Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

- Advertisement -
- Advertisement -

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ

ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರ ಪುತ್ರಿ ನೇಹಾ ಶಾ ಅವರು ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅದಾಗ್ಯೂ, ಉಮೇಶ್ ಸಿಂಗ್ ಅವರನ್ನು ಸೋನ್‌ಭದ್ರ ಜಿಲ್ಲಾ ಜೈಲಿಗೆ ವರ್ಗಾಯಿಸಲಾಗಿದ್ದು, ಅವರ ಬದಲಿಗೆ ಸೌರಭ್ ಶ್ರೀವಾಸ್ತವ ಅವರನ್ನು ತಾತ್ಕಾಲಿಕವಾಗಿ ವಿಶೇಷ ಕರ್ತವ್ಯದ ಮೇಲೆ ವಾರಣಾಸಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರು ಉಮೇಶ್ ಸಿಂಗ್ ವಿರುದ್ಧ ಕಿರುಕುಳ ಆರೋಪ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ವಿಷಯವು ಗಮನ ಸೆಳೆಯಿತು. ವಿಡಿಯೋ ಕಾಣಿಸಿಕೊಂಡ ನಂತರ, ಅವರನ್ನು ಕೂಡಾ ನೈನಿ ಜಿಲ್ಲಾ ಜೈಲಿಗೆ ವರ್ಗಾಯಿಸಲಾಯಿತು ಎಂದು ವರದಿಯಾಗಿದೆ.

ಮಾರ್ಚ್ 18 ರಂದು ಡೈರೆಕ್ಟರ್ ಜನರಲ್ (ಜೈಲು) ಪಿವಿ ರಾಮಶಾಸ್ತ್ರಿ ಹೊರಡಿಸಿದ ಆದೇಶದ ಪ್ರಕಾರ, ಉಮೇಶ್ ಸಿಂಗ್ ಅವರನ್ನು ಯಾವುದೇ ಹೆಚ್ಚುವರಿ ಸಂಬಳ ಅಥವಾ ಭತ್ಯೆಗಳಿಲ್ಲದೆ ಸೋನ್‌ಭದ್ರದಲ್ಲಿ ವಿಶೇಷ ಕರ್ತವ್ಯದಲ್ಲಿ ಇರಿಸಲಾಗಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೇಹಾ ಶಾ ಅವರ ತಾಯಿ, ಪರಿಶಿಷ್ಟ ಜಾತಿಯ ಅಧಿಕಾರಿಯಾಗಿದ್ದು, ಉಮೇಶ್ ಸಿಂಗ್ ಅವರಿಂದ ತಿಂಗಳುಗಟ್ಟಲೆ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸಿದ್ದಾರೆ ಎಂದು ನೇಹಾ ಶಾ ಅವರ ದೂರಿನಲ್ಲಿ ಆರೋಪಿಸಲಾಗಿದೆ.

“ಅವರು ನನ್ನ ತಾಯಿಯನ್ನು ಆಗಾಗ್ಗೆ ಅವಮಾನಿಸುತ್ತಿದ್ದರು, ಜಾತಿ ಆಧಾರಿತ ನಿಂದನೆಗಳನ್ನು ಬಳಸುತ್ತಿದ್ದರು ಮತ್ತು ಅವರ ಕಚೇರಿಯಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಉಮೇಶ್ ಸಿಂಗ್ ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ನನ್ನ ತಾಯಿಯನ್ನು ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡುವಂತೆ ಒತ್ತಡ ಹೇರಿದ್ದರು, ಜೊತೆಗೆ ಮಹಿಳಾ ಕೈದಿಗಳನ್ನು ಶೋಷಣೆಗೆ ಒಳಪಡಿಸುವಂತೆ ಒತ್ತಾಯಿಸಿದ್ದರು” ಎಂದು ನೇಹಾ ಅವರು ಆರೋಪಿಸಿದ್ದಾರೆ.

“ಇದನ್ನು ನನ್ನ ತಾಯಿ ವಿರೋಧಿಸಿದಾಗ, ಅವರು ನನ್ನ ತಾಯಿಯ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ, ನಮ್ಮ ಕುಟುಂಬಕ್ಕೆ ಹಾನಿ ಮಾಡುವುದಾಗಿ ಮತ್ತು ನಮ್ಮ ಜೀವವನ್ನು ಸಹ ತೆಗೆಯುವುದಾಗಿ ಬೆದರಿಕೆ ಹಾಕಿದರು” ಎಂದು ಅವರು ಆರೋಪಿಸಿದ್ದಾರೆ.

ಆರೋಪಿ ಉಮೇಶ್ ಸಿಂಗ್ ಈ ಹಿಂದೆ ಕೂಡಾ ದುಷ್ಕೃತ್ಯ ಎಸಗಿದ್ದಾರೆ ಎಂದು ನೇಹಾ ಅವರು ಹೇಳಿಕೊಂಡಿದ್ದಾರೆ. “ಅವರು ಮಾಜಿ ಉಪ ಜೈಲರ್ ರತನ್ ಪ್ರಿಯಾ ಅವರೊಂದಿಗೂ ಕೂಡಾ ಅದೇ ರೀತಿ ಮಾಡಿದ್ದರು. ಈ ಬಗ್ಗೆ ನೀವು ಅವರನ್ನು ಕೇಳಬಹುದು” ಎಂದು ಅವರು ತಮ್ಮ ದೂರಿನಲ್ಲಿ ಬರೆದಿದ್ದಾರೆ. ಅಷ್ಟೆ ಅಲ್ಲದೆ, ಉಮೇರ್ಶ ಸಿಂಗ್ ತನ್ನ ತಾಯಿಯನ್ನು ಆತ್ಮಹತ್ಯೆಗೆ ಪ್ರೇರೇಪಿಸಲು ಪ್ರಯತ್ನಿಸಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ತಾನು 2027 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ, ಜೈಲು ಸಚಿವರಾಗುವುದಾಗಿ ನನ್ನ ತಾಯಿಗೆ ಪಾಠ ಕಲಿಸುವುದಾಗಿ ಹೇಳಿದ್ದರು. ಉಮೇಶ್ ಸಿಂಗ್ ಜೈಲಿನೊಳಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮತ್ತು ಮಾದಕವಸ್ತು ಕಳ್ಳಸಾಗಣೆ ನಡೆಯಲು ಅವಕಾಶ ನೀಡಿದ್ದಾರೆ. ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ ಜೈಲಿನಲ್ಲಿ ಮಾದಕವಸ್ತು ಮಾರಾಟವಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...