Homeಕರೋನಾ ತಲ್ಲಣಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

ಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

- Advertisement -
- Advertisement -

ಗಂಗಾ ನದಿಯುದ್ದಕ್ಕೂ ಕನಿಷ್ಠ ಎರಡು ಘಾಟ್‌ಗಳಲ್ಲಿ ಶಂಕಿತ ಕೊರೊನಾ ಸೋಂಕಿತರ ಸಮಾಧಿ ಸ್ಥಳಗಳೆಂದು  ಗುರುತಿಸಲು ಬಳಸಿದ್ದ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ಉತ್ತರ ಪ್ರದೇಶದ ಜಿಲ್ಲಾಡಳಿತವು ತೆಗೆದುಹಾಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಭಾನುವಾರ ರಾತ್ರಿ ಪ್ರಯಾಗರಾಜ್‌ನ ಶೃಂಗರ್‌ಪುರ ಘಾಟ್‌ನಲ್ಲಿ ಜೆಸಿಬಿ ಯಂತ್ರಗಳು ಮತ್ತು ಕಾರ್ಮಿಕರನ್ನು, ಸುಮಾರು ಒಂದು ಕಿಲೋಮೀಟರ್ ವಿಸ್ತಾರದಲ್ಲಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆಯಲು ಬಳಸಿಕೊಳ್ಳಲಾಗಿದೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದಾರೆ. ಇದೇ ರೀತಿಯ ಘಟನೆಗಳು ಸೋಮವಾರ ಬೆಳಿಗ್ಗೆ ಮತ್ತೊಂದು ಘಾಟ್‌ನಲ್ಲಿ ನಡೆದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರೆಂದು ಶಂಕಿಸಲಾಗಿರುವ ಅನೇಕ ಮೃತದೇಹಗಳನ್ನು ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿ ಸಮಾಧಿ ಮಾಡಲಾಗಿತ್ತು. ಇಲ್ಲಿನ ಮೃತದೇಹಗಳು ನದಿಯಲ್ಲಿ ತೇಲಿ ಬಿಹಾರದ ಹಳ್ಳಿಗಳಕಡೆಗೂ ಬಮದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.

ಮಳೆಯಿಂದಾಗಿ ಹಲವಾರು ಶವಗಳು ಹೊರಬಂದ ನಂತರ ಶವಗಳನ್ನು ಮುಚ್ಚಲು ತಂಡವನ್ನು ನಿಯೋಜಿಸಿದೆ ಎಂದು ಜಿಲ್ಲಾಡಳಿತ ಹೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನದಿ ತಟಗಳ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾವಾಗಲು ಶುರುವಾದ ಬಳಿಕ ಜಿಲ್ಲಾ ಪ್ರಾಧಿಕಾರ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ತೆಗೆಯಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ಎರಡು ಜೆಸಿಬಿ ಯಂತ್ರಗಳು ಮತ್ತು ಸುಮಾರು ಎರಡು ಡಜನ್ ಕಾರ್ಮಿಕರು ಭಾನುವಾರ ರಾತ್ರಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆದಿದ್ದಾರೆ ಎಂದು ಶ್ರೀಂಗ್‌ವೀರ್‌ಪುರ ಘಾಟ್‌ನ ಅರ್ಚಕರೊಬ್ಬರು ದೈನಿಕ್ ಭಾಸ್ಕರ್‌ಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಟ್ರಾಲಿಯಲ್ಲಿ ತೆಗೆದುಕೊಂಡು ಹೋಗಿ ನಂತರ ಸುಟ್ಟುಹಾಕಲಾಯಿತು ಎಂದು ಅರ್ಚಕರು ತಿಳಿಸಿದ್ದಾರೆ.

ಪ್ರಯಾಗರಾಜ್‌ನ ಫಾಫಾಮೌ ಘಾಟ್‌ನಲ್ಲಿ ಸೋಮವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಸಮಾಧಿ ಮೇಲಿನ ಹೊದಿಕೆಗಳನ್ನು ತೆಗೆದುಹಾಕಲು ನೇಮಿಸಲಾಗಿತ್ತು ಎಂದು ಹಿಂದೂಸ್ತಾನ್ ವರದಿ ಮಾಡಿದೆ. ಗುರುತುಗಳನ್ನು ತೆಗೆದುಹಾಕುವಾಗ ಸ್ಥಳೀಯ ನಾಗರಿಕ ಸಂಸ್ಥೆಯ ವಲಯ ಅಧಿಕಾರಿ ನೀರಜ್ ಸಿಂಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ. ನದಿ ಪಾತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು. ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ಕೋಲುಗಳನ್ನು ತೆಗೆಯಲಾಗಿಲ್ಲ ಎಂದು ಅಧಿಕಾರಿಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...