Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

- Advertisement -
- Advertisement -

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ

ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರ ಪುತ್ರಿ ನೇಹಾ ಶಾ ಅವರು ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅದಾಗ್ಯೂ, ಉಮೇಶ್ ಸಿಂಗ್ ಅವರನ್ನು ಸೋನ್‌ಭದ್ರ ಜಿಲ್ಲಾ ಜೈಲಿಗೆ ವರ್ಗಾಯಿಸಲಾಗಿದ್ದು, ಅವರ ಬದಲಿಗೆ ಸೌರಭ್ ಶ್ರೀವಾಸ್ತವ ಅವರನ್ನು ತಾತ್ಕಾಲಿಕವಾಗಿ ವಿಶೇಷ ಕರ್ತವ್ಯದ ಮೇಲೆ ವಾರಣಾಸಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರು ಉಮೇಶ್ ಸಿಂಗ್ ವಿರುದ್ಧ ಕಿರುಕುಳ ಆರೋಪ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ವಿಷಯವು ಗಮನ ಸೆಳೆಯಿತು. ವಿಡಿಯೋ ಕಾಣಿಸಿಕೊಂಡ ನಂತರ, ಅವರನ್ನು ಕೂಡಾ ನೈನಿ ಜಿಲ್ಲಾ ಜೈಲಿಗೆ ವರ್ಗಾಯಿಸಲಾಯಿತು ಎಂದು ವರದಿಯಾಗಿದೆ.

ಮಾರ್ಚ್ 18 ರಂದು ಡೈರೆಕ್ಟರ್ ಜನರಲ್ (ಜೈಲು) ಪಿವಿ ರಾಮಶಾಸ್ತ್ರಿ ಹೊರಡಿಸಿದ ಆದೇಶದ ಪ್ರಕಾರ, ಉಮೇಶ್ ಸಿಂಗ್ ಅವರನ್ನು ಯಾವುದೇ ಹೆಚ್ಚುವರಿ ಸಂಬಳ ಅಥವಾ ಭತ್ಯೆಗಳಿಲ್ಲದೆ ಸೋನ್‌ಭದ್ರದಲ್ಲಿ ವಿಶೇಷ ಕರ್ತವ್ಯದಲ್ಲಿ ಇರಿಸಲಾಗಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೇಹಾ ಶಾ ಅವರ ತಾಯಿ, ಪರಿಶಿಷ್ಟ ಜಾತಿಯ ಅಧಿಕಾರಿಯಾಗಿದ್ದು, ಉಮೇಶ್ ಸಿಂಗ್ ಅವರಿಂದ ತಿಂಗಳುಗಟ್ಟಲೆ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸಿದ್ದಾರೆ ಎಂದು ನೇಹಾ ಶಾ ಅವರ ದೂರಿನಲ್ಲಿ ಆರೋಪಿಸಲಾಗಿದೆ.

“ಅವರು ನನ್ನ ತಾಯಿಯನ್ನು ಆಗಾಗ್ಗೆ ಅವಮಾನಿಸುತ್ತಿದ್ದರು, ಜಾತಿ ಆಧಾರಿತ ನಿಂದನೆಗಳನ್ನು ಬಳಸುತ್ತಿದ್ದರು ಮತ್ತು ಅವರ ಕಚೇರಿಯಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಉಮೇಶ್ ಸಿಂಗ್ ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ನನ್ನ ತಾಯಿಯನ್ನು ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡುವಂತೆ ಒತ್ತಡ ಹೇರಿದ್ದರು, ಜೊತೆಗೆ ಮಹಿಳಾ ಕೈದಿಗಳನ್ನು ಶೋಷಣೆಗೆ ಒಳಪಡಿಸುವಂತೆ ಒತ್ತಾಯಿಸಿದ್ದರು” ಎಂದು ನೇಹಾ ಅವರು ಆರೋಪಿಸಿದ್ದಾರೆ.

“ಇದನ್ನು ನನ್ನ ತಾಯಿ ವಿರೋಧಿಸಿದಾಗ, ಅವರು ನನ್ನ ತಾಯಿಯ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ, ನಮ್ಮ ಕುಟುಂಬಕ್ಕೆ ಹಾನಿ ಮಾಡುವುದಾಗಿ ಮತ್ತು ನಮ್ಮ ಜೀವವನ್ನು ಸಹ ತೆಗೆಯುವುದಾಗಿ ಬೆದರಿಕೆ ಹಾಕಿದರು” ಎಂದು ಅವರು ಆರೋಪಿಸಿದ್ದಾರೆ.

ಆರೋಪಿ ಉಮೇಶ್ ಸಿಂಗ್ ಈ ಹಿಂದೆ ಕೂಡಾ ದುಷ್ಕೃತ್ಯ ಎಸಗಿದ್ದಾರೆ ಎಂದು ನೇಹಾ ಅವರು ಹೇಳಿಕೊಂಡಿದ್ದಾರೆ. “ಅವರು ಮಾಜಿ ಉಪ ಜೈಲರ್ ರತನ್ ಪ್ರಿಯಾ ಅವರೊಂದಿಗೂ ಕೂಡಾ ಅದೇ ರೀತಿ ಮಾಡಿದ್ದರು. ಈ ಬಗ್ಗೆ ನೀವು ಅವರನ್ನು ಕೇಳಬಹುದು” ಎಂದು ಅವರು ತಮ್ಮ ದೂರಿನಲ್ಲಿ ಬರೆದಿದ್ದಾರೆ. ಅಷ್ಟೆ ಅಲ್ಲದೆ, ಉಮೇರ್ಶ ಸಿಂಗ್ ತನ್ನ ತಾಯಿಯನ್ನು ಆತ್ಮಹತ್ಯೆಗೆ ಪ್ರೇರೇಪಿಸಲು ಪ್ರಯತ್ನಿಸಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ತಾನು 2027 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ, ಜೈಲು ಸಚಿವರಾಗುವುದಾಗಿ ನನ್ನ ತಾಯಿಗೆ ಪಾಠ ಕಲಿಸುವುದಾಗಿ ಹೇಳಿದ್ದರು. ಉಮೇಶ್ ಸಿಂಗ್ ಜೈಲಿನೊಳಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮತ್ತು ಮಾದಕವಸ್ತು ಕಳ್ಳಸಾಗಣೆ ನಡೆಯಲು ಅವಕಾಶ ನೀಡಿದ್ದಾರೆ. ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ ಜೈಲಿನಲ್ಲಿ ಮಾದಕವಸ್ತು ಮಾರಾಟವಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...