Homeಕರೋನಾ ತಲ್ಲಣಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

ಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

- Advertisement -
- Advertisement -

ಗಂಗಾ ನದಿಯುದ್ದಕ್ಕೂ ಕನಿಷ್ಠ ಎರಡು ಘಾಟ್‌ಗಳಲ್ಲಿ ಶಂಕಿತ ಕೊರೊನಾ ಸೋಂಕಿತರ ಸಮಾಧಿ ಸ್ಥಳಗಳೆಂದು  ಗುರುತಿಸಲು ಬಳಸಿದ್ದ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ಉತ್ತರ ಪ್ರದೇಶದ ಜಿಲ್ಲಾಡಳಿತವು ತೆಗೆದುಹಾಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಭಾನುವಾರ ರಾತ್ರಿ ಪ್ರಯಾಗರಾಜ್‌ನ ಶೃಂಗರ್‌ಪುರ ಘಾಟ್‌ನಲ್ಲಿ ಜೆಸಿಬಿ ಯಂತ್ರಗಳು ಮತ್ತು ಕಾರ್ಮಿಕರನ್ನು, ಸುಮಾರು ಒಂದು ಕಿಲೋಮೀಟರ್ ವಿಸ್ತಾರದಲ್ಲಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆಯಲು ಬಳಸಿಕೊಳ್ಳಲಾಗಿದೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದಾರೆ. ಇದೇ ರೀತಿಯ ಘಟನೆಗಳು ಸೋಮವಾರ ಬೆಳಿಗ್ಗೆ ಮತ್ತೊಂದು ಘಾಟ್‌ನಲ್ಲಿ ನಡೆದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರೆಂದು ಶಂಕಿಸಲಾಗಿರುವ ಅನೇಕ ಮೃತದೇಹಗಳನ್ನು ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿ ಸಮಾಧಿ ಮಾಡಲಾಗಿತ್ತು. ಇಲ್ಲಿನ ಮೃತದೇಹಗಳು ನದಿಯಲ್ಲಿ ತೇಲಿ ಬಿಹಾರದ ಹಳ್ಳಿಗಳಕಡೆಗೂ ಬಮದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.

ಮಳೆಯಿಂದಾಗಿ ಹಲವಾರು ಶವಗಳು ಹೊರಬಂದ ನಂತರ ಶವಗಳನ್ನು ಮುಚ್ಚಲು ತಂಡವನ್ನು ನಿಯೋಜಿಸಿದೆ ಎಂದು ಜಿಲ್ಲಾಡಳಿತ ಹೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನದಿ ತಟಗಳ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾವಾಗಲು ಶುರುವಾದ ಬಳಿಕ ಜಿಲ್ಲಾ ಪ್ರಾಧಿಕಾರ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ತೆಗೆಯಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ಎರಡು ಜೆಸಿಬಿ ಯಂತ್ರಗಳು ಮತ್ತು ಸುಮಾರು ಎರಡು ಡಜನ್ ಕಾರ್ಮಿಕರು ಭಾನುವಾರ ರಾತ್ರಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆದಿದ್ದಾರೆ ಎಂದು ಶ್ರೀಂಗ್‌ವೀರ್‌ಪುರ ಘಾಟ್‌ನ ಅರ್ಚಕರೊಬ್ಬರು ದೈನಿಕ್ ಭಾಸ್ಕರ್‌ಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಟ್ರಾಲಿಯಲ್ಲಿ ತೆಗೆದುಕೊಂಡು ಹೋಗಿ ನಂತರ ಸುಟ್ಟುಹಾಕಲಾಯಿತು ಎಂದು ಅರ್ಚಕರು ತಿಳಿಸಿದ್ದಾರೆ.

ಪ್ರಯಾಗರಾಜ್‌ನ ಫಾಫಾಮೌ ಘಾಟ್‌ನಲ್ಲಿ ಸೋಮವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಸಮಾಧಿ ಮೇಲಿನ ಹೊದಿಕೆಗಳನ್ನು ತೆಗೆದುಹಾಕಲು ನೇಮಿಸಲಾಗಿತ್ತು ಎಂದು ಹಿಂದೂಸ್ತಾನ್ ವರದಿ ಮಾಡಿದೆ. ಗುರುತುಗಳನ್ನು ತೆಗೆದುಹಾಕುವಾಗ ಸ್ಥಳೀಯ ನಾಗರಿಕ ಸಂಸ್ಥೆಯ ವಲಯ ಅಧಿಕಾರಿ ನೀರಜ್ ಸಿಂಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ. ನದಿ ಪಾತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು. ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ಕೋಲುಗಳನ್ನು ತೆಗೆಯಲಾಗಿಲ್ಲ ಎಂದು ಅಧಿಕಾರಿಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...