗಳನ್ನು ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿ ಸಮಾಧಿ ಮಾಡಲಾಗಿತ್ತು. ಇಲ್ಲಿನ ಮೃತದೇಹಗಳು ನದಿಯಲ್ಲಿ ತೇಲಿ ಬಿಹಾರದ ಹಳ್ಳಿಗಳಕಡೆಗೂ ಬಮದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.

ಮಳೆಯಿಂದಾಗಿ ಹಲವಾರು ಶವಗಳು ಹೊರಬಂದ ನಂತರ ಶವಗಳನ್ನು ಮುಚ್ಚಲು ತಂಡವನ್ನು ನಿಯೋಜಿಸಿದೆ ಎಂದು ಜಿಲ್ಲಾಡಳಿತ ಹೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನದಿ ತಟಗಳ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾವಾಗಲು ಶುರುವಾದ ಬಳಿಕ ಜಿಲ್ಲಾ ಪ್ರಾಧಿಕಾರ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ತೆಗೆಯಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ಎರಡು ಜೆಸಿಬಿ ಯಂತ್ರಗಳು ಮತ್ತು ಸುಮಾರು ಎರಡು ಡಜನ್ ಕಾರ್ಮಿಕರು ಭಾನುವಾರ ರಾತ್ರಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆದಿದ್ದಾರೆ ಎಂದು ಶ್ರೀಂಗ್‌ವೀರ್‌ಪುರ ಘಾಟ್‌ನ ಅರ್ಚಕರೊಬ್ಬರು ದೈನಿಕ್ ಭಾಸ್ಕರ್‌ಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಟ್ರಾಲಿಯಲ್ಲಿ ತೆಗೆದುಕೊಂಡು ಹೋಗಿ ನಂತರ ಸುಟ್ಟುಹಾಕಲಾಯಿತು ಎಂದು ಅರ್ಚಕರು ತಿಳಿಸಿದ್ದಾರೆ.

ಪ್ರಯಾಗರಾಜ್‌ನ ಫಾಫಾಮೌ ಘಾಟ್‌ನಲ್ಲಿ ಸೋಮವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಸಮಾಧಿ ಮೇಲಿನ ಹೊದಿಕೆಗಳನ್ನು ತೆಗೆದುಹಾಕಲು ನೇಮಿಸಲಾಗಿತ್ತು ಎಂದು ಹಿಂದೂಸ್ತಾನ್ ವರದಿ ಮಾಡಿದೆ. ಗುರುತುಗಳನ್ನು ತೆಗೆದುಹಾಕುವಾಗ ಸ್ಥಳೀಯ ನಾಗರಿಕ ಸಂಸ್ಥೆಯ ವಲಯ ಅಧಿಕಾರಿ ನೀರಜ್ ಸಿಂಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ. ನದಿ ಪಾತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು. ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ಕೋಲುಗಳನ್ನು ತೆಗೆಯಲಾಗಿಲ್ಲ ಎಂದು ಅಧಿಕಾರಿಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...