Homeಮುಖಪುಟಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

ಯುಪಿ ಪೊಲೀಸರಿಂದ ಹಲ್ಲೆ ಕೇಸ್: ನಿನ್ನೆ ನಿರಾಕರಣೆ, ಇಂದು ವಿಚಾರಣೆ ನಡೆಸುತ್ತಿದ್ದೇವೆ ಎಂದ ಪೊಲೀಸರು

- Advertisement -
- Advertisement -
ಕಳೆದ ವಾರ ಉತ್ತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ 9 ಮಂದಿಯನ್ನು ಇಬ್ಬರು ಪೊಲೀಸರು ಅಮಾನವೀಯವಾಗಿ ಹೊಡೆಯುತ್ತಿರುವ ವಿಡಿಯೋವನ್ನು ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ತಮ್ಮ ಟ್ವಿಟ್ಟರ್‌ನಲ್ಲಿ “ಗಲಭೆಕೋರರಿಗೆ ರಿಟರ್ನ್ ಗಿಫ್ಟ್” ಎಂದು ಹಂಚಿಕೊಂಡಿದ್ದರು. ಈ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ ಎಂದು ಪೊಲೀಸರು ಘಟನೆಯನ್ನು ನಿರಾಕರಿಸಿದ್ದರು.
ಈಗ ಈ ಪ್ರಕರಣಕ್ಕೆ ಹೊಸ ರೂಪ ಬಂದಿದ್ದು, ವಿಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ವಿಚಾರಣೆ ನಡೆಸುತ್ತಿದ್ದೇವೆ. ಅಗತ್ಯವಿದ್ದರೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸಹರಾನ್‌ಪುರ್‌ ನಗರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ನಿನ್ನೆಯವರೆಗೂ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವಿಡಿಯೋ ಎಲ್ಲಿಯದು ಎಂದು ಗೊತ್ತಿಲ್ಲ. ಯಾವುದೇ ದೂರುಗಳು ಬಂದರೆ ವಿಚಾರಿಸುತ್ತೇವೆ ಎಂದು ಹೇಳಿದ್ದರು.

ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಕ್ರಮ ತೆಗೆದುಕೊಳ್ಳಲು ನಗರದ ವರಿಷ್ಠಾಧಿಕಾರಿ ವಿಚಾರಣೆ ನಡೆಸುತ್ತಾರೆ” ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ತೋಮರ್ ಅವರನ್ನು NDTV ಉಲ್ಲೇಖಿಸಿದೆ. 

ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕ ಶಲಭ್ ಮಣಿ ತ್ರಿಪಾಠಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಇದರಲ್ಲಿ ಪೊಲೀಸರು “ಗಲಭೆಕೋರರಿಗೆ ರಿಟರ್ನ್ ಗಿಫ್ಟ್‌” ಎಂದು ಬರೆದಿದ್ದರು. ಆದರೆ, ಯಾರೂ ಯಾವುದೇ ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ತನಿಖೆ ನಡೆದಿಲ್ಲ ಎಂದು ರಾಜೇಶ್ ಕುಮಾರ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಇಬ್ಬರು ಪೊಲೀಸರು 9 ಜನರನ್ನು ಲಾಠಿಯಿಂದ ಅಮಾನವೀಯವಾಗಿ, ಮನಬಂದಂತೆ ಥಳಿಸುತ್ತಿದ್ದಾರೆ. ಒಂಬತ್ತು ಮಂದಿ ಕೈ ಮುಗಿದ್ದು ಬೇಡಿಕೊಂಡರು ಬಿಡದೆ ಲಾಠಿಯಿಂದ ಥಳಿಸಲಾಗುತ್ತಿದೆ. ಪೊಲೀಸರ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದರು.
ಎನ್‌ಡಿಟಿವಿ ತನಿಖೆ ನಡೆಸಿದ ಒಂದು ದಿನದ ಬಳಿಕ ಹಿರಿಯ ಪೊಲೀಸ್ ಅಧಿಕ್ಷಕ ಆಕಾಶ್ ತೋಮರ್‌ ಅವರ ಹೇಳಿಕೆ ಬಂದಿವೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಲಾಕಪ್‌ ಡೆತ್‌ಗಳಲ್ಲಿ ಮೊದಲ ಸ್ಥಾನದಲ್ಲಿದೆ.

 


ಇದನ್ನೂ ಓದಿ: ಯುಪಿ ಪೊಲೀಸರಿಂದ ಅಮಾನವೀಯ ಹಲ್ಲೆ : ಮಾಹಿತಿಯಿಲ್ಲ ಎಂದ ಪೊಲೀಸರು, ದೂರು ನೀಡಲು ಹೆದರುತ್ತಿರುವ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...