Homeಮುಖಪುಟಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

ಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

- Advertisement -
- Advertisement -
ಕಳೆದ ವಾರ ಉತ್ತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ 9 ಮಂದಿಯನ್ನು ಇಬ್ಬರು ಪೊಲೀಸರು ಅಮಾನವೀಯವಾಗಿ ಹೊಡೆಯುತ್ತಿರುವ ವಿಡಿಯೋವನ್ನು ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಈ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು ಘಟನೆಯನ್ನು ನಿರಾಕರಿಸಿದ್ದರು.
ಈಗ ಈ ಪ್ರಕರಣಕ್ಕೆ ಹೊಸ ರೂಪ ಬಂದಿದ್ದು, ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಚಾರಣೆ ನಡೆಸುತ್ತಿದ್ದೇವೆ. ಅಗತ್ಯವಿದ್ದರೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಹರಾನ್‌ಪುರ್‌ ನಗರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ನಿನ್ನೆಯವರೆಗೂ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವಿಡಿಯೋ ಎಲ್ಲಿಯದು ಎಂದು ಗೊತ್ತಿಲ್ಲ. ಯಾವುದೇ ದೂರುಗಳು ಬಂದರೆ ವಿಚಾರಿಸುತ್ತೇವೆ ಎಂದು ಹೇಳಿದ್ದರು.

ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ನಗರದ ವರಿಷ್ಠಾಧಿಕಾರಿ ವಿಚಾರಣೆ ನಡೆಸುತ್ತಾರೆ” ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ತೋಮರ್ ಅವರನ್ನು NDTV ಉಲ್ಲೇಖಿಸಿದೆ. 

ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಪೊಲೀಸರು “ಗಲಭೆಕೋರರಿಗೆ ರಿಟರ್ನ್ ಗಿಫ್ಟ್‌” ಎಂದು ಬರೆದಿದ್ದರು. ಆದರೆ, ಯಾರೂ ಯಾವುದೇ ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.
ಎನ್‌ಡಿಟಿವಿ ತನಿಖೆ ನಡೆಸಿದ ಒಂದು ದಿನದ ಬಳಿಕ ಹಿರಿಯ ಪೊಲೀಸ್ ಅಧಿಕ್ಷಕ ಆಕಾಶ್ ತೋಮರ್‌ ಅವರ ಹೇಳಿಕೆ ಬಂದಿವೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್‌ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.

 


ಇದನ್ನೂ ಓದಿ: ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...