Homeಕರೋನಾ ತಲ್ಲಣಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

ಗಂಗೆ ತಟದಲ್ಲಿನ ಕೊರೊನಾ ಸೋಂಕಿತರ ಸಮಾಧಿ ಮೇಲಿನ ಬಟ್ಟೆ, ಬಿದಿರು ಕೋಲು ತೆಗೆಸಿದ ಉತ್ತರ ಪ್ರದೇಶ!

- Advertisement -
- Advertisement -

ಗಂಗಾ ನದಿಯುದ್ದಕ್ಕೂ ಕನಿಷ್ಠ ಎರಡು ಘಾಟ್‌ಗಳಲ್ಲಿ ಶಂಕಿತ ಕೊರೊನಾ ಸೋಂಕಿತರ ಸಮಾಧಿ ಸ್ಥಳಗಳೆಂದು  ಗುರುತಿಸಲು ಬಳಸಿದ್ದ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ಉತ್ತರ ಪ್ರದೇಶದ ಜಿಲ್ಲಾಡಳಿತವು ತೆಗೆದುಹಾಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಭಾನುವಾರ ರಾತ್ರಿ ಪ್ರಯಾಗರಾಜ್‌ನ ಶೃಂಗರ್‌ಪುರ ಘಾಟ್‌ನಲ್ಲಿ ಜೆಸಿಬಿ ಯಂತ್ರಗಳು ಮತ್ತು ಕಾರ್ಮಿಕರನ್ನು, ಸುಮಾರು ಒಂದು ಕಿಲೋಮೀಟರ್ ವಿಸ್ತಾರದಲ್ಲಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆಯಲು ಬಳಸಿಕೊಳ್ಳಲಾಗಿದೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದಾರೆ. ಇದೇ ರೀತಿಯ ಘಟನೆಗಳು ಸೋಮವಾರ ಬೆಳಿಗ್ಗೆ ಮತ್ತೊಂದು ಘಾಟ್‌ನಲ್ಲಿ ನಡೆದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರೆಂದು ಶಂಕಿಸಲಾಗಿರುವ ಅನೇಕ ಮೃತದೇಹಗಳನ್ನು ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿ ಸಮಾಧಿ ಮಾಡಲಾಗಿತ್ತು. ಇಲ್ಲಿನ ಮೃತದೇಹಗಳು ನದಿಯಲ್ಲಿ ತೇಲಿ ಬಿಹಾರದ ಹಳ್ಳಿಗಳಕಡೆಗೂ ಬಮದು ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.

ಮಳೆಯಿಂದಾಗಿ ಹಲವಾರು ಶವಗಳು ಹೊರಬಂದ ನಂತರ ಶವಗಳನ್ನು ಮುಚ್ಚಲು ತಂಡವನ್ನು ನಿಯೋಜಿಸಿದೆ ಎಂದು ಜಿಲ್ಲಾಡಳಿತ ಹೇಳಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನದಿ ತಟಗಳ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾವಾಗಲು ಶುರುವಾದ ಬಳಿಕ ಜಿಲ್ಲಾ ಪ್ರಾಧಿಕಾರ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ತೆಗೆಯಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ಎರಡು ಜೆಸಿಬಿ ಯಂತ್ರಗಳು ಮತ್ತು ಸುಮಾರು ಎರಡು ಡಜನ್ ಕಾರ್ಮಿಕರು ಭಾನುವಾರ ರಾತ್ರಿ ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರಿನ ಕೋಲುಗಳನ್ನು ತೆಗೆದಿದ್ದಾರೆ ಎಂದು ಶ್ರೀಂಗ್‌ವೀರ್‌ಪುರ ಘಾಟ್‌ನ ಅರ್ಚಕರೊಬ್ಬರು ದೈನಿಕ್ ಭಾಸ್ಕರ್‌ಗೆ ತಿಳಿಸಿದ್ದಾರೆ. ಮೃತದೇಹಗಳನ್ನು ಟ್ರಾಲಿಯಲ್ಲಿ ತೆಗೆದುಕೊಂಡು ಹೋಗಿ ನಂತರ ಸುಟ್ಟುಹಾಕಲಾಯಿತು ಎಂದು ಅರ್ಚಕರು ತಿಳಿಸಿದ್ದಾರೆ.

ಪ್ರಯಾಗರಾಜ್‌ನ ಫಾಫಾಮೌ ಘಾಟ್‌ನಲ್ಲಿ ಸೋಮವಾರ ಬೆಳಿಗ್ಗೆ 100 ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಸಮಾಧಿ ಮೇಲಿನ ಹೊದಿಕೆಗಳನ್ನು ತೆಗೆದುಹಾಕಲು ನೇಮಿಸಲಾಗಿತ್ತು ಎಂದು ಹಿಂದೂಸ್ತಾನ್ ವರದಿ ಮಾಡಿದೆ. ಗುರುತುಗಳನ್ನು ತೆಗೆದುಹಾಕುವಾಗ ಸ್ಥಳೀಯ ನಾಗರಿಕ ಸಂಸ್ಥೆಯ ವಲಯ ಅಧಿಕಾರಿ ನೀರಜ್ ಸಿಂಗ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಆದರೆ, ಅಂತಹ ಯಾವುದೇ ಘಟನೆ ನಡೆದಿಲ್ಲ. ನದಿ ಪಾತ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿತ್ತು. ಸಮಾಧಿ ಮೇಲಿನ ಬಟ್ಟೆ ಮತ್ತು ಬಿದಿರು ಕೋಲುಗಳನ್ನು ತೆಗೆಯಲಾಗಿಲ್ಲ ಎಂದು ಅಧಿಕಾರಿಗಳು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...